ಗಣಪನ ಜೊತೆ ಗಮನ ಸೆಳೆದ ಪುನೀತ್​ ರಾಜ್​ಕುಮಾರ್ ಮೂರ್ತಿ

Thumbnail image

ಕರಾವಳಿಯಲ್ಲಿ ಕಳೆಗಟ್ಟಿದ ಗಣೇಶ ಚತುರ್ಥಿ: ಗಣಪನ ಜೊತೆ ಗಮನ ಸೆಳೆದ ಪುನೀತ್​ ರಾಜ್​ಕುಮಾರ್ ಮೂರ್ತಿ

ಅವರ್ಸಾ ಗ್ರಾಮದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಪುನೀತ್ ರಾಜ್​​​ಕುಮಾರ್​ ಮೂರ್ತಿ ಅನ್ನು ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ನಡೆಸಿಕೊಡುವ ಮಾದರಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದಾರೆ.

ಕಾರವಾರ(ಉತ್ತರಕನ್ನಡ): ನಿನ್ನೆ ದೇಶಾದ್ಯಂತ ಗಣೇಶ ಹಬ್ಬ ವಿಜೃಂಭಣೆಯಿಂದ ನಡೆದಿದೆ. ಮನೆ ಮನೆಯಲ್ಲೂ ಗಣಪನ ವಿಗ್ರಹ ತಂದು ಆರಾಧಿಸುವ ಜೊತೆಗೆ ಸಾರ್ವಜನಿಕವಾಗಿಯೂ ವಿಭಿನ್ನ ಬಗೆಯ ವಿನಾಯಕ ಮೂರ್ತಿಗಳನ್ನು ಜನರು ಪ್ರತಿಷ್ಠಾಪಿಸಿದ್ದಾರೆ. ಇಲ್ಲೊಂದು ಟೈ ಹಾಕಿ, ಸೂಟು ಧರಿಸಿ, ನಗುಮೊಗದಿಂದ ಕುಳಿತಿರುವ ದಿ. ಪುನೀತ್​ ರಾಜ್​ಕುಮಾರ್​ ಮೂರ್ತಿ ಜನರನ್ನು ಹೆಚ್ಚು ಆಕರ್ಷಣೆ ಮಾಡಿದೆ.

ಕನ್ನಡದ ಕೋಟ್ಯಾಧಿಪತಿ ಮಾದರಿಯಲ್ಲಿ ಕುಳಿತಿರುವ ಅಪ್ಪು.. ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಪುನೀತ್ ರಾಜ್​​​ಕುಮಾರ್​ ಮೂರ್ತಿಯನ್ನು ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ನಡೆಸಿಕೊಡುವ ಮಾದರಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದಾರೆ. ಥೇಟ್ ಅಪ್ಪುವನ್ನೇ ಹೋಲುವ ಮೂರ್ತಿಯಿದು. ಇದರ ಫೋಟೋ, ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಇದು ಅವರ್ಸಾ ಗ್ರಾಮದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ 39ನೇ ಗಣೇಶೋತ್ಸವ ಆಗಿದೆ.

ಗಣಪನ ಜೊತೆ ಗಮನ ಸೆಳೆದ ಪುನೀತ್​ ರಾಜ್​ಕುಮಾರ್ ಮೂರ್ತಿ

ಮೂರ್ತಿ ತಯಾರಿಸಿದ ಕಲಾವಿದ ದಿನೇಶ ಮೇತ್ರಿ.. ಪುನೀತ್ ರಾಜ್​ಕುಮಾರ್ ಅವರ ಮೂರ್ತಿಯನ್ನು ತಯಾರು ಮಾಡಿರೋದು ಅವರ್ಸಾ ಗ್ರಾಮದ ಹಿರಿಯ ಕಲಾವಿದ ಕುಮ್ಮಣ್ಣ ಮೇತ್ರಿ ಮನೆತನದ ದಿನೇಶ ಮೇತ್ರಿ. ಮೇತ್ರಿ ಕುಟುಂಬ ಮೂರ್ತಿ ತಯಾರಿಕೆಯಲ್ಲಿ ಹಿಂದಿನಿಂದಲೂ ಪ್ರಖ್ಯಾತಿ ಗಳಿಸಿದ್ದಾರೆ. ವರ್ಷವಿಡೀ ಈ ಕುಟುಂಬದಲ್ಲಿ ಮೂರ್ತಿಗಳ ನಿರ್ಮಾಣ ಕಾರ್ಯ ನಡೆಯುತ್ತಲೇ ಇರುತ್ತದೆ. ಈ ಕುಟುಂಬದ ದಿನೇಶ ಮೇತ್ರಿ ಅವರು ಪುನೀತ್ ಹಾಗೂ ಗಣಪನನ್ನು ಕನ್ನಡದ ಕೋಟ್ಯಾಧಿಪತಿಯ ಸೆಟ್‌ನಲ್ಲಿ ಕೂತಂತೆ ತಯಾರು ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ನಗು ಮೊಗದ ಪುನೀತ್ ಕಂಡು ಜನರು ಖುಷ್..​ ಈ ಎರಡೂ ಮೂರ್ತಿಗಳು 9 ಫೀಟ್ ಎತ್ತರ ಇವೆ. ಒಂದು ತಿಂಗಳ ಕಾಲ ದಿನೇಶ ಹಾಗೂ ಅವರ ಕುಟುಂಬದ ಕಲಾವಿದರು ಸೇರಿ ಪುನೀತ್ ಹಾಗೂ ಗಣಪನ ಮೂರ್ತಿಯನ್ನು ಸಿದ್ಧಪಡಿಸಿದ್ದಾರೆ. ಮೂರ್ತಿ ಥೇಟ್ ಪುನೀತ್​ ಅವರನ್ನೇ ಹೋಲುವಂತಿದ್ದು ಸೂಟು, ಕೈಗೆ ವಾಚು, ಕಣ್ಣಿಗೆ ಕಪ್ಪು ಕನ್ನಡಕದ ಜೊತೆಗೆ ಟೈ ಕಟ್ಟಿ ಕುಳಿತಿರುವ ಮೂರ್ತಿ ಎಂಥಹವರನ್ನೂ ಬೆರಗುಗೊಳಿಸುವಂತಿದೆ. ಅಪ್ಪುವನ್ನು ಕಳೆದುಕೊಂಡ ಅಭಿಮಾನಿ ಬಳಗ ನಗುಮೊಗದ ಪುನೀತ್ ಮೂರ್ತಿ ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಗಣೇಶೋತ್ಸವ ಸಮಿತಿ ಪ್ರಯತ್ನದಿಂದ ನೆಚ್ಚಿನ ನಟನನ್ನು ಕಳೆದುಕೊಂಡಿರುವ ಅಭಿಮಾನಿಗಳಿಗೆ ಮತ್ತೆ ಅಪ್ಪುವನ್ನು ಮೂರ್ತಿ ಮೂಲಕ ಕಣ್ತುಂಬಿಕೊಳ್ಳಲು ಅವಕಾಶ ಸಿಕ್ಕಂತಾಗಿದೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸಿ ಪುನೀತ್ ಅವರ ಮೂರ್ತಿ ವೀಕ್ಷಿಸಿದ್ದಾರೆ. ಮೂರ್ತಿ ಬಳಿ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *