ಟಿ.ಎಂ.ಎಸ್.ಗೆ ೭.೭ ಕೋಟಿ ನಿವ್ವಳ ಲಾಭ

ಸಿದ್ಧಾಪುರ,ಶಿರಸಿ,ತಾಲೂಕುಗಳಲ್ಲಿ ವ್ಯಹಾರ ನಡೆಸುವ ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರ ಮಾರಾಟ ಸಂಘ ಈ ವರ್ಷ ೭ಕೋಟಿ ೭೯ ಲಕ್ಷ೧೨ ಸಾವಿರದ೫೫೮ ರೂಪಾಯಿ ನಿವ್ವಳ ಲಾಭ ಗಳಿಸಿದೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಟಿ.ಎಂ.ಎಸ್.‌ ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ ಸಂಸ್ಥೆಯು ೭೫ ವರ್ಷಗಳನ್ನು ಪೂರೈಸಿದ್ದು ಸಂಘದ ೩೫೪೪ ಶೇರುದಾರ ಸದಸ್ಯರು ಮತ್ತು ೩೯೦೦ ನಾಮಮಾತ್ರ ಸದಸ್ಯರ ವ್ಯವಹಾರದಿಂದ ಈ ಪ್ರಗತಿ ಸಾಧ್ಯವಾಗಿದೆ ಎಂದರು.

ಆ.೨೩ ರ ಮಂಗಳವಾರ ಶಿರಸಿಯಲ್ಲಿ,೨೪ ರ ಬುಧವಾರ ಕಾನಸೂರಿನಲ್ಲಿ ೨೬ ರ ಶನಿವಾರ ಸಿದ್ಧಾಪುರದಲ್ಲಿ ವಾರ್ಷಿಕ ಸರ್ವಸಾಧಾರಣ ಸಭೆಗಳು ನಡೆಯಲಿವೆ. ಇದರ ಅಂಗವಾಗಿ ಸಿದ್ಧಾಪುರದ ಸಭೆಯ ನಂತರ ಚಕ್ರಚಂ ಡಿಕೆ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.

ಟಿ.ಎಂ.ಎಸ್.‌ ನೀಡಿರುವ ಮಾಧ್ಯಮ ಪ್ರಕಟಣೆ ಹೀಗಿದೆ.

ಸಿದ್ದಾಪುರ ತಾಲೂಕಿನ ಅಡಿಕೆ ವಹಿವಾಟಿನ ಹೆಮ್ಮೆಯ ಸಹಕಾರಿ ಸಂಸ್ಥೆಯಲ್ಲೊಂದಾದ ನಮ್ಮ ಸಂಘವು ೨೦೨೧-೨೨ ಸಾಲಿನಲ್ಲಿ ರೂ.೭,೭೯,೧೨,೫೫೮.೧೦ ನಿವ್ವಳ ಲಾಭ ಗಳಿಸಿದ್ದು, ನಿಧಿಗಳನ್ನು ತೆಗೆದಿರಿಸಿದ ನಂತರದಲ್ಲಿ ರೂ. ೫,೮೮,೨೨,೦೬೮.೩೮ ರಷ್ಟು ನಿಕ್ಕಿ ಲಾಭ ಗಳಿಸಿರುತ್ತದೆ. ೧೯೪೭ ರ ಸ್ವಾತಂತ್ರö್ಯ ಸಂಭ್ರಮದ ಕಾಲದಲ್ಲಿ ಸ್ಥಾಪಿಸಲ್ಪಟ್ಟ ನಮ್ಮ ಸಂಸ್ಥೆಯು ೭೫ ಸಾರ್ಥಕ ವಸಂತಗಳನ್ನು ಪೂರೈಸುತ್ತಿದೆ. ಈ ೭೫ ವರ್ಷಗಳ ಪಯಣದಲ್ಲಿ ಹಲವಾರು ಏಳು-ಬೀಳುಗಳನ್ನು ಕಂಡ ಸಂಘವು, ಇಂದು ಸದೃಢವಾಗಿದೆ. ಸಂಘದ ನಿಷ್ಠಾವಂತ ಹಾಗೂ ಅಭಿಮಾನಿ ಸದಸ್ಯರ ಸಂಪೂರ್ಣ ಸಹಕಾರ, ಅನುಭವಿ ಆಡಳಿತ ಮಂಡಳಿಯ ಸದಸ್ಯರ ಮಾರ್ಗದರ್ಶನ ಹಾಗೂ ಸೇವಾ ಮನೋಭಾವ ಹಾಗೂ ಕರ್ತವ್ಯನಿಷ್ಠೆಯ ಸಿಬ್ಬಂದಿಗಳ ಕಾಯಕದಿಂದ ಸಂಘವು ಉತ್ತಮ ಲಾಭಗಳಿಸಿ ಅಭಿವೃದ್ದಿ ಪಥದಲ್ಲಿ ಮುನ್ನಡೆಯುತ್ತಿದೆ.
ಪ್ರಸ್ತುತ ಸಂಘದಲ್ಲಿ ೩೫೪೪ ಶೇರುದಾರ ಸದಸ್ಯರಿದ್ದು, ೩.೨೪ ಕೋಟಿ ಶೇರು ಬಂಡವಾಳ ಹೊಂದಿರುತ್ತದೆ. ಸುಮಾರು ೩೯೦೦ ನಾಮಮಾತ್ರ ಸದಸ್ಯರಿದ್ದು, ೨೦೨೧-೨೨ನೇ ಸಾಲಿನಲ್ಲಿ ರೂ ೧೯೭ ಕೋಟಿ ವಹಿವಾಟು ನಡೆಸಲಾಗಿದೆ. ಸಂಚಿತ ನಿಧಿಗಳ ಮೊತ್ತ ರೂ. ೪೩.೪೮ ಕೋಟಿಯಷ್ಟಿದೆ. ರೂ. ೮೯.೩೨ ಕೋಟಿ ಠೇವುಗಳನ್ನು ಸಂಗ್ರಹಿದ್ದು, ದುಡಿಯುವ ಬಂಡವಾಳವು ರೂ ೨೦೦.೬೬ ಕೋಟಿ ತಲುಪಿರುತ್ತದೆ. ವಿಕ್ರಿಯಿಸಿದ ಮಹಸೂಲು ರೂ. ೧೮೨.೧೦ ಕೋಟಿಯಾಗಿದ್ದು, ವರದಿಯ ವರ್ಷದಲ್ಲಿ ಕೇಂದ್ರ ಕಚೇರಿಯಲ್ಲಿ ರೂ. ೩.೫೭ ಕೋಟಿ, ಕಾನಸೂರ ಶಾಖೆಯಲ್ಲಿ ೧.೩೬ ಕೋಟಿ, ಮಾರಾಟ ಮಳಿಗೆ ಶಿರಸಿಯಲ್ಲಿ ರೂ. ೭೦.೦೨ ಲಕ್ಷ, ಕೃಷಿ ವಿಭಾಗದಲ್ಲಿ ರೂ.೧೫.೧೯ ಲಕ್ಷ, ದವಸಧಾನ್ಯ ವಿಭಾಗದಲ್ಲಿ ರೂ.೧೩.೬೪ ಲಕ್ಷ, ನಿಯಂತ್ರಣ ವಿಭಾಗದಲ್ಲಿ ರೂ.೩.೬೨ ಲಕ್ಷ, ದವಸಧಾನ್ಯ ಎಪಿಎಮ್‌ಸಿ ವಿಭಾಗದಲ್ಲಿರೂ ೧೯.೯೬ ಸಾವಿರ ಲಾಭಗಳಿಸಿದ್ದು, ಔಷಧಿ ವಿಭಾಗದಲ್ಲಿ ರೂ.೧.೨೧ ಲಕ್ಷ, ಅಡಿಕೆ ಖರೀದಿ ವಿಭಾಗದಲ್ಲಿರೂ ೩.೫೬ ಲಕ್ಷ ಹಾಗೂ ಅಕ್ಕಿ ಗಿರಣಿ ವಿಭಾಗದಲ್ಲಿ ರೂ.೨.೮೯ ಲಕ್ಷ ಹಾನಿ ಅನುಭವಿಸಿದ್ದು, ಒಟ್ಟಾರೆ ರೂ. ೫.೮೮ ಕೋಟಿ ನಿಕ್ಕಿ ಲಾಭಗಳಿಸಿರುತ್ತದೆ.
ರೈತರ ಅನುಕೂಲಕ್ಕಾಗಿ ಸಂಘವು ಕೇಂದ್ರ ಕಚೇರಿಯಲ್ಲಿ ವಿಶಾಲವಾದ ವ್ಯಾಪಾರಂಗಣವನ್ನು ನಿರ್ಮಿಸಲಾಗಿದೆ. ಕಾನಸೂರ ಶಾಖೆಯಲ್ಲ್ಲಿ ಗೋದಾಮು ಹಾಗೂ ವ್ಯಾಪಾರಂಗಣದ ಕಾಮಗಾರಿಯು , ಅಕ್ಕಿಗಿರಣಿಯಲ್ಲಿ ಭತ್ತದ ಚೀಲವನ್ನು ದಾಸ್ತಾನಿಡಲು ಗೋದಾಮು ಕಾಮಗಾರಿಯು ಮುಕ್ತಾಯದ ಹಂತದಲ್ಲಿದೆ. ಕೇಂದ್ರ ಕಚೇರಿಯಲ್ಲಿ ವಾಹನ ಶೆಡ್ ಹಾಗೂ ಕಾಂಪೌAಡ್ ನಿರ್ಮಾಣ ಮಾಡಲಾಗಿದೆ. “ಕಟ್ಟಡ ನಿರ್ಮಾಣ ಸಾಮಗ್ರಿಗಳ ವಿಭಾಗವನ್ನು” ಕಿರಾಣಿ ಎ.ಪಿ.ಎಂ.ಸಿ ಯಾರ್ಡನ ಹಿಂದೆ ನಿರ್ಮಿಸಲಾಗಿದ್ದು, ಶೀಘ್ರದಲ್ಲಿಯೇ ಆರಂಭವಾಗಲಿದೆ. ಕೇಂದ್ರಕಛೇರಿ ಹಾಗೂ ಕಾನಸೂರ ಶಾಖೆಯಲ್ಲಿ ಹಸಿ ಅಡಿಕೆ ಟೆಂಡರ್ ಮುಖಾಂತರ ಕೂಲಿಕಾರರ ಅಭಾವದಿಂದ ಆಗುವ ಸಮಸ್ಯೆಗಳನ್ನು ತಪ್ಪಿಸಲು ಪ್ರಯತ್ನಿಸಲಾಗಿದೆ. ಹಾಗೂ ಜನರಿಗೂ ಇದರಿಂದ ಉತ್ತಮ ದರಗಳು ಲಭಿಸುತ್ತಿದೆ. ಸದರಿ ಆರ್ಥಿಕ ವರ್ಷದಲ್ಲಿ ಸಂಘವು “ಸದಸ್ಯರ ಕ್ಷೇಮ ನಿಧಿ ಯೋಜನೆ” ಅಡಿಯಲ್ಲಿ ಸದಸ್ಯರ ಆರೋಗ್ಯ ವೆಚ್ಚವನ್ನು ಯೋಜನೆಯ ನಿಬಂಧನೆಗೊಳಪಟ್ಟು ಭರಣ ಮಾಡಿಕೊಟ್ಟಿದೆ. ಟೆಲಿಗ್ರಾಂ ಮೂಲಕ ಸದಸ್ಯರ ಖಾತೆ ಮಾಹಿತಿ ಹಾಗೂ ಅಡಕೆ ದರಗಳ ಮಾಹಿತಿಯನ್ನು ಸಂದೇಶಗಳ ಮೂಲಕ ತಲುಪಿಸುತ್ತಿದೆ. ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಪರಿಕಲ್ಪನೆಯೊಂದಿಗೆ ನೂತನವಾಗಿ ‘’ಟಿ.ಎಮ್.ಎಸ್ ವ್ಯಾಲೇಟ್’’ ನ್ನು ಪರಿಚಯಿಸಲಾಗುತ್ತಿದೆ. ಸದಸ್ಯರ ಮಹಸೂಲ ವಿಕ್ರಿಯ ಮೇಲೆ ಪ್ರತಿ ಕ್ವಿಂಟಲ್ ಗೆ ಹಮಾಲಿ, ಸಾಗಾಣಿಕಾ ವೆಚ್ಚ ಸಹಿತ ರೂ. ೫೦ /- ವಿಕ್ರಿ ಪ್ರೋತ್ಸಾಹನವನ್ನು ನೀಡಲಾಗುತ್ತಿದೆ. ಬ್ರಾಡ್ ವೇ ಕಂಪನಿಯ ಸಹಯೋಗದೊಂದಿಗೆ ಸದಸ್ಯರಿಗೆ ಇಂಟರ್-ನೆಟ್ ಸೇವೆಯನ್ನು ಅತ್ಯಂತ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ.
ಉತ್ತಮ ವ್ಯಾವಹಾರಿಕ ಪೈಪೋಟಿಯನ್ನು ಎದುರಿಸಲು ಸಂಘವು ಇನ್ನೂ ಹಲವು ಯೋಜನೆಗಳನ್ನು ರೂಪಿಸುತ್ತಿದ್ದು, ಸದಸ್ಯರ ಅನುಕೂಲಕ್ಕಾಗಿ ಶೀಘ್ರದಲ್ಲಿಯೇ ಸೇವಾ ವಿಭಾಗವನ್ನು (ಕರೆನ್ಸಿ, ರಿಚಾರ್ಜ, ಟಿಕೇಟ್ ಬುಕ್ಕಿಂಗ್ ಹಾಗೂ ಇನ್ನಿತರ ಸೇವೆ )ಆರಂಭಿಸಲಾಗುತ್ತಿದೆ. ಕಿರಾಣಿ ಎಪಿಎಮ್‌ಸಿ ವಿಭಾಗದ ಎದರುಗಡೆ ಹಣ್ಣು ಮತ್ತು ತರಕಾರಿ ಮಾರಾಟವನ್ನು ಪ್ರಾರಂಭಿಸಲಾಗುತ್ತಿದೆ. ಸಂಘದ ವತಿಯಿಂದ ಪೆಟ್ರೋಲ್ ಬಂಕ್ ಆರಂಭಿಸುವ ಉದ್ದೇಶದಿಂದ ನಿವೇಶನವನ್ನು ಖರೀದಿಸಲಾಗಿದೆ.
ಕೆಲವು ಆಯ್ದ ಹಿರಿಯ ಸದಸ್ಯರನ್ನು, ಹಾಗೂ ಎಸ್.ಎಸ್.ಎಲ್.ಸಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸಹಕಾರಿ ಸಭೆ ಹಾಗೂ ಸರ್ವ ಸಾಧಾರಣ ಸಭೆಯ ದಿನದಂದು ಸನ್ಮಾನಿಸಲಾಗುತ್ತಿದೆೆ. ಸದಸ್ಯರಿಗೆ ಎಲ್ಲಾ ಅಗತ್ಯತೆಗಳನ್ನು ಪೂರೈಸುವ ಯೋಜನೆ ಯೋಚನೆಯಲ್ಲಿದೆ. ಯಾವತ್ತೂ ಕೃಷಿ ಹುಟ್ಟುವಳಿಗಳನ್ನು ಸಂಘದ ಮುಖಾಂತರವೇ ವಿಕ್ರಿಸಲು ಹಾಗೂ ಸಂಘದಲ್ಲಿ ಲಭ್ಯವಿರುವ ಕಿರಾಣಿ ಜೀನಸುಗಳು, ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ, ಕೃಷಿ ಉಪಕರಣಗಳು, ಜನೌಷಧಗಳು ಮತ್ತು ಇನ್ನಿತರ ವಸ್ತುಗಳನ್ನು ಖರೀದಿಸುವ ಮೂಲಕ ಸಂಘದ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಬೇಕಾಗಿ ವಿನಂತಿಸಿಕೊಳ್ಳುತ್ತೇನೆ
ದಿನಾಂಕ ೨೩-೦೮-೨೦೨೨ ನೇ ಮಂಗಳವಾರ ಮದ್ಯಾಹ್ನ ೩.೦೦ ಗಂಟೆಗೆ ಶಿರಸಿ ಮಾರಾಟ ಮಳಿಗೆಯಲ್ಲಿ ಹಾಗೂ ದಿನಾಂಕ ೨೪-೦೮-೨೦೨೨ ನೇ ಬುಧವಾರ ಕಾನಸೂರ ಶಾಖೆಯಲ್ಲಿ ಸಹಕಾರಿ ಸಭೆಯನ್ನು ಕರೆಯಲಾಗಿದೆ. ದಿನಾಂಕ ೨೬-೦೮-೨೦೨೨ ನೇ ಶುಕ್ರವಾರ ಮಧ್ಯಾಹ್ನ ೩-೦೦ ಘಂಟೆಗೆ ಸಂಘದ ವ್ಯಾಪಾರಾಂಗಣದಲ್ಲಿ ವಾರ್ಷಿಕ ಸಾಧಾರಣ ಸಭೆಯನ್ನು ಕರೆಯಲಾಗಿದೆ. ಸಂಘದ ಯಾವತ್ತೂ ಸದಸ್ಯರು ಸಭೆಗೆ ಆಗಮಿಸಬೇಕಾಗಿ ಕೋರಿದೆ. ಸಭೆಯ ಕರ‍್ಯ ಕಾಲಾಪಗಳು ಮುಗಿದ ನಂತರದಲ್ಲಿ ಬಡಗುತಿಟ್ಟಿನ ಸುಪ್ರಸಿದ್ಧ ಯಕ್ಷಗಾನ ಕಲಾವಿದರಿಂದ “ಚಕ್ರಚಂಡಿಕೆ” ಎಂಬ ಯಕ್ಷಗಾನ ಕಾರ‍್ಯಕ್ರಮವಿರುತ್ತದೆ. ಸರ‍್ವರಿಗೂ ಸ್ವಾಗತ.

“ ಜೈ ಸಹಕಾರ, ಸಹಕಾರಂ ಗೆಲ್ಗೆ “

ಸಿದ್ದಾಪುರ (ಉ.ಕ) ಆಡಳಿತ ಮಂಡಳಿಯ ಪರವಾಗಿ
ದಿನಾಂಕ: ೧೯-೦೮-೨೦೨೨ ಸಹಿ ಇದೆ
ಆರ್.ಎಮ್.ಹೆಗಡೆ, ಬಾಳೇಸರ.
ಅಧ್ಯಕ್ಷ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *