local ನ್ಯೂಸ್ – ಆಯ್ಕೆ, ಸನ್ಮಾನ

ಸಿದ್ದಾಪುರ:- ಕೇಂದ್ರ ಸಾಹಿತ್ಯ ಅಕಾಡೆಮಿ ಯಿಂದ ನೀಡುವ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ್ ರವರನ್ನು ಅವರ ಸ್ವ ಗ್ರಹದಲ್ಲಿ ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಪಿ ಆರ್ ನಾಯ್ಕ ಮಾತನಾಡಿ ನಮ್ಮನ್ನು ನಾವು ಸನ್ಮಾನಿಸಿಕೊಂಡಿದ್ದೇವೆ. ಸರಳ, ಸಜ್ಜನಿಕೆಯ ವ್ಯಕ್ತಿ ಯೊರ್ವರಿಗೆ ಈ ಪ್ರಶಸ್ತಿ ಬಂದಿರುವುದು ತುಂಬಾ ಸಂತೋಷವಾಗಿದೆ. ಇದು ನಮ್ಮ
ಜಿಲ್ಲೆಗೆ ದೊಡ್ಡ ಗೌರವ. ಬೀಗಾರ್ ರವರು ಮಕ್ಕಳ ಸಾಹಿತ್ಯ ದಲ್ಲಿ ಜಿಲ್ಲೆಯಲ್ಲಿಯೇ ಮೊದಲನೆ ಸಾಲಿನಲ್ಲಿ ನಿಲ್ಲುತ್ತಾರೆ.
ನಾನು ಮಕ್ಕಳ ಕಥೆ ಬರೆಯಲು ತಮ್ಮಣ್ಣ ಬೀಗಾರ ರವರೆ ಪ್ರೇರಣೆ. ಅವರು
ಮಗುವಾಗಿ ಕಥೆ ಗಳನ್ನು ಕಟ್ಟಿದ್ದಾರೆ.
ಬಿಗಾರಂತಹ ಮಕ್ಕಳ ಸಾಹಿತಿ ಜಿಲ್ಲೆಯಲ್ಲಿ ಮತ್ತೊಬ್ಬರಿಲ್ಲ. ಅವರಿಂದ ನಿರಂತರವಾಗಿ ಬರವಣಿಗೆ ಬರಲಿ. ಪ್ರತಿಯೊಬ್ಬ ಶಿಕ್ಷಕರು ಬೀಗಾರ ರವರ ಕೃತಿಗಳನ್ನು ಓದುವಂತಾಗಬೇಕು ಎಂದು ಬೀಗಾರ್ ರವರಿಗೆ ಶುಭಾಶಯ ಕೋರಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಮಾತನಾಡಿ ಮಕ್ಕಳ ಕವನ ಕಥೆಗಳನ್ನು ಬರೆಯುವುದು ಸುಲಭವಲ್ಲ. ಬರೆಯಲು ಮಗುವಾಗಿ ಕುಳಿತುಕೊಳ್ಳಬೇಕು. ಅದು ಬೀಗಾರರವರಲ್ಲಿದೆ‌. ಅವರು ನಮ್ಮ ತಾಲೂಕಿನ ರಾಜ್ಯ ದ ಶಿಕ್ಷಣ ಕ್ಷೇತ್ರಕ್ಕೆ ಆಸ್ತಿ ಎಂದರ

ಜಿ. ಜಿ.ಹೆಗಡೆ ಬಾಳಗೋಡ ಮಾತನಾಡಿ ಬರವಣಿಗೆಯಲ್ಲಿ ಏಕಾಗ್ರತೆ ಬೇಕು.
ಬೆರೆಯವರ ಕವನ ಗಳನ್ನು ಕೇಳಬೇಕು. ಅಂದಾಗ ಮಾತ್ರ ನಮ್ಮಲ್ಲಿರುವ ದೌರ್ಬಲ್ಯ ಗೊತ್ತಾಗುತ್ತದೆ. ಬೀಗಾರ್ ರವರು ಕವಿಗೋಷ್ಠಿಯಲ್ಲಿ ಎಲ್ಲರ ಕವನಗಳನ್ನು ಕೇಳುತ್ತಿದ್ದರು. ಆ ಕಾರಣಕ್ಕಾಗಿ ಗಟ್ಟಿತನದ ಕವನಗಳನ್ನು ಬರೆಯುತ್ತಿದ್ದಾರೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ತಮ್ಮಣ್ಣ ಬೀಗಾರ್ ಎಲ್ಲರಲ್ಲಿಯೂ ಅಗಾಧವಾದ ಪ್ರತಿಭೆ ಇದೆ. ಆದರೆ ನಾವು ಸಮಾಜಕ್ಕೆ ಏನು ಕೊಡುಗೆ ಕೊಡುತ್ತೇವೆ ಎನ್ನುವುದು ಮುಖ್ಯ. ಏನನ್ನು ನಾವು ಆಪ್ತತೆಯಿಂದ ಒಪ್ಪಿಕೊಳ್ಳುತ್ತೇವೆಯೋ ಅವು ನಮ್ಮನ್ನು ಆವರಿಸಿಕೊಳ್ಳುತ್ತವೆ. ನಾವು ಪ್ರೀತಿಯಿಂದ ಎಲ್ಲ ಕೆಲಸಗಳನ್ನು ವಮಾಡಬೇಕು‌
ಒಂದು ಪುಸ್ತಕ ವನ್ನು ಬರೆದರೆ ನಾನು ಮೊದಲು ಮಕ್ಕಳಿಗೆ ಹೇಳುತ್ತಿದ್ದೆ, ಅವರು ಖುಷಿ ಪಟ್ಟರೆ ಪುಸ್ತಕ ಪ್ರಿಂಟ್ ಹಾಕುತ್ತಿದ್ದೆ ಎಂದ ತಮ್ಮ ಅನುಭವ ಹಂಚಿಕೊಂಡ ಅವರು ಎಲ್ಲರುಗೂ ಧನ್ಯವಾದ ಅರ್ಪಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಗೋಪಾಲ ನಾಯ್ಕ ಭಾಶಿ
ಸಿ ಎಸ್ ಗೌಡರ್, ಜಿ ಆಯ್ ನಾಯ್ಕ, ಶಿವಾನಂದ ಹೊನ್ನೆಗುಂಡಿ, ಪಿಬಿ ಹೊಸೂರ್, ನಾಗರಾಜ ಮಾಳ್ಕೋಡ್, ಮಾತನಾಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಷಾ ನಾಯ್ಕ ಕವನ ವಾಚಿಸಿದರು.
ಅಣ್ಣಪ್ಪ ಶಿರಳಗಿ ನಿರೂಪಿಸಿದರು. ಪ್ರಶಾಂತ ಹೆಗಡೆ ವಂದಿಸಿದರು.

ಸಿದ್ದಾಪುರ: ತಾಲೂಕಿನ ಕಾನಗೋಡ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಜಿ.ಐ.ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಕಮಲಾ ಮಡಿವಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶನಿವಾರ ನಡೆದ ಆಡಳಿತ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಐ.ನಾಯ್ಕ ಹಾಗೂ ಕಮಲಾ ಮಡಿವಾಳ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸಿದ್ದಾಪುರ ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ, ಕೆಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಘವೇಂದ್ರ ಶಾಸ್ತ್ತಿ, ಸರ್ವೋದಯ ಬ್ಯಾಂಕಿನ ನಿರ್ದೇಶಕ ಕೆ.ಜಿ.ನಾಗರಾಜ, ಕಾನಗೋಡ ಗ್ರಾಮ ಪಂಚಾಯ್ತಿ ಸದಸ್ಯ ಎಚ್.ಕೆ.ಶಿವಾನಂದ ಅಭಿನಂದಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *