ಜಿ.ಪಂ.,ತಾ.ಪಂ. ಚುನಾವಣೆ- ಹೊಸ ಗಡುವು

ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಹೊಸ ಗಡುವು ನೀಡಿದ ಹೈಕೋರ್ಟ್

ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೊಸ ಗಡುವು ನೀಡಿದೆ.

High court

ಬೆಂಗಳೂರು: ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೊಸ ಗಡುವು ನೀಡಿದೆ.

ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ಗಳ ವಿಂಗಡಣೆ ಕಾರ್ಯವನ್ನು ಪೂರ್ಣಗೊಳಿಸಿ, ಹೆಚ್ಚುವರಿ 12 ವಾರಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ, ಚುನಾವಣೆ ನಡೆಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಹಿಂದಿನ ಮೇ 24, 2022 ರ ಆದೇಶವನ್ನು ಮಾರ್ಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಿಲೇವಾರಿ ಮಾಡುವಾಗ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠವು ಈ ಆದೇಶ ನೀಡಿದೆ.

ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯಿದೆ, 2021 ರ ನಿಬಂಧನೆಗಳು ಅಸಂವಿಧಾನಿಕ ಎಂಬ ಘೋಷಣೆಯ ಕುರಿತಂತೆ ಪರಿಹಾರ ಕೋರಿ ರಿಟ್ ಅರ್ಜಿಯನ್ನು ಸಲ್ಲಿಸಿದೆ. ಅರ್ಜಿದಾರರು ಮಾರ್ಚ್ 30, 2021 ರ ಡಿಲಿಮಿಟೇಶನ್ ಅಧಿಸೂಚನೆ ಮತ್ತು ಜುಲೈ 1, 2021 ದಿನಾಂಕದ ಮೀಸಲಾತಿ ಅಧಿಸೂಚನೆಗೆ ಅನುಗುಣವಾಗಿ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್‌ಗಳಿಗೆ ಚುನಾವಣೆಯ ಪ್ರಕ್ರಿಯೆಯನ್ನು ಪ್ರಾರಂಭಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನು ಕೋರಿದ್ದರು.  

ಕಾರ್ಯ ಪೂರ್ಣಗೊಂಡಿಲ್ಲ
ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ವಿಗಂಡಣೆ ಮತ್ತು ಮೀಸಲು ನಿಗದಿ ಕೆಲಸ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿ ಮೇ 24ರಂದು ಹೈಕೋರ್ಟ್ ಆದೇಶಿಸಿತ್ತು. ಆದರೆ, ಕ್ಷೇತ್ರ ಮರು ವಿಂಗಡಣೆ ಕೆಲಸ ಪೂರ್ಣಗೊಳಿಸಲು ಹೈಕೋರ್ಟ್‌ನಿಂದ ಮತ್ತೆ ಕಾಲಾವಕಾಶ ಪಡೆಯಲು ಮರು ವಿಂಗಡಣೆ ಆಯೋಗವು ಸರ್ಕಾರಕ್ಕೆ ಸೆ.9ರಂದು ಪತ್ರ ಬರೆದಿದೆ. ಆನಂತರ ಮೀಸಲು ನಿಗದಿ ಕಾರ್ಯವನ್ನು ಸರ್ಕಾರ ಮಾಡಲು ಸಾಧ್ಯ ಎಂದರು. ಕ್ಷೇತ್ರ ಮರು ವಿಂಗಡಣೆ ಮತ್ತು ಮೀಸಲು ನಿಗದಿ ಶೀಘ್ರ ಪೂರ್ಣಗೊಳಿಸಲು ಸರ್ಕಾರ ಸಹ ಎಲ್ಲಾ ಪ್ರಯತ್ನ ಮಾಡುತ್ತಿದೆ. ಆದ್ದರಿಂದ 12 ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಆ ಮನವಿ ಮಾನ್ಯ ಮಾಡಿದ ನ್ಯಾಯಪೀಠ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಸೇರಿದಂತೆ ಇತರೆ ವರ್ಗಗಗಳಿಗೆ ಮೀಸಲು ಕಲ್ಪಿಸುವ ಮತ್ತು ಕ್ಷೇತ್ರ ಮರು ವಿಂಗಡಣೆ ಕಾರ್ಯವನ್ನು 12 ವಾರಗಳಲ್ಲಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಸೂಚಿಸಿ ಮಧ್ಯಂತರ ಅರ್ಜಿ ಇತ್ಯರ್ಥಪಡಿಸಿತು. ಚುನಾವಣಾ ಆಯೋಗ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ-2021ಅನ್ನು ಅಸಂವಿಧಾನ ಎಂಬುದಾಗಿ ಘೋಷಿಸಿ ರದ್ದುಪಡಿಸಬೇಕು. ಚುನಾವಣಾ ಆಯೋಗವು ಈಗಾಗಲೇ ಪ್ರಕಟಿಸಿರುವ ಕರಡು ಮೀಸಲು ಮತ್ತು ಕ್ಷೇತ್ರ ಮರುವಿಂಗಡಣೆ ಅಧಿಸೂಚನೆ ಆಧರಿಸಿ ಚುನಾವಣಾ ಪ್ರಕ್ರಿಯೆ ಮುಂದುವರಿಸಬೇಕು. ಅಂತಿಮ ಮೀಸಲು ಮತ್ತು ಕ್ಷೇತ್ರ ಪುನರ್ ವಿಂಗಡಣೆ ಪಟ್ಟಿ ಪ್ರಕಟಿಸಿ, ಶೀಘ್ರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದೆ.

ಜನಸಂಖ್ಯೆ ಅನುಪಾತದ ಆಧಾರದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಸ್ಥಾನ
ಮತ್ತು ಅಭ್ಯರ್ಥಿಗಳ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮ ಸ್ವರಾಜ್ (ತಿದ್ದುಪಡಿ) ಕಾಯ್ದೆ-2021ರ ಜಾರಿಗೆ ರಾಜ್ಯ ಸರ್ಕಾರ 2021ರ ಸೆಪ್ಟೆಂಬರ್ 18ರಂದು ಗೆಜೆಟ್ ಅಧಿಸೂಚನೆ ಹೊರಡಿಸಿತ್ತು.

ಮೂರು ತಿಂಗಳ ಸಮಯ
ಹೈಕೋರ್ಟ್‌ ಆದೇಶದ ಅನುಸಾರ ಕ್ಷೇತ್ರ ಪುನರ್‌ ವಿಂಗಡಣೆ ಆಯೋಗವು ಮೂರು ತಿಂಗಳಲ್ಲಿ ತನ್ನ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಬಹುಶಃ ಈ ಪ್ರಕ್ರಿಯೆ ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದ್ದು, 2023ರ ಜನವರಿಯಲ್ಲಿ ವರದಿ ಸರ್ಕಾರದ ಕೈಸೇರಲಿದೆ. ಸರ್ಕಾರ ತದನಂತರ ಮುಂದಿನ ಕ್ರಮ ಕೈಗೊಂಡು ಚುನಾವಣೆ ನಡೆಸುವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೈಕೋರ್ಟ್‌ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *