ಕಾರವಾರ: 3 ಕಿಲೋ ಮೀಟರ್​ ರಸ್ತೆಗಾಗಿ ಮನವಿ ಹಿಡಿದು 130ಕಿ.ಮೀ ದೂರ ಬಂದರೂ ಸಿಗದ ಸಚಿವರು

Thumbnail image

ಗ್ರಾಮಕ್ಕೆ ಅಗತ್ಯ ಇರುವ ರಸ್ತೆ ಸೌಲಭ್ಯದ ಬಗ್ಗೆ ಸಚಿವರ ಗಮನಕ್ಕೆ ತರಲು ಜನ ಸಂದರ್ಶದ ವೇಳೆ ಭೇಟಿಯಾಗಲೆಂದು ನೂರಾರು ಕಿಲೋ ಮೀಟರ್​ನಿಂದ ಬಂದ ಗ್ರಾಮಸ್ಥರಿಗೆ ಬೇಸರ ಕಾದಿತ್ತು. ಸಚಿವರು ಸಭೆ ರದ್ದುಪಡಿಸಿ ತೆರಳಿದ್ದರು.

ಕಾರವಾರ(ಉತ್ತರ ಕನ್ನಡ): ಜಿಲ್ಲಾ ಉಸ್ತುವಾರಿ ಸಚಿವರಿಂದ ಅಹವಾಲು ಸ್ವೀಕಾರದ ಮಾಹಿತಿ ಆಧರಿಸಿ ನೂರಾರು ಕಿ.ಮೀ ದೂರದ ಕುಗ್ರಾಮದಿಂದ ಸಚಿವರನ್ನು ಕಂಡು ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಗ್ರಾಮಸ್ಥರಿಗೆ ಸಚಿವರು ಸಿಗದೆ ಪರದಾಡಿದ ಘಟನೆ ಕಾರವಾರದಲ್ಲಿ ಶುಕ್ರವಾರ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಶುಕ್ರವಾರ ಕಾರವಾರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸುವ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿತ್ತು.

ಅದರಂತೆ ಕುಮಟಾ ತಾಲೂಕಿನ ಕುಗ್ರಾಮ ಮೇದಿನಿಯ ಜನರು ಮಾಹಿತಿ ಗಮನಿಸಿ ಒಟ್ಟಾಗಿ ಕಾರವಾರಕ್ಕೆ ತೆರಳಲು ನಿರ್ಧರಿಸಿದ್ದರು. ಬೆಳಗ್ಗೆ 5 ಗಂಟೆಗೆ ದಟ್ಟ ಅರಣ್ಯದಲ್ಲಿ ಕಾಲ್ನಡಿಗೆಯಲ್ಲಿ 8 ಕಿ.ಮೀ ನಡೆದು ಬಸ್ ಮೂಲಕ ಸುಮಾರು 20ಕ್ಕೂ ಹೆಚ್ಚು ಜನರು ನೂರಾರು ಕಿ.ಮೀ ದೂರದ ಜಿಲ್ಲಾ ಕೇಂದ್ರ ಕಾರವಾರವನ್ನು ತಲುಪಿದ್ದರು.

ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯವೂ ವ್ಯರ್ಥ : ಆದರೆ ಕಾರವಾರದಲ್ಲಿ ಸಚಿವರ ಕಾರ್ಯಕ್ರಮ ರದ್ದುಪಡಿಸಲಾಗಿತ್ತಾದರೂ ಈ ಬಗ್ಗೆ ಸರಿಯಾದ ಮಾಹಿತಿ ಸಿಗದ ಕಾರಣ ಗ್ರಾಮಸ್ಥರು ಪರದಾಡುವಂತಾಯಿತು. ಸುಮಾರು 130 ಕಿ.ಮೀ ದೂರ ಪ್ರಯಾಣ ಬೆಳಸಿದರು ಸಚಿವರನ್ನು ಕಾಣಲಾಗದೆ ಕೊನೆಗೆ ಸಚಿವ ಕಚೇರಿಗೆ ತೆರಳಿ ಸಮಸ್ಯೆ ಬಗ್ಗೆ ವಿನಂತಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಗ್ರಾಮಕ್ಕೆ ಅಗತ್ಯವಿರುವ ರಸ್ತೆಗಾಗಿ ಮನವಿ ಮಾಡುತ್ತಿದ್ದೇವೆ. ಆದರೆ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಇಬ್ಬರು ಜಿಲ್ಲಾಧಿಕಾರಿ ಕೂಡ ಗ್ರಾಮದಲ್ಲಿ ಗ್ರಾಮ‌ವಾಸ್ತವ್ಯ ಮಾಡಿ ಸಮಸ್ಯೆ ಅರಿತಿದ್ದಾರೆ.

ಮೂರು ಕಿ.ಮೀ. ರಸ್ತೆಗಾಗಿ ಮನವಿ : ಆದರೆ ದೊಡ್ಡ ಮಟ್ಟದ ಅನುದಾನ ಬೇಕಾಗಿರುವುದರಿಂದ ಪ್ರಯತ್ನಿಸುವುದಾಗಿ ತಿಳಿಸುತ್ತಿದ್ದಾರೆ. ಆದರೆ ಗ್ರಾಮಕ್ಕೆ 7 ಕಿ.ಮೀ ರಸ್ತೆ ಅವಶ್ಯಕತೆ. ಆದರೆ ಅನುದಾನ ದೊಡ್ಡಮಟ್ಟದಲ್ಲಿ ಬೇಕು ಎಂದು ಪ್ರತಿ ಬಾರಿಯೂ ನಮ್ಮ‌ ಮನವಿ ತಿರಸ್ಕರಿಸಲಾಗುತ್ತಿದೆ. ಆದರೆ ನಮಗೆ 7 ಕಿ.ಮಿ ಬದಲಾಗಿ ತುರ್ತಾಗಿ ಅಗತ್ಯವಿರುವ ಕೇವಲ 3 ಕಿ.ಮೀ ರಸ್ತೆ ನಿರ್ಮಾಣ ಮಾಡಿಕೊಡಬೇಕಾಗಿದೆ.

ವಿದ್ಯುತ್​ ಸಮಸ್ಯೆ : ಇದಲ್ಲದೆ ಗ್ರಾಮಕ್ಕೆ ಅಗತ್ಯವಿದ್ದ ವಿದ್ಯುತ್ ಸಂಪರ್ಕವನ್ನು ಕಳೆದ ಕೆಲ ವರ್ಷದ ಹಿಂದೆ ಒದಗಿಸಲಾಗಿದೆಯಾದರೂ ಯಾರಿಗೂ ಪ್ರಯೋಜನವಾಗದ ಸ್ಥಿತಿ ನಿರ್ಮಾಣವಾಗಿದೆ. ದಟ್ಟ ಅಡವಿಯ ನಡುವೆ ಕಂಬಗಳನ್ನು ಹುಗಿದು ವಿದ್ಯುತ್ ಕೊಂಡೊಯ್ಯಲಾಗಿದೆ. ಆದರೆ ಪ್ರತಿ ಮಳೆಗಾಲದ ವೇಳೆಗೆ ವಿದ್ಯುತ್ ಕಂಬಗಳು ಧರೆಗುರುಳುತ್ತಿದ್ದು ವಿದ್ಯುತ್ ವರ್ಷದಲ್ಲಿ ಮೂರು ತಿಂಗಳು ಸಿಗದಂತಾಗಿದೆ. ಆದ ಕಾರಣ ಗ್ರಾಮಕ್ಕೆ ಅಗತ್ಯವಿರುವ ವಿದ್ಯುತ್ ಅನ್ನು ಅಂಡರ್ ಗ್ರೌಂಡ್ ಕೆಬಲ್ ಮೂಲಕ ಪೂರೈಸಬೇಕು.

ಇದರಿಂದ ಸರ್ಕಾರಕ್ಕೆ ಪ್ರತಿ ವರ್ಷ ನಿರ್ವಹಣೆ ವೆಚ್ಚ ಕಡಿಮೆಯಾಗುವುದಲ್ಲದೆ ಜನರಿಗೂ ನಿತ್ಯ ವಿದ್ಯುತ್ ಪೂರೈಕೆಯಾಗಲಿದೆ ಎಂಬುದು ಸೇರಿದಂತೆ ಹಲವು ಸಮಸ್ಯೆಗ ಬಗ್ಗೆ ಒತ್ತಾಯಿಸಿ ಮನವಿ ನೀಡಲು ಆಗಮಿಸಿದ್ದರು. ಆದರೆ ಸಚಿವರು ಕಾರ್ಯಕ್ರಮ ಬದಲಾಯಿಸಿ ತೆರಳಿದ ಕಾರಣ ಗ್ರಾಮಸ್ಥರಿಗೆ ಸಿಕ್ಕಿಲ್ಲ.‌ ಬಳಿಕ ಅವರ ಕಾರ್ಯಾಲಯಕ್ಕೆ ಮನವಿ ಸಲ್ಲಿಸಿರುವ ಗ್ರಾಮಸ್ಥರು ಅಲ್ಲಿನ ಸಿಬ್ಬಂದಿ ಸಚಿವರ ಗಮನಕ್ಕೆ ತರುವ ಭರವಸೆ ನೀಡಿದ ಬಳಿಕ ವಾಪಸ್​ ಆಗಿದ್ದಾರೆ.

ಆಗ್ರಹ : ಆದರೆ 130 ಕಿ.ಮೀ ದೂರದಿಂದ ಶೂಕ್ರವಾರ ಮುಂಜಾನೆ 5 ಗಂಟೆಗೆ ಎದ್ದು ಬಂದರೂ ಸಚಿವರನ್ನು ಕಾಣದೆ ವಾಪಸ್​ ಆಗುತ್ತಿರುವುದು ಬೇಸರ ತಂದಿದೆ.‌ ಸಚಿವರು ನಮ್ಮ‌ ಸಮಸ್ಯೆಗೆ ಸ್ಪಂದಿಸಿ ಆದಷ್ಟು ಬೇಗ ರಸ್ತೆಗೆ ಅಗತ್ಯವಿರುವ ಅನುದಾನ ನೀಡಿ ಗ್ರಾಮದ ಬಹುದೊಡ್ಡ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರಾದ ಕೃಷ್ಣಾ ಗೌಡ ಒತ್ತಾಯಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *