ಮೊದಲು ಆರ್.ಎಸ್ಎಸ್. ನಿಷೇಧಿಸಿ: ಸಿಪಿಐ(ಎಂ)

ಕೋಮುವಾದಿ ಶಕ್ತಿಗಳನ್ನು ನಿಷೇಧಿಸುವುದಾದರೆ ಮೊದಲು ಆರ್ ಎಸ್ಎಸ್ ಅನ್ನು ನಿಷೇಧಿಸಿ: ಸಿಪಿಐ(ಎಂ)

ಉಗ್ರಗಾಮಿ ಸಂಘಟನೆ ಅಥವಾ ಕೋಮುವಾದಿ ಶಕ್ತಿಗಳ ಮೇಲೆ ನಿಷೇಧ ಹೇರುವುದರಿಂದ ಅದರ ಚಟುವಟಿಕೆಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಕ್ರಮ ಕೈಗೊಳ್ಳುವುದಾದರೆ ಮೊದಲು ಆರ್‌ಎಸ್‌ಎಸ್ ಅನ್ನು…

govind

ತಿರುವನಂತಪುರಂ: ಉಗ್ರಗಾಮಿ ಸಂಘಟನೆ ಅಥವಾ ಕೋಮುವಾದಿ ಶಕ್ತಿಗಳ ಮೇಲೆ ನಿಷೇಧ ಹೇರುವುದರಿಂದ ಅದರ ಚಟುವಟಿಕೆಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಕ್ರಮ ಕೈಗೊಳ್ಳುವುದಾದರೆ ಮೊದಲು ಆರ್‌ಎಸ್‌ಎಸ್ ಅನ್ನು ನಿಷೇಧಿಸಬೇಕು ಎಂದು ಕೇರಳದ ಆಡಳಿತಾರೂಢ ಸಿಪಿಐ(ಎಂ) ಮಂಗಳವಾರ ಹೇಳಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಅನ್ನು ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂಬ ವರದಿಗಳ ನಡುವೆ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ ವಿ ಗೋವಿಂದನ್ ಅವರು ಈ ಹೇಳಿಕೆ ನೀಡಿದ್ದಾರೆ.

ಕೇರಳವು ಈಗ ಭಯೋತ್ಪಾದನೆ ಮತ್ತು ಸಮಾಜಘಾತುಕ ಶಕ್ತಿಗಳ “ಹಾಟ್‌ಸ್ಪಾಟ್” ಆಗಿದೆ. ಈ ದಕ್ಷಿಣ ರಾಜ್ಯದ ಜನರ ಜೀವನ ಸುರಕ್ಷಿತವಾಗಿಲ್ಲ ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಆರೋಪಿಸಿದ ಮಾರನೇ ದಿನವೇ ಸಿಪಿಐ(ಎಂ) ಕೋಮುವಾದಿ ಶಕ್ತಿಗಳನ್ನು ನಿಷೇಧಿಸುವುದಾದರೆ ಮೊದಲು ಆರ್ ಎಸ್ ಎಸ್ ನಿಷೇಧಿಸಿ ಎಂದು ಹೇಳುವ ಮೂಲಕ ತಿರುಗೇಟು ನೀಡಿದೆ.

“ಆರ್ ಎಸ್ಎಸ್ ಕೋಮುವಾದಿ ಚಟುವಟಿಕೆಗಳನ್ನು ನಡೆಸುವ ಪ್ರಮುಖ ಸಂಘಟನೆಯಾಗಿದೆ. ಅದನ್ನು ನಿಷೇಧಿಸಲಾಗುತ್ತದೆಯೇ? ಉಗ್ರಗಾಮಿ ಸಂಘಟನೆಯನ್ನು ನಿಷೇಧಿಸುವುದರಿಂದ ಸಮಸ್ಯೆಗೆ ಪರಿಹಾರವಿಲ್ಲ. ಆರ್‌ಎಸ್‌ಎಸ್ ಅನ್ನು ಈ ಹಿಂದೆ ನಿಷೇಧಿಸಲಾಗಿದೆ. ಸಿಪಿಐ ಅನ್ನು ನಿಷೇಧಿಸಲಾಗಿದೆ, ”ಸಂಘಟನೆಯನ್ನು ನಿಷೇಧಿಸುವುದರಿಂದ ಅದು ಅಥವಾ ಅದರ ಸಿದ್ಧಾಂತ ಕೊನೆಗೊಳ್ಳುವುದಿಲ್ಲ. ಅವರು ಹೊಸ ಹೆಸರು ಅಥವಾ ಗುರುತಿನೊಂದಿಗೆ ಮತ್ತೆ ಹಿಂತಿರುಗುತ್ತಾರೆ. ಇಂತಹ ಗುಂಪುಗಳ ವಿರುದ್ಧ ಜಾಗೃತಿ ಮೂಡಿಸಿ ಅಕ್ರಮ ಎಸಗಿದಾಗ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’’ ಎಂದು ಎಂ ವಿ ಗೋವಿಂದನ್ ಅವರು ಹೇಳಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *