ಲೋಕಲ್ news -ಇಂಡಿಯಾ ಬುಕ್ ಆಫ್ ರೇಕಾರ್ಡಿಗೆ ಅಭಿರಾಮ ಎಂಟ್ರಿ..

ಶಿರಸಿ: ಶಿಯೋಮಿ ಕಂಪನಿಯ ವಸ್ತುಗಳನ್ನು ಕಳೆದ ಐದು ವರ್ಷಗಳಿಂದ ಸಂಗ್ರಹಿಸಿ ಯಥಾ ಸ್ಥಿತಿಯಲ್ಲಿ ಇಟ್ಟ ಬಾಲಕನೋರ್ವನಿಗೆ ಇಂಡಿಯಾ ಬುಕ್ ಆಫ್ ರೇಕಾರ್ಡನಲ್ಲಿ ಸ್ಥಾನ ಸಿಕ್ಕಿದೆ.
ಸಿದ್ದಾಪುರ ತಾಲೂಕಿನ ಸರಕುಳಿಯ ಜಗದಂಬಾ ಪೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಅಭಿರಾಮ ಮಹಾಬಲೇಶ್ವ ನಾಯ್ಕ ಎಂಬ ಬಾಲಕನೇ ಇಂಡಿಯಾ ಬುಕ್ ಆಫ್ ರೇಕಾರ್ಡನಲ್ಲಿ ಸ್ಥಾನ ಪಡೆದ ವಿದ್ಯಾರ್ಥಿಯಾಗಿದ್ದಾನೆ. ಈತ ಕಳೆದ ಐದು ವರ್ಷಗಳಿಂದ ಶಿಯೋಮಿ ಕಂಪನಿಯ ವಸ್ತುಗಳನ್ನು, ರ‍್ಯಾಪರ್ ಗಳು ಸುರಕ್ಷಿತವಾಗಿ ಸಂಗ್ರಹಿಸಿ ಇಟ್ಟ ಹಿನ್ನೆಲೆಯಲ್ಲಿ ಈ ಗೌರವ ಲಭಿಸಿದೆ. ಸರಕುಳಿಯ ಜಗದಂಬಾ ಪ್ರೌಡಶಾಲೆಯ ದೈಹಿಕ ಶಿಕ್ಷಕ ಮಹಾಬಲೇಶ್ವರ ನಾಯ್ಕ ಹಾಗೂ ವಿಮಲಾ ನಾಯ್ಕ ಇವರ ಸುಪುತ್ರನಾಗಿದ್ದು ಮೂಲತಃ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದ ಕಾನಳ್ಳಿಯವರಾಗಿದ್ದಾರೆ.






ಬಿಳಗಿ ವಲಯ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟ ತಾಲೂಕಿನ ವಾಜಗೋಡ ಪಂಚಾಯತ್ ವ್ಯಾಪ್ತಿಯ ಗಿಳಸೆ ಕ್ರೀಡಾಂಗಣದಲ್ಲಿ ನಡೆಯಿತು
ಕ್ರೀಡಾಕೂಟ ವನ್ನು ಕ್ರೀಡಾಕೂಟದ ಅಧ್ಯಕ್ಷ ಸಿ ಆರ್ ನಾಯ್ಕ್ ಉದ್ಘಾಟಿಸಿದರು ಲಂಬಾಪುರ್ ಪ್ರೌಢ ಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷ ನಾಗರಾಜ್ ಗೌಡರ್ ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡಾಕೂಟ ಕ್ಕೆ ಚಾಲನೆ ನೀಡಿದರು
ಕ್ರೀಡಾ ಧ್ವಜಾರೋಹಣ ಮಾಡಿ ಕ್ರೀಡಾಪಟು ಗಳಿಗೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು
ವಾಜಗೋಡ ಪಂಚಾಯತ್ ಅಧ್ಯಕ್ಷೆ ಚಂದ್ರಕಲಾ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು
ಸಭೆಯಲ್ಲಿ ಉಪಾಧ್ಯಕ್ಷೆ ಮಂಗಲ ಗೌಡ, ಪಂಚಾಯತ್ ಸದಸ್ಯರಾದ ಕೃಷ್ಣಮೂರ್ತಿ ನಾಯ್ಕ್ ಐಸೂರ್, ಸುರೇಶ್ ನಾಯ್ಕ್, ಎಸ್. ಏನ್ ಭಟ್, ಪ್ರಮುಖರಾದ ಎಂ ಏನ್ ಹೆಗಡೆ, ಏನ್ ಜಿ ಹೆಗಡೆ, ಕೃಷ್ಣ ಸುತ್ತಲಮನೆ, ದೈಹಿಕ ಪರಿವಿಕ್ಷಕ ರಾಜು ನಾಯ್ಕ್, ಪತ್ರಕರ್ತ ದಿವಾಕರ್ ಸಂಪಖಂಡ ಉಪಸ್ಥಿತರಿದ್ದರು
ಈ ವೇಳೆಯಲ್ಲಿ ಲಂಬಾಪುರ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ 9 ವರ್ಷ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡ ಶಿಕ್ಷಕ ವಿನಾಯಕ ವೈದ್ಯ ರನ್ನು ಸನ್ಮಾನಿಸಿ ಗೌರವಿಸಿದರು
ವಿದ್ಯಾರ್ಥಿ ಆದಿತ್ಯ ಹೆಗಡೆ ಯಿಂದ ಪ್ರಾರ್ಥಿಸಿದನು , ಪಲ್ಲವಿ ಸಂಗಡಿಗರು ಸ್ವಾಗತ ಗೀತೆಮೂಲಕ ಸ್ವಾಗತಿಸಿದರು , ಶಿಕ್ಷಕ ಉದಯ ನಾಯ್ಕ್ ಸ್ವಾಗತ ಪ್ರಾಸ್ತಾವಿಕ ಮಾತನಾಡಿದರು ಗಣಪತಿ ಹೆಗಡೆ ನಿರೂಪಿಸಿದರು ಶಿಕ್ಷಕ ಗುರುರಾಜ್ ವಂದಿಸಿದರು.

ಸಿದ್ದಾಪುರ: ವಿಶ್ವಶಾಂತಿ ಸೇವಾ ಟ್ರಸ್ಟ್ ತಾಲೂಕಿನ ಕಲಗದ್ದೆಯ ಶ್ರೀನಾಟ್ಯ ವಿನಾಯಕ ದೇವಸ್ಥಾನದಲ್ಲಿ ಸೆ.೧೩ ಅಂಗಾರಕ ಸಂಕಷ್ಟಿಯ ರಾತ್ರಿ ೮ ಗಂಟೆಗೆ ಪಸಿದ್ಧ ಕಲಾವಿದರುಗಳಿಂದ ರಾಜಾ ಸತ್ಯ‌ ಹರಿಶ್ಚಂದ್ರ ಯಕ್ಷಗಾನ ಪ್ರದರ್ಶನ ಹಾಗೂ ವಿದ್ಯಾವಾಚಸ್ಪತಿ ವಿ.ಉಮಾಕಾಂತ ಭಟ್ಟ‌ ಕೆರೇಕೈ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಮಾರಂಭದ ಅಧ್ಯಕ್ಷತೆಯನ್ನು ದೇವಸ್ಥಾನದ ಪ್ರಧಾ‌ನ ವಿಶ್ವಸ್ಥ ವಿನಾಯಕ ಹೆಗಡೆ ವಹಿಸಿಕೊಳ್ಳಲಿದ್ದು, ಯಕ್ಷ ರಾತ್ರಿಗೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಕುಮಟಾ ಚಾಲನೆ ನೀಡಲಿದ್ದಾರೆ. ಕೆವಿಜಿ ಬ್ಯಾಂಕ್ ಮುಖ್ಯ‌ ಮಹಾಪ್ರಬಂಧಕ ಉಲ್ಲಾಸ ಆರ್.ಗುನಗ, ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನರೇಂದ್ರ‌ ನಾಯಕ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಬಳಿಕ ಜಾನಕೈ ತಿಮ್ಮಪ್ಪ ಹೆಗಡೆ ವಿರಚಿತ ರಾಜಾ ಸತ್ಯ‌ ಹರಿಶ್ಚಂದ್ರ ಯಕ್ಷಗಾನವು ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಪ್ರದರ್ಶನ ಆಗಲಿದೆ.
ಹಿಮ್ಮೇಳದಲ್ಲಿ ಪ್ರಸಿದ್ಧ ಭಾಗವತ ಕೇಶವ ಹೆಗಡೆ ಕೊಳಗಿ, ಶಂಕರ ಭಾಗವತ ಯಲ್ಲಾಪುರ, ವಿಘ್ನೇಶ್ವರ ಗೌಡ ಕೆಸರಕೊಪ್ಪ ಸಹಕಾರ‌ ನೀಡಲಿದ್ದಾರೆ. ಮುಮ್ಮೇಳದಲ್ಲಿ ಕಲಾವಿದರಾದ
ವಿನಾಯಕ ಹೆಗಡೆ‌ ಕಲಗದ್ದೆ, ವಿ.ಉಮಾಕಾಂತ ಭಟ್ಟ ‌ಕೆರೇಕೈ, ಡಾ‌.ಜಿ.ಎಲ್.ಹೆಗಡೆ ಕುಮಟಾ, ಮೋಹನ ಭಾಸ್ಕರ ಹೆಗಡೆ ಹೆರವಟ್ಟ ನಾಗೇಂದ್ರ‌ ಮುರೂರು, ಮಹಾಬಲೇಶ್ವರ ಇಟಗಿ, ವೆಂಕಟೇಶ ಬೊಗ್ರಿಮಕ್ಕಿ, ಅವಿನಾಶ ಕೊಪ್ಪ, ವಿನಯ‌ ಹೊಸ್ತೋಟ, ತುಳಸಿ ಹೆಗಡೆ ಇತರರು ಪಾಲ್ಗೊಳ್ಳುವರು. ಯಕ್ಷಗಾನದ‌ ಮುಂಚೂಣಿ ಕಲಾವಿದರ ಜೊತೆ ತಾಳಮದ್ದಲೆಯ ಹೆಸರಾಂತ ಕಲಾವಿದರಾದ ಕೆರೇಕೈ ಅವರು ವಿಶ್ವಾಮಿತ್ರ, ಮೋಹನ ಹೆಗಡೆ ಅವರು ಚಂದ್ರಮತಿ, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅವರು ವೀರಬಾಹುಕರಾಗಿ‌ ಕಾಣಿಸಿಕೊಳ್ಳಲಿದ್ದಾರೆ. ಹಳೆ ಬೇರು ಹೊಸ ಚಿಗುರಿನ ಮಿಳಿತ, ವೃತ್ತಿ, ಪ್ರವೃತ್ತಿ ಕಲಾವಿದರ ಕೂಡುವಿಕೆ ಇಲ್ಲಾಗಲಿದೆ. ಯಕ್ಷಗಾನದ ಪ್ರಸಾದನವನ್ನು ಎಂ.ಆರ್.ನಾಯ್ಕ ಕರ್ಸೇಬೈಲ್ ಮತ್ತು ಅವರ ಬಳಗ ನೀಡಲಿದೆ‌‌ ಯಕ್ಷಗಾನ ಉಚಿತ ಪ್ರದರ್ಶನವಾಗಿದ್ದು, ಕಲಾಸಕ್ತರು ಹೆಚ್ಚಿನವರು ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಟ್ರಸ್ಟ್ ‌ಕಾರ್ಯದರ್ಶಿ ಗಾಯತ್ರೀ ರಾಘವೇಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *