ನಾರಾಯಣ ಗುರು ಸಮಾನತೆಯ ಚೈತನ್ಯದ ಸಂಕೇತ

ಸಿದ್ದಾಪುರ: ತಾಲೂಕಾ ಆಡಳಿತ, ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತಾಲೂಕಾ ಆಡಳಿತ ಸೌಧದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ರಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಆಚರಿಸಲಾಯಿತು.
ಹಿರಿಯ ವಕೀಲ ಎನ್‌.ಡಿ.ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾರಾಯಣಗುರುಗಳ ಅಂದಿನ ಕಾಲದ ಹೋರಾಟ, ಸೇವೆಯನ್ನು ಸ್ಮರಿಸುವ ಜತೆಗೆ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಭಾರತದ ಇತಿಹಾಸದಲ್ಲಿ ಕ್ರಾಂತಿ ಮಾಡಿದ ರಾಜ್ಯ ಕೇರಳದಲ್ಲಿ ಹುಟ್ಟಿ ತುಳಿತಕ್ಕೊ ಳಗಾದ ಸಮಯದಾಯಗಳನ್ನು ಮೇಲಕ್ಕೆತ್ತಿದ ನಾರಾಯಣಗುರುಗಳ ಕೊಡುಗೆ ಅಪಾರವಾಗಿದೆ. ಅವರ ಹೆಸರು ಶಾಶ್ವತವಾಗಿಡುವ ಕೆಲಸ ನಮ್ಮಿಂದಾಗಬೇಕು ಎಂದರು.
ತಾಲೂಕಾ ನಾಮಧಾರಿ ಸಂಘದ ಅಧ್ಯಕ್ಷ ಕೆ.ಜಿ.ನಾಯ್ಕ ಮಾತನಾಡಿ, ಸರ್ಕಾರಿ ಜಯಂತಿಗಳು ಅಧಿಕಾರಿಗಳ ಜಯಂತಿಗಳಾಗದೇ ಜನರ ಪಾಲ್ಗೊಳ್ಳುವಿಕೆ ಇರಬೇಕು. ನಾರಾಯಣಗುರುಗಳು ಹಿಂದುಳಿದ ವರ್ಗ, ದಲಿತರುಗಳಿಗೆ ಅನೇಕ ಸಂದೇಶ ನೀಡಿದ್ದರು. ಅವರು ಹಾಕಿಕೊಟ್ಟ ಮಾನವೀಯತೆಯ ಮೌಲ್ಯಗಳ ಕುರಿತು ಮನೆಮನೆಗೆ ಮಾಹಿತಿ ನೀಡಬೇಕು ಎಂದರು.


ಪತ್ರಕರ್ತ ಕನ್ನೇಶ ಕೋಲಶಿರ್ಸಿ ಉಪನ್ಯಾಸ ನೀಡಿ, ಸಾಮಾಜಿಕ ಸ್ಥಿತಿಗತಿಗನುಗುಣವಾಗಿ ನಾರಾಯಣಗುರುಗಳು ಧಾರ್ಮಿಕ ಆಚರಣೆಯ ತಾರತಮ್ಯದ ವಿರುದ್ಧ ಸಿಡಿದೆದ್ದಿದ್ದರು. ನಾರಾಯಣಗುರು ಚಳವಳಿ ಹಾಗೂ ವೈಚಾರಿಕತೆಯ ಆಧಾರದಲ್ಲಿ ಅಂಬೇಡ್ಕರ್ ಬಂದರು. ಜನಸಾಮಾನ್ಯರ ಪರವಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮಾನತೆ ಕೇಳಿದ್ದರು. ನಮ್ಮ ಸ್ವಾಭಿಮಾನ, ಹಕ್ಕಿನ ಕಾರಣಕ್ಕೆ ನಾರಾಯಣಗುರು ನಮಗೆ ಬೇಕಾಗಿದ್ದಾರೆ ಎಂದರು.


ತಹಶೀಲ್ದಾರ ಸಂತೋಷ ಭಂಡಾರಿ ಪ್ರಾಸ್ತಾವಿಕ ಮಾತನಾಡಿ, ಅರಸೊತ್ತಿಗೆ, ಬಾಲ್ಯವಿವಾಹ, ಕಂದಾಚಾರ, ಮೇಲ್ವರ್ಗದವರ ದಬ್ಬಾಳಿಕೆ ವಿಜೃಂಭಿಸುತ್ತಿರುವ ಕಾಲಘಟ್ಟದಲ್ಲಿ ಶಿಕ್ಷಣದ ಮೂಲಕ ಕ್ರಾಂತಿಯನ್ನುಂಟು ಮಾಡಿದ ಮಹಾನ್ ಮಾನವತಾವಾದಿಯಾಗಿದ್ದರು. ಅವರು ಹಾಕಿ ಕೊಟ್ಟ ಆದರ್ಶಗಳನ್ನು ಪಾಲಿಸೋಣ ಎಂದರು.


ಸಿದ್ದಾಪುರ ಪಟ್ಟಣ ಪಂಚಾಯತ ಉಪಾಧ್ಯಕ್ಷ ರವಿಕುಮಾರ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ವೇಳೆ ತಾಲೂಕಾ ನಾಮಧಾರಿ ಸಮಾಜ ಅಭಿವೃದ್ಧಿ ಸಂಘದ ಗೌರವಾಧ್ಯಕ್ಷ ಆನಂದ ನಾಯ್ಕ, ಉಪಾಧ್ಯಕ್ಷ ವಿ.ಎನ್.ನಾಯ್ಕ, ಕಾರ್ಯದರ್ಶಿ ಎಸ್.ಎಂ.ನಾಯ್ಕ, ತಾಲೂಕಾ ಆರೋಗ್ಯಾಧಿಕಾರಿ ಲಕ್ಷ್ಮೀಕಾಂತ ನಾಯ್ಕ, ಬಿ.ಎಸ್.ಎನ್.ಡಿ.ಪಿ ಸಂಘಟನೆಯ ಅಧ್ಯಕ್ಷ ವಿನಾಯಕ ನಾಯ್ಕ, ಪ್ರಮುಖರಾದ ವಸಂತ ನಾಯ್ಕ ಮನಮನೆ, ಬಿ.ಆರ್.ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಶಿರಸ್ತೆದಾರ ಎನ್.ಐ.ಗೌಡ ಸ್ವಾಗತಿಸಿದರು. ಕಂದಾಯ ಇಲಾಖೆಯ ಗಣೇಶ ನಿರೂಪಿಸಿದರು.

ಸಾಧಕರಿಗೆ ಸನ್ಮಾನ
ಯಕ್ಷಗಾನ ಕಲಾವಿದ ನಂದನ ನಾಯ್ಕ ಹಾರ್ಸಿಕಟ್ಟಾ, ಹಿರಿಯ ವಕೀಲ ಎನ್.ಡಿ.ನಾಯ್ಕ, ಸಾಹಿತಿ ವಿ.ಎಂ.ನಾಯ್ಕ ಅವರಗುಪ್ಪಾ, ಯಕ್ಷಗಾನ ಅಕಾಡೆಮಿಯಿಂದ ಯಕ್ಷಸಿರಿ ಪ್ರಶಸ್ತಿ ಪಡೆದ ಕೃಷ್ಣಾಜಿ ಬೇಡ್ಕಣಿ, ಪುನೀತ ರಾಜಕುಮಾರ ಅನಾಥಾಶ್ರಮದ ಮಮತಾ ನಾಯ್ಕ, ಹಿರಿಯರಾದ ಬಿ.ಆರ್.ನಾಯ್ಕ ಇವರನ್ನು ಇದೇ ವೇಳೆ ಸನ್ಮಾನಿಸಲಾಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *