ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ

Thumbnail image

ರಾಜಕೀಯ ಧ್ರುವೀಕರಣದಲ್ಲಿ ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಲೇ ಹಾಲಿ ಶಾಸಕ ಶಿವರಾಮ ಹೆಬ್ಬಾರ್, ಮಾಜಿ ಶಾಸಕ ವಿ ಎಸ್ ಪಾಟೀಲ್, ಹೊಸ ಮುಖ ಪ್ರಶಾಂತ ದೇಶಪಾಂಡೆ ನಡುವೆ ಪೈಪೋಟಿ ಏರ್ಪಟ್ಟಿದೆ.

ಶಿರಸಿ (ಉತ್ತರ ಕನ್ನಡ): ಜಿಲ್ಲೆಯ ಯಲ್ಲಾಪುರ ಈಗ ರಾಜಕೀಯ ಧ್ರುವೀಕರಣಕ್ಕೆ ಹೆಸರಾಗುತ್ತಿದೆ. ಇಷ್ಟು ದಿನ ಬಿಜೆಪಿಯ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದ ವಿಎಸ್​ ಪಾಟೀಲ್ ಈಗ ಕಾಂಗ್ರೆಸ್​ನತ್ತ ವಾಲಿದ್ದಾರೆ. ಆದರೆ, ಈಗಾಗಲೇ ಅಲ್ಲಿ ಕಾಂಗ್ರೆಸ್​ನಿಂದ ಪ್ರಶಾಂತ ದೇಶಪಾಂಡೆ ಓಡಾಟ ನಡೆಸಿದ್ದಾರೆ. ಇದೆಲ್ಲದರ ಜೊತೆಯಲ್ಲಿ ಸಚಿವ ಹೆಬ್ಬಾರ್ ಅವರ ಕ್ಷೇತ್ರ ಓಡಾಟ ಭರ್ಜರಿಯಾಗಿ ನಡೆದಿದ್ದು, ಯಾರು ಯಾವ ಪಕ್ಷದ ಅಭ್ಯರ್ಥಿಯೋ ಎಂಬ ಜಿಜ್ಞಾಸೆಯ ನಡುವೆಯೇ, ಯಾರಿಗೆ ಮತ ನೀಡುವುದು ಎಂಬ ಗೊಂದಲವೂ ಮೂಡಿದೆ.

2008ರಲ್ಲಿ ಬಿಜೆಪಿಯಿಂದ ಶಾಸಕರಾಗಿದ್ದ ವಿಎಸ್​ ಪಾಟೀಲ್, ನಂತರದ ಚುನಾವಣೆಗಳಲ್ಲಿ ಸೋಲು ಕಂಡಿದ್ದರು. ಆದರೆ, ಈ ಬಾರಿ ಬಿಜೆಪಿ ಸರ್ಕಾರದ ಬಂದ ನಂತರದಲ್ಲಿ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಈಗ ಅದರ ನಾಮ ನಿರ್ದೇಶನ ರದ್ದು ಮಾಡಲಾಗಿದ್ದು, ಪರೋಕ್ಷವಾಗಿ ಬಿಜೆಪಿಯಿಂದ ಹೊರ ದಬ್ಬಿಂತಾಗಿದೆ.

ಹೀಗಾಗಿಯೇ ವಿಎಸ್‌‌ ಪಾಟೀಲ್ ಕಾಂಗ್ರೆಸ್ ಸೇರುವ ಮೂಲಕ ಹೊಸ ಸಂಚಲನ ಮೂಡಿಸಿದರೂ ಸಹ ಈ ಹಿಂದೆ ಭರ್ಜರಿ ಓಡಾಟ ನಡೆಸಿರುವ ಪ್ರಶಾಂತ ದೇಶಪಾಂಡೆ ಏನು ಮಾಡಲಿದ್ದಾರೆ? ಎಂಬ ಗೊಂದಲ ಕಾರ್ಯಕರ್ತರಲ್ಲಿ ಮೂಡಿದೆ. ಹಿರಿಯ ಕಾಂಗ್ರೆಸ್ಸಿಗ ಆರ್​ವಿ‌ ದೇಶಪಾಂಡೆ ಮಗ ಪ್ರಶಾಂತ ದೇಶಪಾಂಡೆ ಯಲ್ಲಾಪುರ ಕ್ಷೇತ್ರದ ಅಭ್ಯರ್ಥಿಯಾಗಲು ಕಳೆದ ಕೆಲ ತಿಂಗಳಿನಿಂದ ಕ್ಷೇತ್ರದಲ್ಲಿ ಓಡಾಟ ನಡೆಸುತ್ತಿದ್ದರು. ಕಾರ್ಯಕರ್ತರ ಪಡೆ ಕಟ್ಟಿಕೊಂಡು ವರ್ಷದ ಮೊದಲೇ ಪ್ರಚಾರ ರೀತಿಯ ಸಭೆಗಳನ್ನು ನಡೆಸುತ್ತಿದ್ದಾರೆ.

ರಾಜಕೀಯ ಧ್ರುವೀಕರಣದಲ್ಲಿ ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ

ಪು‌ನಃ ಪಾಟೀಲ್ ಮತ್ತು ಹೆಬ್ಬಾರ್ ವಾರ್?​: ಈ ಹಿಂದೆ ಮೂರ್ನಾಲ್ಕು ಚುನಾವಣೆಯಲ್ಲಿ ಪಾಟೀಲ್ ಮತ್ತು ಹಾಲಿ ಶಾಸಕ ಶಿವರಾಮ ಹೆಬ್ಬಾರ್ ನೇರ ಎದುರಾಳಿ ಆಗಿದ್ದರು. ಆಗ ಹೆಬ್ಬಾರ್ ಕಾಂಗ್ರೆಸ್​ನಲ್ಲಿದ್ದರೆ ಪಾಟೀಲ್ ಬಿಜೆಪಿಯಲ್ಲಿದ್ದರು. ಈಗ ಪು‌ನಃ ಪಾಟೀಲ್ ಮತ್ತು ಹೆಬ್ಬಾರ್ ನಡುವೆ ವಾರ್ ನಡೆಯುವ ಸಾಧ್ಯತೆಯಿದೆ. ಕಾರಣ ಸಚಿವ ಹೆಬ್ಬಾರ್ ಸಹ ಚುನಾವಣಾ ಕಣಕ್ಕೆ ಇಳಿದಿದ್ದಾರೆ.

ಇದರೊಟ್ಟಿಗೆ ಅವರು ಅವರದ್ದೆ ಆದ ಕಾರ್ಯಕರ್ತರ ಪಡೆಯನ್ನೂ ಹೊಂದಿದ್ದಾರೆ. ಆದರೆ, ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿ ಯಾರು ಎಂಬುದು ಸ್ಪಷ್ಟವಾಗಲು ಚುನಾವಣೆ ಬರಬೇಕಾದ ಕಾರಣ ವೈಯಕ್ತಿಕ ಪ್ರಚಾರ ಸಾಗಿದೆ. ಅಲ್ಲದೇ ವಿಎಸ್​ ಪಾಟೀಲ್ ಅಧಿಕೃತವಾಗಿ ಕಾಂಗ್ರೆಸ್ ಸೇರದಿರುವುದು ಹಲವು ಗೊಂದಲ ಸೃಷ್ಟಿಯಾಗಿದೆ. ಆದ್ದರಿಂದ ಯಾವುದನ್ನೂ ಈಗಲೇ ಹೇಳಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಹೆಬ್ಬಾರ್ ಅವರದ್ದಾಗಿದೆ.

ಒಟ್ಟಾರೆಯಾಗಿ ಹಾಲಿ ಶಾಸಕ ಶಿವರಾಮ ಹೆಬ್ಬಾರ್, ಮಾಜಿ ಶಾಸಕ ವಿಎಸ್ ಪಾಟೀಲ್, ಹೊಸ ಮುಖ ಪ್ರಶಾಂತ ದೇಶಪಾಂಡೆ ಅವರು ನಡುವೆ ಮತದಾರ ಗೊಂದಲದಲ್ಲಿದ್ದಾನೆ. ನಾಯಕರ ನಡುವೆಯೂ ಯಾರು ಅಭ್ಯರ್ಥಿ ಎಂಬ ಕುತೂಹಲವಿದ್ದರೆ, ಮತದಾರ, ಕಾರ್ಯಕರ್ತರು ಯಾರನ್ನು ಬೆಂಬಲಿಸಬೇಕು ಎಂಬ ಸಮಸ್ಯೆಯಲ್ಲಿದ್ದಾರೆ. ಆದರೆ ಅಂತಿಮ ಚಿತ್ರಣಕ್ಕೆ ಇನ್ನು ಕೆಲವೇ ತಿಂಗಳು ಕಾಯಬೇಕಾದ ಅನಿವಾರ್ಯತೆಯೂ ಇದೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *