

ಚಾಲಕನಾಗಿ ಕೆಲಸಮಾಡುತಿದ್ದ ೫೬ ವರ್ಷ ಪ್ರಾಯದ ಗುತ್ಯಾ ಸಣ್ಣಹುಡುಗ ಎಂಬುವ ವ್ಯಕ್ತಿ ಸ್ವಂತ ಪತ್ನಿ ರೇಣುಕಾ ಚೆನ್ನಯ್ಯಳ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿ ನಂತರ ತಾನೂ ವಿಷ ಕುಡಿದು ಆಸ್ಫತ್ರೆ ಸೇರಿದ ಘಟನೆ ಸಿದ್ದಾಪುರ ಕಾನಗೋಡಿನ ಗಣೇಶ ನಗರದಲ್ಲಿ ನಡೆದಿದೆ.

ಈ ಬಗ್ಗೆ ಬಾಧಿತೆ ರೇಣುಕಾ ಚೆನ್ನಯ್ಯ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆಸ್ತಿ ಹಂಚಿಕೆ ವಿಚಾರದಲ್ಲಿ ಬೇಸರಗೊಂಡಿದ್ದ ತನ್ನ ಪತಿ ದಿನನಿತ್ಯ ಕುಡಿದು ಬಂದು ಗಲಾಟೆ ಮಾಡುತಿದ್ದು ಇಂದು ಅಡುಗೆ ಮಾಡುವ ವಿಚಾರದಲ್ಲಿ ಮಧ್ಯಾಹ್ನ ಒಂದು ಗಂಟೆಯ ಮೊದಲು ಜಗಳ ಮಾಡಿ ಹೋದವನು ಮತ್ತೆ ನಾಲ್ಕರ ಸುಮಾರಿಗೆ ಬಂದು ಖ್ಯಾತೆ ತೆಗೆದು ಅಡುಗೆ ಮನೆಯಲ್ಲಿದ್ದ ತನ್ನ ಮೇಲೆ ಪೆಟ್ರೋಲ್ ಸುರುವಿ, ಬೆಂಕಿ ಹಚ್ಚಿ ಹಲ್ಲೆ ಮಾಡಿರುವುದಲ್ಲದೆ ತಾನೂ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ ಎಂದು ವಿವರಿಸಿದ್ದಾರೆ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
