ಗೌರಿ ಗಣೇಶ ಹಬ್ಬ:ಪುನೀತ್ ಚತುರ್ಥಿ ಆಚರಣೆ

ಗೌರಿ ಗಣೇಶ ಹಬ್ಬ: ಮಾರುಕಟ್ಟೆಯಲ್ಲಿ ವ್ಯಾಪಾರ ಭರಾಟೆ, ತರಹೇವಾರಿ ಮೂರ್ತಿಗಳು, ಪುನೀತ್ ಚತುರ್ಥಿ ಆಚರಣೆ

ಎಡೆಬಿಡದ ಮಳೆಯ ನಡುವೆಯೂ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಜನರು ಮನೆಗಳಲ್ಲಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಲು ಹೂವು-ಹಣ್ಣು-ತರಕಾರಿ ಕೊಳ್ಳುವುದರಲ್ಲಿ ನಿರತರಾಗಿರುವುದು ಕಂಡುಬಂತು.

Puneet Rajkumar idol

ಬೆಂಗಳೂರು: ಎಡೆಬಿಡದ ಮಳೆಯ ನಡುವೆಯೂ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಜನರು ಮನೆಗಳಲ್ಲಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಲು ಹೂವು-ಹಣ್ಣು-ತರಕಾರಿ ಕೊಳ್ಳುವುದರಲ್ಲಿ ನಿರತರಾಗಿರುವುದು ಕಂಡುಬಂತು.

ನಗರದ ಕೆ ಆರ್ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು, ಜನಜಂಗುಳಿಯಿಂದ ತುಂಬಿಹೋಗಿತ್ತು. ಮಾರುಕಟ್ಟೆಯಲ್ಲಿ ಪೂಜೆ ಸಾಮಗ್ರಿಗಳು, ಗೌರಿ , ಗಣೇಶ ಮೂರ್ತಿಗಳನ್ನು ಖರೀದಿಸಲು ಜನ ಆಗಮಿಸಿದ್ದರು. ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ತಾಲೂಕು ಕೇಂದ್ರ, ಹೋಬಳಿಗಳಲ್ಲಿ ವಿಗ್ರಹಗಳನ್ನು ಮಾರಾಟ ಮಾಡಲು ಸಾಕಷ್ಟು ಮಳಿಗೆಗಳನ್ನು ನಿರ್ಮಿಸಲಾಗಿದೆ. ಬಗೆ ಬಗೆಯ ಮೂರ್ತಿಗಳು ಈ ಬಾರಿ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. 50 ರೂಪಾಯಿಯಿಂದ ಹಿಡಿದು 10 ಸಾವಿರ ರೂ.ವರೆಗಿನ ವಿಗ್ರಹಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ.

100%
ಗೌರಿ ಗಣೇಶ ಹಬ್ಬದ ಪ್ರಯುಕ್ತ ವ್ಯಾಪಾರ ಭರಾಟೆಯಲ್ಲಿ ತೊಡಗಿರುವ ಜನತೆ

ಇನ್ನು ಹಣ್ಣು, ಹೂವು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯು ಹೆಚ್ಚಾಗಿದೆ. ಆದರೂ ಅದನ್ನು ಲೆಕ್ಕಿಸದೇ ಹಬ್ಬದ ಗುಂಗಿನಲ್ಲಿ ಜನತೆ ಖರೀದಿಯಲ್ಲಿ ತೊಡಗಿದ್ದಾರೆ. 

ಮಾರುಕಟ್ಟೆಯಲ್ಲಿ ತರಹೇವಾರಿ ಗಣೇಶ ಮೂರ್ತಿ ರಾರಾಜಿಸುತ್ತಿದ್ದು, ಗೌರಿ, ಗಣೇಶನನ್ನು ಖರೀದಿಸಲು ಸಾಕಷ್ಟು ಸಂಖ್ಯೆಯಲ್ಲಿ ಜನತೆ ಆಗಮಿಸುತ್ತಿದ್ದಾರೆ.

100%
ಮಾರುಕಟ್ಟೆಯಲ್ಲಿ ಪುನೀತ್ ರಾಜ್‌ಕುಮಾರ್ ಮೂರ್ತಿಗೆ ಭಾರಿ ಬೇಡಿಕೆ

ಮಳೆಯನ್ನೂ ಲೆಕ್ಕಿಸದೆ ಬಡಾವಣೆಗಳಲ್ಲಿ, ಗಣಪತಿ ಮಂಡಳಿಗಳು ಗಣೇಶನನ್ನು ಪ್ರತಿಷ್ಠಾಪಿಸಲು ಉತ್ಸುಕತೆ ತೋರಿವೆ. ಕಳೆದ ಎರಡು ವರ್ಷಗಳಲ್ಲಿ ಕೋವಿಡ್‌ನಿಂದ ಗೌರಿ, ಗಣೇಶ ಹಬ್ಬ ಕಳೆಗಟ್ಟಿರಲಿಲ್ಲ. ಆದರೆ, ಈ ಬಾರಿ ಕೋವಿಡ್‌ ಪರಿಣಾಮಕಾರಿಯಾಗಿಲ್ಲದ ಕಾರಣ ಜನತೆ ಅಮ್ಮ, ಮಗನ ಹಬ್ಬವನ್ನು ಅದ್ದೂರಿ ರೀತಿಯಲ್ಲಿ ಆಚರಿಸುತ್ತಿದ್ದಾರೆ.

100%
ಮೈಸೂರು ಅರಮನೆ ಮುಂದೆ ಯೋಗನಿರತ ಪ್ರಧಾನಿ ನರೇಂದ್ರ ಮೋದಿಯವರ ಮೂರ್ತಿ

ಅಪ್ಪು ಚತುರ್ಥಿ: ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹಠಾತ್ ಗತಿಸಿ ಹೋಗಿ 10 ತಿಂಗಳಾಗುತ್ತಿದೆ. ಮಾರುಕಟ್ಟೆಯಲ್ಲಿ ಗಣೇಶನ ಮೂರ್ತಿ ಜೊತೆಗೆ ಅಪ್ಪು ಮೂರ್ತಿಗಳನ್ನು ಕಲಾವಿದರು ನಿರ್ಮಿಸಿ ಇಟ್ಟಿದ್ದು ಜನರು ಅಪ್ಪು ಮೂರ್ತಿಗಳನ್ನು ಖರೀದಿಸಿ ಮನೆಗಳಲ್ಲಿ, ಬಡಾವಣೆಗಳಲ್ಲಿ ಅಪ್ಪು ಚತುರ್ಥಿ ಎಂದು ಆಚರಿಸುತ್ತಿರುವುದು ವಿಶೇಷವಾಗಿದೆ.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *