ವರ್ಷಕ್ಕೊಮ್ಮೆ ದರ್ಶನ! ಸಕಲಾಷ್ಟ ಸಿದ್ಧಿಯ ಪ್ರತೀತಿ!!!?

ದುಷ್ಟರ ವಕೃದಷ್ಠಿಗೆ ಅದೃಶ್ಯಳಾದ ಸಾತೇರಿ ದೇವಿ: ವರ್ಷದಲ್ಲಿ 7 ದಿನ ಮಾತ್ರ ದರ್ಶನ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿ ಸಾತೇರಿ ದೇವಿ ದೇವಾಲಯ ಇದ್ದು, ವರ್ಷದಲ್ಲಿ 7 ದಿನ ಮಾತ್ರ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಕಾರವಾರ(ಉತ್ತರ ಕನ್ನಡ): ಸಾಮಾನ್ಯವಾಗಿ ದೇವಸ್ಥಾನ ಅಂದ್ರೆ ಅಲ್ಲಿ ಪ್ರತಿನಿತ್ಯ ತ್ರಿಕಾಲ ಪೂಜೆ, ಭಕ್ತರಿಗೆ ದರ್ಶನ, ವಿವಿಧ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿರುತ್ತವೆ. ಆದರೆ ಈ ದೇವಸ್ಥಾನದಲ್ಲಿ ವರ್ಷದಲ್ಲಿ ಕೇವಲ ಏಳು ದಿನ ಮಾತ್ರ ದೇವಿ ಭಕ್ತರಿಗೆ ದರ್ಶನ ನೀಡುತ್ತಾಳಂತೆ. ಈ ದೇವಿಗೆ ಹರಕೆ ಹೊತ್ತುಕೊಂಡರೆ ಒಂದೇ ವರ್ಷದಲ್ಲಿ ಅದು ಈಡೇರುತ್ತದೆ ಎನ್ನುವ ನಂಬಿಕೆ ಜನರಲ್ಲಿದ್ದು, ವಿವಿಧೆಡೆಗಳಿಂದ ಭಕ್ತ ಸಾಗರವೇ ಈ ದೇವಾಲಯಕ್ಕೆ ಹರಿದು ಬರುತ್ತದೆ.

https://www.facebook.com/flx/warn/?u=https%3A%2F%2Fsamajamukhi.net%2F2022%2F09%2F06%2Ftwo-deaths-local-news%2F%3Ffbclid%3DIwAR3jbKuIsQbXT0MlN-5YCDn7uw17rDiCFpJbZwE7jEYNwccmzqEZrt2n3DQ&h=AT0KwmGjHSYKdECcCAu03D7VrWwgjkE-0M1O7tEzEsIA_tqB3fbMmH1OidoA5YeqyvkyIQokohCTwZQga_rIhnN3j3LHKnRpcm4i2XJqsNH5tDGH_FFmRHTOMmS-Y82tbTxgkAAInx8K45tgnyzNgXu5HHqH6FBqh9IKR_0Ig6cMQaUWNyFZDW5zq41sdM8sthkYa2wcCwgz9JzBMYfNGd6aiFmc5L3uUXSHPiTMjW3dZoZclIKr2zeiCcEwgb-w-j9vnu28eSlPjLzpLkOGwpyUzhtqzG2dWi4tP4Ej

ಹೌದು, ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿರುವ ಸಾತೇರಿ ಎಂಬ ದೇವಸ್ಥಾನದಲ್ಲಿ ದೇವಿಯ ದರ್ಶನಕ್ಕೆ ವರ್ಷದಲ್ಲಿ ಏಳು ದಿನ ಮಾತ್ರ ಅವಕಾಶ ಮಾಡಿಕೊಡಲಾಗುತ್ತದೆ. ಸಾತೇರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಮಾತ್ರ ಭಕ್ತರಿಗೆ ದರ್ಶನ ನೀಡುವ ಪ್ರತೀತಿ ಇದೆ. ಹೀಗಾಗಿ ಕಳೆದೆರಡು ದಿನಗಳಿಂದ ದೇವಿಯ ಜಾತ್ರಾಮಹೋತ್ಸವ ಪ್ರಾರಂಭವಾಗಿದ್ದು, ಇಂದಿನಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.

ಮೊದಲ ಎರಡು ದಿನ ಅರ್ಚಕರ ಕುಟುಂಬ ಮತ್ತು ಗ್ರಾಮಸ್ಥರಿಗೆ ಅವಕಾಶ.. ಹಲವೆಡೆಗಳಿಂದ ಆಗಮಿಸಿದ್ದ ಭಕ್ತರು ಸಾತೇರಿ ದೇವಿಗೆ ವಿವಿಧ ಸೇವೆಗಳನ್ನ ಅರ್ಪಿಸಿ ದರ್ಶನ ಪಡೆದರು. ಜಾತ್ರಾ ಮಹೋತ್ಸವದ ಮೊದಲೆರಡು ದಿನ ದೇವಸ್ಥಾನದ ಅರ್ಚಕ ಕುಟುಂಬದವರಿಗೆ ಹಾಗೂ ಗ್ರಾಮಸ್ಥರಿಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಉಳಿದ ಐದು ದಿನಗಳು ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಮುಕ್ತವಾಗಿರುತ್ತದೆ. ವರ್ಷದ ಉಳಿದ ದಿನಗಳಲ್ಲಿ ದೇವಸ್ಥಾನದಲ್ಲಿ ಪ್ರತಿ ಸೋಮವಾರ ಗರ್ಭಗುಡಿಯ ಬಾಗಿಲಲ್ಲಿಯೇ ನಿಂತು ಪೂಜೆ ಸಲ್ಲಿಸಿ ತೆರಳಲಾಗುತ್ತದೆ. ಇಂದು ಸಾರ್ವಜನಿಕ ದರ್ಶನದ ಮೊದಲ ದಿನವಾಗಿದ್ದು, ಸಾವಿರಾರು ಮಂದಿ ಆಗಮಿಸಿ ದರ್ಶನ ಪಡೆದುಕೊಂಡರು.

ಸಾತೇರಿ ದೇವಿ ಜಾತ್ರಾ ಮಹೋತ್ಸವ ಆರಂಭ..

ಸಾತೇರಿ ದೇವಿಗಿದೆ ಪೌರಾಣಿಕ ಇತಿಹಾಸ.. ಹಣಕೋಣದಲ್ಲಿರುವ ಸಾತೇರಿ ದೇವಿ ತನ್ನ ಭಕ್ತರ ಕಷ್ಟಗಳನ್ನು ನಿವಾರಿಸಿ, ಸಹಾಯ ಸಹಕಾರದ ಅಗತ್ಯವಿದ್ದರೆ ಭಕ್ತರ ಸಮ್ಮುಖದಲ್ಲಿ ಪ್ರತ್ಯಕ್ಷಳಾಗಿ ಕಷ್ಟಗಳನ್ನು ನಿವಾರಿಸುತ್ತಿದ್ದಳಂತೆ. ಒಮ್ಮೆ ದೇವಿ ಬಾವಿಯ ಪಕ್ಕದಲ್ಲಿ ಸ್ನಾನ ಮಾಡಿ ಕೂದಲನ್ನು ಬಾಚಿಕೊಳ್ಳುವಾಗ ಒಬ್ಬ ದುಷ್ಟನ ಕಣ್ಣು ದೇವಿಯ ಮೇಲೆ ಬಿದ್ದು, ದೇವಿಯ ಬಳಿ ಬಂದಾಗ ಆಕೆ ರಕ್ಷಣೆಗಾಗಿ ಬಾವಿಗೆ ಹಾರಿ ಅದೃಶ್ಯಳಾದಳಂತೆ.

ಬಳಿಕ ಊರಿನ ಹಿರಿಯನೊಬ್ಬರಿಗೆ ದೇವಿ ಕನಸಿನಲ್ಲಿ ಬಂದು ತಾನು ಬಾವಿಯಲ್ಲಿ ಅದೃಶ್ಯಳಾಗಿದ್ದು, ತಾನು ನೆಲೆಸಿರುವ ಸ್ಥಳದಲ್ಲೇ ಸಣ್ಣ ಗುಡಿಯೊಂದನ್ನು ಕಟ್ಟಿಕೊಡುವಂತೆ ಹೇಳಿ ವರ್ಷದಲ್ಲಿ 7 ದಿನಗಳ ಕಾಲ ಮಾತ್ರ ತಾನು ದರ್ಶನ ನೀಡುವುದಾಗಿ ತಿಳಿಸಿದ್ದಳಂತೆ. ಅದರಂತೆ ನಂತರದ ದಿನಗಳಲ್ಲಿ ಈ ಜಾಗದಲ್ಲಿ ಚಿಕ್ಕ ಗುಡಿ ಕಟ್ಟಲಾಯಿತು. ಈ ದೇವಿಯ ಫೋಟೋ ಮಾರಾಟ ಮಾಡುವುದಾಗಲಿ, ಮೊಬೈಲ್, ಕ್ಯಾಮರಾಗಳಲ್ಲಿ ಚಿತ್ರಿಸಿಕೊಳ್ಳುವುದಕ್ಕಾಗಲಿ ದೇವಸ್ಥಾನದಲ್ಲಿ ಅವಕಾಶವಿರುವುದಿಲ್ಲ. ಹಾಗೇನಾದರೂ ಮಾಡಿದಲ್ಲಿ ಅಂತಹವರಿಗೆ ಕೆಟ್ಟದ್ದಾಗುತ್ತದೆ ಎಂಬ ನಂಬಿಕೆ ಭಕ್ತರದ್ದು.

ದೇವಿ ದರ್ಶನಕ್ಕೆ ವರ್ಷದಲ್ಲಿ ಏಳು ದಿನ ಮಾತ್ರ ಅವಕಾಶ ಸಿಗುವುದರಿಂದ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದಾರೆ. ಕಳೆದೆರಡು ವರ್ಷ ಕೊರೊನಾ ಕಾರಣದಿಂದ ದೇವಿಯ ದರ್ಶನ ಪಡೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ಬಾರಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಬಾರಿ ಸಹ ಸಾತೇರಿ ದೇವಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಪ್ರಾರಂಭವಾಗಿದ್ದು, ದೇವಿಯ ದರ್ಶನ ಪಡೆಯುವುದಕ್ಕೆ ಇನ್ನೂ ಮೂರು ದಿನಗಳ ಕಾಲಾವಕಾಶವಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *