ಬನವಾಸಿ ನೂತನ ರಥ ನಿರ್ಮಾಣಕ್ಕೆ ಚಾಲನೆ

Thumbnail image

ಐತಿಹಾಸಿಕ ಬನವಾಸಿಯ ಮಧುಕೇಶ್ವರ ದೇವರ ನವರಥಕ್ಕೆ ಮುನ್ನುಡಿ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ಮಧುಕೇಶ್ವರ ದೇವಸ್ಥಾನದ ಮಹಾರಥದ ಮರು ನಿರ್ಮಾಣ ಕಾರ್ಯ ನಡೆಯುತ್ತಿದೆ.

ಶಿರಸಿ: ರಾಜ್ಯದಲ್ಲೇ ಪ್ರಸಿದ್ಧಿ ಹೊಂದಿರುವ 400 ವರ್ಷಗಳ ಇತಿಹಾಸವಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ಮಧುಕೇಶ್ವರ ದೇವಸ್ಥಾನದ ಮಹಾರಥದ ಮರು ನಿರ್ಮಾಣ ಕಾರ್ಯ ನಡೆಯುತ್ತಿದೆ. ಸೋಂದೆ ಅರಸರ ಕಾಲದ ರಥವನ್ನು ಈಗ ಬದಲಿಸುವ ಕೆಲಸ ನಡೆಯುತ್ತಿದ್ದು, ಮುಂಬರುವ ಮಾರ್ಚ್​ಗೆ ಹೊಸ ರಥದ ನಿರೀಕ್ಷೆ ಭಕ್ತರಿಗಿದೆ.‌

1608 ರಲ್ಲಿ ಸೋಂದಾ ರಾಮಚಂದ್ರ ನಾಯಕ ಈ ರಥವನ್ನು ಸಿದ್ಧಪಡಿಸಿ ಮಧುಕೇಶ್ವರ ದೇವಾಲಯಕ್ಕೆ ನೀಡಿದ್ದರು. 413 ವರ್ಷಗಳಷ್ಟು ಹಳೆಯದಾದ ಈ ರಥದಲ್ಲಿಯೇ ಪ್ರತಿ ವರ್ಷ ತೇರು ನಡೆಸುತ್ತಾ ಬರಲಾಗಿತ್ತು. ಈಗ ಅದರ ಬದಲಿಗೆ ನವ ರಥ ನಿರ್ಮಾಣ ಮಾಡಲಾಗುತ್ತಿದ್ದು, ಕೋಟೇಶ್ವರದ ಕುಶಲ ಕರ್ಮಿಗಳು ರಥ ನಿರ್ಮಾಣ ಕಾರ್ಯ ಆರಂಭಿಸಿದ್ದಾರೆ. ಈಗಾಗಲೇ ರಥದ ಮೂರು ಅಚ್ಚುಗಳು, ನಾಲ್ಕು ಮುಖ್ಯ ಗಾಲಿಗಳ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ.

ನವರಥ ನಿರ್ಮಾಣ ಸಮಿತಿ ಕಾರ್ಯದರ್ಶಿ ಡಿ. ಡಿ ಭಟ್ ಅವರು ಮಾತನಾಡಿದರು

ಹಲಸಿನ ಮರ ಬಳಕೆ: ರಥ ನಿರ್ಮಾಣದ ಅಗತ್ಯ ಕಟ್ಟಿಗೆಗಳನ್ನು ಸ್ಥಳೀಯರು ತಮ್ಮ ಹೊಲ, ಭೂಮಿಯಲ್ಲಿ ಬೆಳೆದದ್ದನ್ನೇ ನೀಡಿದ್ದಾರೆ. ಕರಿ ಮತ್ತಿ ಜಾತಿಯ ಮರಗಳು, ರಂಜಲು ಜಾತಿಯ ಮರಗಳು, ಹೊನ್ನೆ, ಕರಿಮತ್ತಿ, ಹೆಬ್ಬಲಸು ಜಾತಿಯ ಮರಗಳನ್ನು ಭಕ್ತರು ನೀಡಿದ್ದಾರೆ. ರಥದ ಗೊಂಬೆಗಳು ಮತ್ತು ಮಧ್ಯ ಭಾಗದ ಕೆತ್ತನೆಗಳಿಗಾಗಿ ಸಾಗುವಾನಿ, ದೇವರನ್ನು ಕೂಡಿಸುವ ಪೀಠ ಸ್ಥಾಪನೆಗೆ ಹಲಸಿನ ಮರ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಮುಖ್ಯಮಂತ್ರಿಗಳಿಂದ ಉದ್ಘಾಟನೆ: ಇನ್ನು ನವರಥ ನಿರ್ಮಾಣಕ್ಕೆ 3 ಕೋಟಿ ರೂ. ಖರ್ಚು ಅಂದಾಜಿಸಲಾಗಿತ್ತು. ಸಚಿವ ಶಿವರಾಮ ಹೆಬ್ಬಾರ್ ಮುತುವರ್ಜಿ ವಹಿಸಿ ರಥ ನಿರ್ಮಾಣಕ್ಕೆ ಹಣ ಮಂಜೂರು ಮಾಡಲು ಅವಕಾಶ ಇಲ್ಲದಿದ್ದರೂ, ಮುಖ್ಯಮಂತ್ರಿಗಳ ಮಟ್ಟದಲ್ಲಿ ಪ್ರಯತ್ನಿಸಿ ಸರ್ಕಾರದಿಂದ 3 ಕೋಟಿ ರೂ. ಮಂಜೂರು ಮಾಡಿಸಿದ್ದಾರೆ. ಇದರ ಜೊತೆ ಸಾರ್ವಜನಿಕರೂ ಉದಾರವಾಗಿ ನೀಡಿದ ಹಣ 95 ಲಕ್ಷ ರೂ. ನಷ್ಟು ಸಂಗ್ರಹವಾಗಿದೆ. ಈ ಎಲ್ಲವನ್ನೂ ಬಳಕೆ ಮಾಡಿಕೊಂಡು ಮಾರ್ಚ್ ವೇಳೆಗೆ ರಥ ಸಿದ್ಧಪಡಿಸಿ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೆ ಭಕ್ತರು, ಸಮಿತಿಯವರು ನಿರ್ಧರಿಸಿದ್ದಾರೆ.

ಆಕರ್ಷಣೆಯಾಗಿ ಇಡುವ ಯೋಚನೆ: ಇದಲ್ಲದೇ 400 ವರ್ಷಗಳ ಹಿಂದಿನ ರಥವನ್ನು ಸ್ವಚ್ಛಗೊಳಿಸುವ ಕೆಲಸ ನಡೆಯುತ್ತಿದೆ. ನವರಥ ನಿರ್ಮಾಣವಾದ ನಂತರ ಹಳೆಯ ರಥವನ್ನು ಪ್ರವಾಸಿಗರ ಆಕರ್ಷಣೆಯಾಗಿ ಇಡುವ ಯೋಚನೆ ಆಡಳಿತ ಮಂಡಳಿಯದ್ದಾಗಿದೆ.‌ (ಈಟಿಬಿಕೆ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *