ಗಣಪನ ಜೊತೆ ಗಮನ ಸೆಳೆದ ಪುನೀತ್​ ರಾಜ್​ಕುಮಾರ್ ಮೂರ್ತಿ

Thumbnail image

ಕರಾವಳಿಯಲ್ಲಿ ಕಳೆಗಟ್ಟಿದ ಗಣೇಶ ಚತುರ್ಥಿ: ಗಣಪನ ಜೊತೆ ಗಮನ ಸೆಳೆದ ಪುನೀತ್​ ರಾಜ್​ಕುಮಾರ್ ಮೂರ್ತಿ

ಅವರ್ಸಾ ಗ್ರಾಮದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಪುನೀತ್ ರಾಜ್​​​ಕುಮಾರ್​ ಮೂರ್ತಿ ಅನ್ನು ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ನಡೆಸಿಕೊಡುವ ಮಾದರಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದಾರೆ.

ಕಾರವಾರ(ಉತ್ತರಕನ್ನಡ): ನಿನ್ನೆ ದೇಶಾದ್ಯಂತ ಗಣೇಶ ಹಬ್ಬ ವಿಜೃಂಭಣೆಯಿಂದ ನಡೆದಿದೆ. ಮನೆ ಮನೆಯಲ್ಲೂ ಗಣಪನ ವಿಗ್ರಹ ತಂದು ಆರಾಧಿಸುವ ಜೊತೆಗೆ ಸಾರ್ವಜನಿಕವಾಗಿಯೂ ವಿಭಿನ್ನ ಬಗೆಯ ವಿನಾಯಕ ಮೂರ್ತಿಗಳನ್ನು ಜನರು ಪ್ರತಿಷ್ಠಾಪಿಸಿದ್ದಾರೆ. ಇಲ್ಲೊಂದು ಟೈ ಹಾಕಿ, ಸೂಟು ಧರಿಸಿ, ನಗುಮೊಗದಿಂದ ಕುಳಿತಿರುವ ದಿ. ಪುನೀತ್​ ರಾಜ್​ಕುಮಾರ್​ ಮೂರ್ತಿ ಜನರನ್ನು ಹೆಚ್ಚು ಆಕರ್ಷಣೆ ಮಾಡಿದೆ.

ಕನ್ನಡದ ಕೋಟ್ಯಾಧಿಪತಿ ಮಾದರಿಯಲ್ಲಿ ಕುಳಿತಿರುವ ಅಪ್ಪು.. ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಪುನೀತ್ ರಾಜ್​​​ಕುಮಾರ್​ ಮೂರ್ತಿಯನ್ನು ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ನಡೆಸಿಕೊಡುವ ಮಾದರಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದಾರೆ. ಥೇಟ್ ಅಪ್ಪುವನ್ನೇ ಹೋಲುವ ಮೂರ್ತಿಯಿದು. ಇದರ ಫೋಟೋ, ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಇದು ಅವರ್ಸಾ ಗ್ರಾಮದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ 39ನೇ ಗಣೇಶೋತ್ಸವ ಆಗಿದೆ.

ಗಣಪನ ಜೊತೆ ಗಮನ ಸೆಳೆದ ಪುನೀತ್​ ರಾಜ್​ಕುಮಾರ್ ಮೂರ್ತಿ

ಮೂರ್ತಿ ತಯಾರಿಸಿದ ಕಲಾವಿದ ದಿನೇಶ ಮೇತ್ರಿ.. ಪುನೀತ್ ರಾಜ್​ಕುಮಾರ್ ಅವರ ಮೂರ್ತಿಯನ್ನು ತಯಾರು ಮಾಡಿರೋದು ಅವರ್ಸಾ ಗ್ರಾಮದ ಹಿರಿಯ ಕಲಾವಿದ ಕುಮ್ಮಣ್ಣ ಮೇತ್ರಿ ಮನೆತನದ ದಿನೇಶ ಮೇತ್ರಿ. ಮೇತ್ರಿ ಕುಟುಂಬ ಮೂರ್ತಿ ತಯಾರಿಕೆಯಲ್ಲಿ ಹಿಂದಿನಿಂದಲೂ ಪ್ರಖ್ಯಾತಿ ಗಳಿಸಿದ್ದಾರೆ. ವರ್ಷವಿಡೀ ಈ ಕುಟುಂಬದಲ್ಲಿ ಮೂರ್ತಿಗಳ ನಿರ್ಮಾಣ ಕಾರ್ಯ ನಡೆಯುತ್ತಲೇ ಇರುತ್ತದೆ. ಈ ಕುಟುಂಬದ ದಿನೇಶ ಮೇತ್ರಿ ಅವರು ಪುನೀತ್ ಹಾಗೂ ಗಣಪನನ್ನು ಕನ್ನಡದ ಕೋಟ್ಯಾಧಿಪತಿಯ ಸೆಟ್‌ನಲ್ಲಿ ಕೂತಂತೆ ತಯಾರು ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ನಗು ಮೊಗದ ಪುನೀತ್ ಕಂಡು ಜನರು ಖುಷ್..​ ಈ ಎರಡೂ ಮೂರ್ತಿಗಳು 9 ಫೀಟ್ ಎತ್ತರ ಇವೆ. ಒಂದು ತಿಂಗಳ ಕಾಲ ದಿನೇಶ ಹಾಗೂ ಅವರ ಕುಟುಂಬದ ಕಲಾವಿದರು ಸೇರಿ ಪುನೀತ್ ಹಾಗೂ ಗಣಪನ ಮೂರ್ತಿಯನ್ನು ಸಿದ್ಧಪಡಿಸಿದ್ದಾರೆ. ಮೂರ್ತಿ ಥೇಟ್ ಪುನೀತ್​ ಅವರನ್ನೇ ಹೋಲುವಂತಿದ್ದು ಸೂಟು, ಕೈಗೆ ವಾಚು, ಕಣ್ಣಿಗೆ ಕಪ್ಪು ಕನ್ನಡಕದ ಜೊತೆಗೆ ಟೈ ಕಟ್ಟಿ ಕುಳಿತಿರುವ ಮೂರ್ತಿ ಎಂಥಹವರನ್ನೂ ಬೆರಗುಗೊಳಿಸುವಂತಿದೆ. ಅಪ್ಪುವನ್ನು ಕಳೆದುಕೊಂಡ ಅಭಿಮಾನಿ ಬಳಗ ನಗುಮೊಗದ ಪುನೀತ್ ಮೂರ್ತಿ ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಗಣೇಶೋತ್ಸವ ಸಮಿತಿ ಪ್ರಯತ್ನದಿಂದ ನೆಚ್ಚಿನ ನಟನನ್ನು ಕಳೆದುಕೊಂಡಿರುವ ಅಭಿಮಾನಿಗಳಿಗೆ ಮತ್ತೆ ಅಪ್ಪುವನ್ನು ಮೂರ್ತಿ ಮೂಲಕ ಕಣ್ತುಂಬಿಕೊಳ್ಳಲು ಅವಕಾಶ ಸಿಕ್ಕಂತಾಗಿದೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸಿ ಪುನೀತ್ ಅವರ ಮೂರ್ತಿ ವೀಕ್ಷಿಸಿದ್ದಾರೆ. ಮೂರ್ತಿ ಬಳಿ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *