ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ನಿಧನ: ಸ್ವಗ್ರಾಮದಲ್ಲಿ ಇಂದು ಸಂಜೆ ಅಂತ್ಯಕ್ರಿಯೆ, ಅಂತಿಮ ದರ್ಶನಕ್ಕೆ ವ್ಯವಸ್ಥೆ

ಕಳೆದ ರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಇಂದು ಬುಧವಾರ ಅವರ ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ.

CM Basavaraja Bommai and ministers visits M S Ramaiah hospital where minister Umesh Katti died

ಬೆಂಗಳೂರು/ಬೆಳಗಾವಿ: ಕಳೆದ ರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೊನಿಯ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿರುವ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಇಂದು ಬುಧವಾರ ಅವರ ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ.

ಒಂದು ದಿನ ಶೋಕಾಚರಣೆ

 ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಉಮೇಶ್ ಕತ್ತಿಯವರ ಅಂತ್ಯಕ್ರಿಯೆ ನಡೆಯಲಿದ್ದು ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ದಿನದ ಶೋಕಾಚರಣೆಯನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪಾರ್ಥೀವ ಶರೀರ ಇಂದು ಬೆಳಗ್ಗೆ 10 ಗಂಟೆಗೆ ಅವರ ಹುಟ್ಟೂರು ಬೆಳಗಾವಿ ಜಿಲ್ಲೆಯ ಬೆಲ್ಲದ ಬಾಗೇವಾಡಿಗೆ ರವಾನೆಯಾಗಬೇಕಿತ್ತಾದರೂ, ಚೆನೈನಿಂದ ಬರಬೇಕಿದ್ದ ವಿಶೇಷ ವಿಮಾನ ಬೆಂಗಳೂರು ತಲುಪುವುದು ತಡವಾಗಿದ್ದರಿಂದ ದೇಹವಿನ್ನೂ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿದೆ. ಪ್ರತಿಕೂಲ ಹವಾಮಾನದ ಕಾರಣ ವಿಮಾನ ಆಗಮಿಸುವುದು ವಿಳಂಬವಾಗುತ್ತಿದೆ ಎನ್ನಲಾಗಿದೆ.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕನಸುಗಾರ ಉಮೇಶ್ ಕತ್ತಿ: ಅರ್ಧಕ್ಕೆ ನಿಂತ ಅವಿರತ ಹೋರಾಟ; ಸ್ಪರ್ಧಿಸಿದ್ದ 9 ಚುನಾವಣೆಗಳಲ್ಲಿ 8 ಬಾರಿ ಗೆಲುವು! https://t.co/3uda9esXDN via @KannadaPrabha @XpressBengaluru @BJP4Karnataka @naushadbijapur— kannadaprabha (@KannadaPrabha) September 7, 2022

ಶಾಲಾ-ಕಾಲೇಜುಗಳಿಗೆ ರಜೆ

ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಗೆ ಸಿಎಂ, ಸಂಜೆ ಅಂತ್ಯಕ್ರಿಯೆಯಲ್ಲಿ ಭಾಗಿ

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸಹೋದ್ಯೋಗಿಗಳು ಬೆಳಗಾವಿಗೆ ಇಂದು ತೆರಳಲಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಈಗಾಗಲೇ ಬೆಳಗಾವಿಗೆ ಹೊರಟಿದ್ದಾರೆ. ಉಮೇಶ್ ಕತ್ತಿಯವರಿಗೆ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ನಿನ್ನೆ ರಾತ್ರಿ ಗೊತ್ತಾದ ಕೂಡಲೇ ಬೆಂಗಳೂರು ಮಳೆಯ ಹಿನ್ನೆಲೆಯಲ್ಲಿ ನೈಟ್ ರೌಂಡ್ಸ್ ಮಾಡುತ್ತಿದ್ದ ಸಿಎಂ ಎಲ್ಲಾ ಕೆಲಸ ಕಾರ್ಯಗಳನ್ನು ಅರ್ಧಕ್ಕೆ ನಿಲ್ಲಿಸಿ ಆಸ್ಪತ್ರೆಗೆ ಧಾವಿಸಿದರು.

ಕತ್ತಿಯವರ ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಯಡಿಯೂರಪ್ಪನವರು ಶಿವಮೊಗ್ಗದಿಂದ ಬೆಳಗಾವಿಯತ್ತ ಹೊರಟಿದ್ದಾರೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಷ್ಟೇ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಉಮೇಶ್ ಕತ್ತಿಯವರ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು, ನಾನು ಮತ್ತು ಸಚಿವ ಉಮೇಶ್ ಕತ್ತಿ ಸ್ನೇಹಿತರು, ನೇರ ನಡೆ ನುಡಿಯ ಉಮೇಶ್ ಕತ್ತಿ ಮಾತಿನಲ್ಲಿ ಕಠೋರವಾದರೂ ಮನಸ್ಸಿನಲ್ಲಿ ಒಳ್ಳೆಯವರು, ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನಾನೂ ಬೆಳಗಾವಿಗೆ ಹೋಗುತ್ತೇನೆ ಎಂದರು. 

ಉಮೇಶ್ ಕತ್ತಿ ವಿಧಿವಶ ಹಿನ್ನೆಲೆ ಸಿದ್ದರಾಮಯ್ಯನವರ ಇಂದಿನ ಕನ್ಯಾಕುಮಾರಿ ಪ್ರವಾಸ ರದ್ದು ಗೊಳಿಸಲಾಗಿದೆ. ಕತ್ತಿ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಧ್ಯಾಹ್ನ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ.

ರಾಜಕೀಯ ಗಣ್ಯರು ಹೆಚ್​ಎಎಲ್​ ಏರ್​ಪೋರ್ಟ್ ನಲ್ಲಿ ಉಮೇಶ್ ಕತ್ತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೃಷಿ ಸಚಿವ ಬಿಸಿ. ಪಾಟೀಲ್, ಸಚಿವ ಭೈರತಿ ಬಸವರಾಜ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕೆಜೆ ಜಾರ್ಜ್, ಎಮ್.ಟಿ.ಬಿ. ನಾಗರಾಜ್ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದರು. 

ಅಂತ್ಯಕ್ರಿಯೆಗೆ ಸಿದ್ಧತೆ

ಬೆಲ್ಲದ ಬಾಗೇವಾಡಿ ಹೊರವಲಯದಲ್ಲಿರುವ ವಿಶ್ವರಾಜ್ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿದ್ದು, ಮಧ್ಯಾಹ್ನ 3.30ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನು ಕೆಲವೇ ಹೊತ್ತಿನಲ್ಲಿ ಹೆಚ್ ಎಎಲ್ ವಿಮಾನ ನಿಲ್ದಾಣ ಮೂಲಕ ಮೃತದೇಹವನ್ನು ವಿಶೇಷ ವಿಮಾನದಲ್ಲಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರವನ್ನು ತರಲಿದ್ದಾರೆ. ಅಲ್ಲಿಂದ ನೇರವಾಗಿ ಬೆಲ್ಲದ ಬಾಗೇವಾಡಿಯಲ್ಲಿರುವ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆಗೆ ಮೃತದೇಹ ಶಿಪ್ಟ್ ಮಾಡಲಾಗುತ್ತದೆ. ಅಲ್ಲಿಂದ ಬೆಲ್ಲದ ಬಾಗೇವಾಡಿಯ ಸ್ವಂತ ನಿವಾಸಕ್ಕೆ ಪಾರ್ಥಿವ ಶರೀರ ಸ್ಥಳಾಂತರವಾಗಲಿದ್ದು, ಮನೆಯ ಆವರಣದಲ್ಲಿ ಕುಟುಂಬಸ್ಥರು ಪೂಜೆ ಪುರಸ್ಕಾರ ನೆರವೇರಿಸಲಿದ್ದಾರೆ. ಸಂಜೆ ಐದು ಗಂಟೆಗೆ ಉಮೇಶ್ ಕತ್ತಿ ಅವರ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಬೆಳಗಾವಿಗೆ ಅವರ ಪಾರ್ಥಿವ ಶರೀರ ಬಂದು ತಲುಪಲಿದೆ. ಬೆಳಗ್ಗೆ 10.30ರ ವರೆಗೆ ಶಿವಬಸವನಗರದ ನಿವಾಸದ ಎದುರು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 10.30ಕ್ಕೆ ಬೆಳಗಾವಿಯಿಂದ ಸಂಕೇಶ್ವರದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಎದುರು ಅಂತಿಮ ದರ್ಶನ. ಬಳಿಕ 12ಗಂಟೆಗೆ ಸ್ವಗ್ರಾಮ ಬೆಲ್ಲದ ಬಾಗೇವಾಡಿ ಗ್ರಾಮಕ್ಕೆ ಮೃತದೇಹ ರವಾನೆಯಾಗಲಿದೆ. 12ರಿಂದ ಸಂಜೆ ಐದು ಗಂಟೆವರೆಗೂ ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ. ಸಂಜೆ 5 ಗಂಟೆಗೆ ಉಮೇಶ್ ಕತ್ತಿಯವರ ಜಮೀನಿನಲ್ಲಿ ತಂದೆ ತಾಯಿಯ ಸಮಾಧಿ ಪಕ್ಕದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ತಿಳಿದುಬಂದಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

ಎಚ್ಚರ!: ಒಟಿಪಿ ಬೇಕೇ ಇಲ್ಲ, ಆದರೂ ನಿಮ್ಮ ಖಾತೆಗೆ ಬೀಳುತ್ತೆ ಕನ್ನ!

https://www.youtube.com/watch?v=0hmFtRvXqHc&t=88s ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. (ಸಂಗ್ರಹ ಚಿತ್ರ) ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಒಟಿಪಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *