ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ರಾಹುಲ್ ಗಾಂಧಿ ಮನವೊಲಿಕೆಗೆ ಅಂತಿಮ ಹಂತದ ಕಸರತ್ತು!

ತೀವ್ರ ಕುತೂಹಲ ಕೆರಳಿಸಿಲುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿರುವಂತೆಯೇ ಪಕ್ಷದ ನೇತೃತ್ವ ವಹಿಸುವಂತೆ ರಾಹುಲ್ ಗಾಂಧಿ ಮನವೊಲಿಕೆಗೆ ಅಂತಿಮ ಹಂತದ ಕಸರತ್ತು ಕೂಡ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Rahul Gandhi

ನವದೆಹಲಿ: ತೀವ್ರ ಕುತೂಹಲ ಕೆರಳಿಸಿಲುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿರುವಂತೆಯೇ ಪಕ್ಷದ ನೇತೃತ್ವ ವಹಿಸುವಂತೆ ರಾಹುಲ್ ಗಾಂಧಿ ಮನವೊಲಿಕೆಗೆ ಅಂತಿಮ ಹಂತದ ಕಸರತ್ತು ಕೂಡ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇಂದು ದೆಹಲಿಯಲ್ಲಿ ನಡೆದ ಸಿಡಬ್ಲ್ಯೂಸಿ (ಕಾಂಗ್ರೆಸ್ ಕಾರ್ಯಕಾರಿ ಸಮಿತಿ) ಸಭೆಯಲ್ಲಿ ಪಕ್ಷದ ಅದ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲು ವೇಳಾಪಟ್ಟಿ ನಿರ್ಧರಿಸಲಾಗಿದೆ. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಈ ಸಭೆ ನಡೆಯಿತು. ಸಭೆಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಭಾಗವಹಿಸಿದ್ದರು. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಕೂಡ ವರ್ಚುವಲ್ ಮೋಡ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಇನ್ನು ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ. ಸೆಪ್ಟೆಂಬರ್ 22 ರಂದು ಚುನಾವಣಾ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು. ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 30 ರ ನಡುವೆ ನಾಮಪತ್ರ ಸಲ್ಲಿಸಬಹುದು. ಅಕ್ಟೋಬರ್‌ನಲ್ಲಿ ಪರಿಶೀಲನೆ ನಡೆಯಲಿದೆ ಮತ್ತು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಅಕ್ಟೋಬರ್ 8 ಆಗಿದೆ. ಅಂತಿಮವಾಗಿ, ಅಕ್ಟೋಬರ್ 19 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಯಾರು ಅಧ್ಯಕ್ಷರಾಗಬೇಕು ಮತ್ತು ರಾಹುಲ್ ಗಾಂಧಿ ಅಧ್ಯಕ್ಷರಾಗಬೇಕೇ ಎಂಬ ಬಗ್ಗೆ ಚರ್ಚೆ ನಡೆದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಈ ಕುರಿತು ಮಾತನಾಡಿ, ‘ಇದೊಂದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ. ಅಧ್ಯಕ್ಷರಾಗಲು ಬಯಸುವವರು ನಾಮಪತ್ರ ಸಲ್ಲಿಸಬೇಕು ಎಂದರು.

ಮೂಲಗಳ ಪ್ರಕಾರ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಶುಕ್ರವಾರ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸಿಡಬ್ಲ್ಯೂಸಿ ಸಭೆ ನಡೆದಿದೆ. ರಾಹುಲ್ ಗಾಂಧಿ ಅವರು ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನದ ಚುನಾವಣೆ ಈಗ ಕಾಂಗ್ರೆಸ್‌ಗೆ ಸವಾಲಾಗಿ ಪರಿಣಮಿಸಿದೆ.  ಚುನಾವಣಾ ಪ್ರಕ್ರಿಯೆಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಲು ಕೇಂದ್ರ ಚುನಾವಣಾ ಪ್ರಾಧಿಕಾರ ಈಗಾಗಲೇ ಸಿದ್ಧತೆ ನಡೆಸಿದೆ. 

ರಾಹುಲ್ ಗಾಂಧಿ ಮನವೊಲಿಕೆಗೆ ಅಂತಿಮ ಹಂತದ ಕಸರತ್ತು
ಇನ್ನು ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಿಲ್ಲದ ಕಾರಣ ಈ ಪ್ರಕ್ರಿಯೆಯು ಜಟಿಲವಾಗುತ್ತಿದೆ. ಆದರೂ ಅವರನ್ನು ಮನವೊಲಿಸುವ ಎಲ್ಲಾ ಪ್ರಯತ್ನಗಳು ಇನ್ನೂ ನಡೆಯುತ್ತಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ‘ಭಾರತ್ ಜೋಡೋ ಯಾತ್ರೆ’ ಪ್ರಾರಂಭಿಸಲು ಕಾಂಗ್ರೆಸ್ ಯೋಜಿಸಿದೆ.

148 ದಿನಗಳ ಪಾದಯಾತ್ರೆ ಕಾಶ್ಮೀರದಲ್ಲಿ ಕೊನೆಗೊಳ್ಳಲಿದೆ. ಐದು ತಿಂಗಳ ಯಾತ್ರೆಯು 3,500 ಕಿಲೋಮೀಟರ್ ಮತ್ತು 12 ಕ್ಕೂ ಹೆಚ್ಚು ರಾಜ್ಯಗಳನ್ನು ಕ್ರಮಿಸಲು ನಿರ್ಧರಿಸಲಾಗಿದೆ. ಪಾದಯಾತ್ರೆ (ಮೆರವಣಿಗೆ) ಪ್ರತಿದಿನ 25 ಕಿ.ಮೀ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯಾತ್ರೆಯು ಪಾದಯಾತ್ರೆಗಳು, ರ್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳನ್ನು ಒಳಗೊಂಡಿರುತ್ತದೆ, ಇದರಲ್ಲಿ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *