ಯಮನಂತೆ ಬಂದ ಕಾರು: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು!

ಗೋವಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದೇವರ ದರ್ಶನಕ್ಕೆ ಬಂದು ವಾಪಸಾಗುತ್ತಿದ್ದ ಕಾರವಾರ ಕುಟುಂಬದ ಸದಸ್ಯರು ಮೃತಪಟ್ಟಿದ್ದಾರೆ.

ವಾಸ್ಕೋ/ಕಾರವಾರ: ದೇವರ ದರ್ಶನ ಮುಗಿಸಿ ವಾಪಸ್​ ಆಗುತ್ತಿದ್ದ ಕಾರೊಂದು ಭೀಕರ ಅಪಘಾತಗೊಂಡು ಕಾರವಾರ ಕುಟುಂಬದ ಸದಸ್ಯರು ಮೃತಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಈ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಗೋವಾದ ವಾಸ್ಕೋದಲ್ಲಿ ಸಂಭವಿಸಿದೆ.

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮೃತರು ಕಾರವಾರ ತಾಲೂಕಿನ ಮಾಜಾಳಿ ಮೂಲದವರಾಗಿದ್ದು, ಉಲ್ಲಾಸ್ ನಾಗೇಕರ್​​ ಕುಟುಂಬ ಸದ್ಯ ವಾಸ್ಕೋ ನಿವಾಸಿಗಳಾಗಿದ್ದಾರೆ. ಉಲ್ಲಾಸ್ ಸೇರಿದಂತೆ ಅವರ ಕುಟುಂಬದ ಒಟ್ಟು ಎಂಟು ಸದಸ್ಯರು ಕಾರಿನಲ್ಲಿ ವಾಸ್ಕೋದಿಂದ ಕಾರವಾರದ ಹಣಕೋಣದಲ್ಲಿರುವ ಸಾತೇರಿ ದೇವಿಯ ದರ್ಶನಕ್ಕೆ ಬಂದಿದ್ದರು. ದೇವಿ ದರ್ಶನ ಪಡೆದು ಬಳಿಕ ವಾಸ್ಕೋಗೆ ವಾಪಸ್​ ತೆರಳುತ್ತಿದ್ದರು. ಈ ವೇಳೆ ಗೋವಾದ ಕಾಣಕೋಣದ ಮನೋಹರ್ ಪರಿಕ್ಕರ್ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್​ನಲ್ಲಿ ಭೀಕರ ಅಪಘಾತ ಸಂಭವಿಸಿದೆ.

Karwar family killed in road accident  road accident at Goa  Accident in Manohar Parrikar national highway  ಭೀಕರ ರಸ್ತೆ ಅಪಘಾತ  ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು  ಗೋವಾದಲ್ಲಿ ಭೀರಕ ರಸ್ತೆ ಅಪಘಾತ  ಕಾರವಾರ ಕುಟುಂಬದ ಸದಸ್ಯರು ಮೃತ  ಅಪಘಾತದಲ್ಲಿ ಹಲವು ಮಂದಿ ಗಾಯ  ಸಾತೇರಿ ದೇವಿಯ ದರ್ಶನ

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಡ್ಗಾಂವ್​ನಿಂದ ಅತಿವೇಗದಲ್ಲಿ ಬಂದ ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದು ಬಲ ಭಾಗದಲ್ಲಿ ಬರುತ್ತಿದ್ದ ಉಲ್ಲಾಸ್ ಅವರ ಕುಟುಂಬವಿದ್ದ ಕಾರಿಗೆ ಎದುರಿನಿಂದ ಗುದ್ದಿದೆ. ಅಷ್ಟೇ ಅಲ್ಲದೇ, ಅಲ್ಲೇ ಚಲಿಸುತ್ತಿದ್ದ ಸ್ಕೂಟರ್​ವೊಂದಕ್ಕೂ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದಲ್ಲಿ ಉಲ್ಲಾಸ ನಾಗೇಕರ್, ಅವರ ಪತ್ನಿ ವೀಣಾ ನಾಗೇಕರ್ ಹಾಗೂ ಅವರ ಪುತ್ರ ಹರೀಶ್ ನಾಗೇಕರ್ ಮೃತಪಟ್ಟಿದ್ದು, ಉಳಿದ ಕುಟುಂಬ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕ ಮತ್ತು ಸ್ಕೂಟರ್​ ಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಲಾಗಿದೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *