ಗೌರಿ ಗಣೇಶ ಹಬ್ಬ:ಪುನೀತ್ ಚತುರ್ಥಿ ಆಚರಣೆ

ಗೌರಿ ಗಣೇಶ ಹಬ್ಬ: ಮಾರುಕಟ್ಟೆಯಲ್ಲಿ ವ್ಯಾಪಾರ ಭರಾಟೆ, ತರಹೇವಾರಿ ಮೂರ್ತಿಗಳು, ಪುನೀತ್ ಚತುರ್ಥಿ ಆಚರಣೆ

ಎಡೆಬಿಡದ ಮಳೆಯ ನಡುವೆಯೂ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಜನರು ಮನೆಗಳಲ್ಲಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಲು ಹೂವು-ಹಣ್ಣು-ತರಕಾರಿ ಕೊಳ್ಳುವುದರಲ್ಲಿ ನಿರತರಾಗಿರುವುದು ಕಂಡುಬಂತು.

Puneet Rajkumar idol

ಬೆಂಗಳೂರು: ಎಡೆಬಿಡದ ಮಳೆಯ ನಡುವೆಯೂ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಜನರು ಮನೆಗಳಲ್ಲಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಲು ಹೂವು-ಹಣ್ಣು-ತರಕಾರಿ ಕೊಳ್ಳುವುದರಲ್ಲಿ ನಿರತರಾಗಿರುವುದು ಕಂಡುಬಂತು.

ನಗರದ ಕೆ ಆರ್ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು, ಜನಜಂಗುಳಿಯಿಂದ ತುಂಬಿಹೋಗಿತ್ತು. ಮಾರುಕಟ್ಟೆಯಲ್ಲಿ ಪೂಜೆ ಸಾಮಗ್ರಿಗಳು, ಗೌರಿ , ಗಣೇಶ ಮೂರ್ತಿಗಳನ್ನು ಖರೀದಿಸಲು ಜನ ಆಗಮಿಸಿದ್ದರು. ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ತಾಲೂಕು ಕೇಂದ್ರ, ಹೋಬಳಿಗಳಲ್ಲಿ ವಿಗ್ರಹಗಳನ್ನು ಮಾರಾಟ ಮಾಡಲು ಸಾಕಷ್ಟು ಮಳಿಗೆಗಳನ್ನು ನಿರ್ಮಿಸಲಾಗಿದೆ. ಬಗೆ ಬಗೆಯ ಮೂರ್ತಿಗಳು ಈ ಬಾರಿ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. 50 ರೂಪಾಯಿಯಿಂದ ಹಿಡಿದು 10 ಸಾವಿರ ರೂ.ವರೆಗಿನ ವಿಗ್ರಹಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ.

100%
ಗೌರಿ ಗಣೇಶ ಹಬ್ಬದ ಪ್ರಯುಕ್ತ ವ್ಯಾಪಾರ ಭರಾಟೆಯಲ್ಲಿ ತೊಡಗಿರುವ ಜನತೆ

ಇನ್ನು ಹಣ್ಣು, ಹೂವು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯು ಹೆಚ್ಚಾಗಿದೆ. ಆದರೂ ಅದನ್ನು ಲೆಕ್ಕಿಸದೇ ಹಬ್ಬದ ಗುಂಗಿನಲ್ಲಿ ಜನತೆ ಖರೀದಿಯಲ್ಲಿ ತೊಡಗಿದ್ದಾರೆ. 

ಮಾರುಕಟ್ಟೆಯಲ್ಲಿ ತರಹೇವಾರಿ ಗಣೇಶ ಮೂರ್ತಿ ರಾರಾಜಿಸುತ್ತಿದ್ದು, ಗೌರಿ, ಗಣೇಶನನ್ನು ಖರೀದಿಸಲು ಸಾಕಷ್ಟು ಸಂಖ್ಯೆಯಲ್ಲಿ ಜನತೆ ಆಗಮಿಸುತ್ತಿದ್ದಾರೆ.

100%
ಮಾರುಕಟ್ಟೆಯಲ್ಲಿ ಪುನೀತ್ ರಾಜ್‌ಕುಮಾರ್ ಮೂರ್ತಿಗೆ ಭಾರಿ ಬೇಡಿಕೆ

ಮಳೆಯನ್ನೂ ಲೆಕ್ಕಿಸದೆ ಬಡಾವಣೆಗಳಲ್ಲಿ, ಗಣಪತಿ ಮಂಡಳಿಗಳು ಗಣೇಶನನ್ನು ಪ್ರತಿಷ್ಠಾಪಿಸಲು ಉತ್ಸುಕತೆ ತೋರಿವೆ. ಕಳೆದ ಎರಡು ವರ್ಷಗಳಲ್ಲಿ ಕೋವಿಡ್‌ನಿಂದ ಗೌರಿ, ಗಣೇಶ ಹಬ್ಬ ಕಳೆಗಟ್ಟಿರಲಿಲ್ಲ. ಆದರೆ, ಈ ಬಾರಿ ಕೋವಿಡ್‌ ಪರಿಣಾಮಕಾರಿಯಾಗಿಲ್ಲದ ಕಾರಣ ಜನತೆ ಅಮ್ಮ, ಮಗನ ಹಬ್ಬವನ್ನು ಅದ್ದೂರಿ ರೀತಿಯಲ್ಲಿ ಆಚರಿಸುತ್ತಿದ್ದಾರೆ.

100%
ಮೈಸೂರು ಅರಮನೆ ಮುಂದೆ ಯೋಗನಿರತ ಪ್ರಧಾನಿ ನರೇಂದ್ರ ಮೋದಿಯವರ ಮೂರ್ತಿ

ಅಪ್ಪು ಚತುರ್ಥಿ: ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹಠಾತ್ ಗತಿಸಿ ಹೋಗಿ 10 ತಿಂಗಳಾಗುತ್ತಿದೆ. ಮಾರುಕಟ್ಟೆಯಲ್ಲಿ ಗಣೇಶನ ಮೂರ್ತಿ ಜೊತೆಗೆ ಅಪ್ಪು ಮೂರ್ತಿಗಳನ್ನು ಕಲಾವಿದರು ನಿರ್ಮಿಸಿ ಇಟ್ಟಿದ್ದು ಜನರು ಅಪ್ಪು ಮೂರ್ತಿಗಳನ್ನು ಖರೀದಿಸಿ ಮನೆಗಳಲ್ಲಿ, ಬಡಾವಣೆಗಳಲ್ಲಿ ಅಪ್ಪು ಚತುರ್ಥಿ ಎಂದು ಆಚರಿಸುತ್ತಿರುವುದು ವಿಶೇಷವಾಗಿದೆ.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ನ್ಯೂಸ್‌ ರೌಂಡ್… ಶಿಕ್ಷಣ ಇಲಾಖೆಗೆ ಶ್ಲಾಘನೆ, ಲೋಕೋಪಯೋಗಿ ಇಲಾಖೆಗೆ ಎಚ್ಚರಿಕೆ!

ಎತ್ತಿನ ಗಾಡಿ ಏರಿದ ಶಾಸಕ- ರೈತ, ಶಾಸಕ ಭೀಮಣ್ಣ ನಾಯ್ಕ ಸಿದ್ಧಾಪುರ ಪ್ರಥಮ ದರ್ಜೆ ಕಾಲೇಜ್‌ ಜಾನಪದ ಉತ್ಸವಕ್ಕೆ ಎತ್ತಿನ ಗಾಡಿ ಮೂಲಕ ಬಂದು...

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

Latest Posts

ನ್ಯೂಸ್‌ ರೌಂಡ್… ಶಿಕ್ಷಣ ಇಲಾಖೆಗೆ ಶ್ಲಾಘನೆ, ಲೋಕೋಪಯೋಗಿ ಇಲಾಖೆಗೆ ಎಚ್ಚರಿಕೆ!

ಎತ್ತಿನ ಗಾಡಿ ಏರಿದ ಶಾಸಕ- ರೈತ, ಶಾಸಕ ಭೀಮಣ್ಣ ನಾಯ್ಕ ಸಿದ್ಧಾಪುರ ಪ್ರಥಮ ದರ್ಜೆ ಕಾಲೇಜ್‌ ಜಾನಪದ ಉತ್ಸವಕ್ಕೆ ಎತ್ತಿನ ಗಾಡಿ ಮೂಲಕ ಬಂದು ಚಾಲನೆ ನೀಡಿ ಸುದ್ದಿ ಮಾಡಿದ್ದಾರೆ. ಕಾಲೇಜಿನ ಸಂಪ್ರದಾಯ ದಿನಾಚರಣೆ, ಜಾನಪದ ಉತ್ಸವದಲ್ಲಿ ನಾಡಿನ ಹಬ್ಬದ ಸೊಗಡನ್ನು ಪರಿಚಯಿಸಿ ಈ ಕಾಲೇಜ್‌ ಸುದ್ದಿ ಮಾಡಿದೆ. ಸಿದ್ಧಾಪುರ ನಾಣಿಕಟ್ಟಾ ಪಿ.ಯು. ಕಾಲೇಜ್‌...

Recommended For You

About the Author: Kanneshwar Naik

Leave a Reply

Your email address will not be published. Required fields are marked *