ಅಡಕೆ ಕೊಳೆ ರೋಗ : ಮರೀಚಿಕೆಯಾಗಿದೆ ಪರಿಹಾರ

nut-blight-disease-at-uttharakannada

ಉತ್ತರ ಕನ್ನಡ ಜಿಲ್ಲೆಯಲ್ಲಿ ಏರುತ್ತಿದೆ ಅಡಕೆ ಕೊಳೆ ರೋಗ : ಮರಿಚೀಕೆಯಾಗಿದೆ ಪರಿಹಾರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಅಡಕೆ ಬೆಳೆಗೆ ಕೊಳೆರೋಗ ಆವರಿಸುವ ಭೀತಿ ಉಂಟಾಗಿದೆ. ಕೊಳೆರೋಗಕ್ಕೆ ತುತ್ತಾಗಿರುವ ಸಾವಿರಾರು ಹೆಕ್ಟೇರ್ ಪ್ರದೇಶದ ಅಡಕೆ ಬೆಳೆಗೆ ಸರ್ಕಾರದ ಪರಿಹಾರ ಮಾತ್ರ ಮರೀಚಿಕೆಯಾಗಿದೆ.

ಶಿರಸಿ (ಉತ್ತರಕನ್ನಡ) : ಅತಿಯಾದ ಮಳೆ, ಆಗಾಗ ಬಂದು ಹೋಗುವ ಬಿಸಿಲು ಮಲೆನಾಡಿನ ಪ್ರಮುಖ ಬೆಳೆ ಅಡಕೆ ಬೆಳೆಗೆ ಕೊಳೆರೋಗ ಆವರಿಸುವ ಭೀತಿ ಉಂಟಾಗಿದೆ. ಅಡಕೆ ಬೆಳೆ ಹಾನಿಗೆ ಅಲ್ಪ ಮೊತ್ತದ ವಿಮೆ ಸೌಲಭ್ಯ ಬಿಟ್ಟರೆ ಹಾನಿಗೀಡಾಗುವ ಬೆಳೆಗೆ ಪರಿಹಾರ ನೀಡಲು ಸರ್ಕಾರದಿಂದ ಸ್ಪಷ್ಟ ಮಾರ್ಗಸೂಚಿ ಇಲ್ಲ. ಕಾರಣ ಕೊಳೆರೋಗ ಪರಿಹಾರ ಎನ್ನುವುದು ಕೃಷಿಕರಿಗೆ ಮರೀಚಿ ಕೆಯಾಗಿದೆ.

ಪ್ರತಿ ವರ್ಷ ಸಾವಿರಾರು ಹೆಕ್ಟೇರ್ ಅಡಕೆ ಬೆಳೆ ಕೊಳೆ ರೋಗದಿಂದ ನಾಶವಾಗುತ್ತದೆ. ಆದರೆ, ಅದಕ್ಕೆ ಪರಿಹಾರ ನೀಡಲು ಸರ್ಕಾರದ ಕಾನೂನಡಿ ಅವಕಾಶವಿಲ್ಲ. ಈ ಬಗ್ಗೆ ಪ್ರತಿ ವರ್ಷ ತೋಟಗಾರಿಕಾ ಇಲಾಖೆಗೆ ಪ್ರಸ್ತಾವನೆ ಕಳುಹಿಸಿದರೂ, ಪರಿಹಾರ ಬರುವ ಭರವಸೆಯೇ ಇಲ್ಲದಂತಾಗಿದೆ.

ಉತ್ತರಕನ್ನಡ ಜಿಲ್ಲೆಯಲ್ಲಿ ಏರುತ್ತಿದೆ ಅಡಿಕೆ ಕೊಳೆ ರೋಗ : ಮರಿಚೀಕೆಯಾಗಿದೆ ಪರಿಹಾರ

ಉತ್ತರ ಕನ್ನಡ ಜಿಲ್ಲೆಯಲ್ಲಿ 32 ಸಾವಿರ ಹೆಕ್ಟೇರ್ ಅಡಕೆ ಪ್ರದೇಶವಿದೆ. ಅಂದಾಜು 3,900 ಹೆಕ್ಟೇರ್ ಪ್ರದೇಶದಷ್ಟು ಹಾನಿಯಾಗಿದೆ. ಅತಿವೃಷ್ಟಿ ಕಾರಣಕ್ಕೆ ಉಂಟಾದ ಕೊಳೆರೋಗಕ್ಕೆ ಪರಿಹಾರ ನೀಡಲು ಸರ್ಕಾರದ ನಿಯಮದಲ್ಲಿ ಅವಕಾಶ ಇಲ್ಲ.ಇದಕ್ಕಾಗಿಯೇ ಪ್ರತ್ಯೇಕ ಸಹಾಯಧನ ಘೋಷಣೆ ಆಗಬೇಕಿರುವ ಕಾರಣ ಪರಿಹಾರ ಸಿಗುವುದು ಕಷ್ಟವಾಗಿದೆ.

ಇನ್ನು ಈ ಕೊಳೆರೋಗ ಪರಿಹಾರ ಎನ್ನುವುದು ಸಿದ್ಧರಾಮಯ್ಯ ಸರ್ಕಾರದಲ್ಲಿ ಮಾತ್ರ ನೀಡಲಾಗಿತ್ತು‌.ಈ ಬಾರಿ ಅಡಕೆ ಕೊಳೆರೋಗಕ್ಕೆ ವಿಶೇಷ ಪರಿಹಾರ ನೀಡಲು ಸರ್ಕಾರ ನಿರ್ಣಯಿಸಬೇಕು. ಇದಲ್ಲದೇ ಹಾನಿಗೆ ಒಳಗಾದ ಭತ್ತ, ಜೋಳಕ್ಕೂ ಪರಿಹಾರ ಒದಗಿಸುವ ಕೆಲಸ ಆಗಬೇಕಿದೆ. ನೇರವಾಗಿ ಅತಿವೃಷ್ಟಿ ಹಾನಿ ಅಲ್ಲದೇ ಹೋದರೂ ಅಡಕೆ ಕೊಳೆ ಎಂಬುದು ಅತಿಯಾದ ಮಳೆಯಿಂದಲೇ ಬರುವ ರೋಗವಾಗಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎನ್ನುವುದು ರೈತರ ಆಗ್ರಹವಾಗಿದೆ.

ಒಟ್ಟಾರೆಯಾಗಿ ಪ್ರತಿ ವರ್ಷದಂತೆ ಈ ವರ್ಷವೂ ತೋಟಗಾರಿಕಾ ಇಲಾಖೆಯಿಂದ ಕೊಳೆ ರೋಗದ ಮಾಹಿತಿ ಜಿಲ್ಲಾಡಳಿತಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ಅದು ಸರ್ಕಾರಕ್ಕೆ ತಲುಪುತ್ತದೆ. ಆದರೆ, ಅಡಕೆ ಬೆಳೆಗಾರರೇ ಹೆಚ್ಚಿರುವ ಜಿಲ್ಲೆಗೆ ಮಾತ್ರ ಸರ್ಕಾರದ ಪರಿಹಾರ ಇಲ್ಲವಾಗಿದೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *