ಜಿ.ಪಂ.,ತಾ.ಪಂ. ಚುನಾವಣೆ- ಹೊಸ ಗಡುವು

ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಹೊಸ ಗಡುವು ನೀಡಿದ ಹೈಕೋರ್ಟ್

ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೊಸ ಗಡುವು ನೀಡಿದೆ.

High court

ಬೆಂಗಳೂರು: ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೊಸ ಗಡುವು ನೀಡಿದೆ.

ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ಗಳ ವಿಂಗಡಣೆ ಕಾರ್ಯವನ್ನು ಪೂರ್ಣಗೊಳಿಸಿ, ಹೆಚ್ಚುವರಿ 12 ವಾರಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ, ಚುನಾವಣೆ ನಡೆಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಹಿಂದಿನ ಮೇ 24, 2022 ರ ಆದೇಶವನ್ನು ಮಾರ್ಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಿಲೇವಾರಿ ಮಾಡುವಾಗ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠವು ಈ ಆದೇಶ ನೀಡಿದೆ.

ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯಿದೆ, 2021 ರ ನಿಬಂಧನೆಗಳು ಅಸಂವಿಧಾನಿಕ ಎಂಬ ಘೋಷಣೆಯ ಕುರಿತಂತೆ ಪರಿಹಾರ ಕೋರಿ ರಿಟ್ ಅರ್ಜಿಯನ್ನು ಸಲ್ಲಿಸಿದೆ. ಅರ್ಜಿದಾರರು ಮಾರ್ಚ್ 30, 2021 ರ ಡಿಲಿಮಿಟೇಶನ್ ಅಧಿಸೂಚನೆ ಮತ್ತು ಜುಲೈ 1, 2021 ದಿನಾಂಕದ ಮೀಸಲಾತಿ ಅಧಿಸೂಚನೆಗೆ ಅನುಗುಣವಾಗಿ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್‌ಗಳಿಗೆ ಚುನಾವಣೆಯ ಪ್ರಕ್ರಿಯೆಯನ್ನು ಪ್ರಾರಂಭಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನು ಕೋರಿದ್ದರು.  

ಕಾರ್ಯ ಪೂರ್ಣಗೊಂಡಿಲ್ಲ
ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ವಿಗಂಡಣೆ ಮತ್ತು ಮೀಸಲು ನಿಗದಿ ಕೆಲಸ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿ ಮೇ 24ರಂದು ಹೈಕೋರ್ಟ್ ಆದೇಶಿಸಿತ್ತು. ಆದರೆ, ಕ್ಷೇತ್ರ ಮರು ವಿಂಗಡಣೆ ಕೆಲಸ ಪೂರ್ಣಗೊಳಿಸಲು ಹೈಕೋರ್ಟ್‌ನಿಂದ ಮತ್ತೆ ಕಾಲಾವಕಾಶ ಪಡೆಯಲು ಮರು ವಿಂಗಡಣೆ ಆಯೋಗವು ಸರ್ಕಾರಕ್ಕೆ ಸೆ.9ರಂದು ಪತ್ರ ಬರೆದಿದೆ. ಆನಂತರ ಮೀಸಲು ನಿಗದಿ ಕಾರ್ಯವನ್ನು ಸರ್ಕಾರ ಮಾಡಲು ಸಾಧ್ಯ ಎಂದರು. ಕ್ಷೇತ್ರ ಮರು ವಿಂಗಡಣೆ ಮತ್ತು ಮೀಸಲು ನಿಗದಿ ಶೀಘ್ರ ಪೂರ್ಣಗೊಳಿಸಲು ಸರ್ಕಾರ ಸಹ ಎಲ್ಲಾ ಪ್ರಯತ್ನ ಮಾಡುತ್ತಿದೆ. ಆದ್ದರಿಂದ 12 ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಆ ಮನವಿ ಮಾನ್ಯ ಮಾಡಿದ ನ್ಯಾಯಪೀಠ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಸೇರಿದಂತೆ ಇತರೆ ವರ್ಗಗಗಳಿಗೆ ಮೀಸಲು ಕಲ್ಪಿಸುವ ಮತ್ತು ಕ್ಷೇತ್ರ ಮರು ವಿಂಗಡಣೆ ಕಾರ್ಯವನ್ನು 12 ವಾರಗಳಲ್ಲಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಸೂಚಿಸಿ ಮಧ್ಯಂತರ ಅರ್ಜಿ ಇತ್ಯರ್ಥಪಡಿಸಿತು. ಚುನಾವಣಾ ಆಯೋಗ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ-2021ಅನ್ನು ಅಸಂವಿಧಾನ ಎಂಬುದಾಗಿ ಘೋಷಿಸಿ ರದ್ದುಪಡಿಸಬೇಕು. ಚುನಾವಣಾ ಆಯೋಗವು ಈಗಾಗಲೇ ಪ್ರಕಟಿಸಿರುವ ಕರಡು ಮೀಸಲು ಮತ್ತು ಕ್ಷೇತ್ರ ಮರುವಿಂಗಡಣೆ ಅಧಿಸೂಚನೆ ಆಧರಿಸಿ ಚುನಾವಣಾ ಪ್ರಕ್ರಿಯೆ ಮುಂದುವರಿಸಬೇಕು. ಅಂತಿಮ ಮೀಸಲು ಮತ್ತು ಕ್ಷೇತ್ರ ಪುನರ್ ವಿಂಗಡಣೆ ಪಟ್ಟಿ ಪ್ರಕಟಿಸಿ, ಶೀಘ್ರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದೆ.

ಜನಸಂಖ್ಯೆ ಅನುಪಾತದ ಆಧಾರದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಸ್ಥಾನ
ಮತ್ತು ಅಭ್ಯರ್ಥಿಗಳ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮ ಸ್ವರಾಜ್ (ತಿದ್ದುಪಡಿ) ಕಾಯ್ದೆ-2021ರ ಜಾರಿಗೆ ರಾಜ್ಯ ಸರ್ಕಾರ 2021ರ ಸೆಪ್ಟೆಂಬರ್ 18ರಂದು ಗೆಜೆಟ್ ಅಧಿಸೂಚನೆ ಹೊರಡಿಸಿತ್ತು.

ಮೂರು ತಿಂಗಳ ಸಮಯ
ಹೈಕೋರ್ಟ್‌ ಆದೇಶದ ಅನುಸಾರ ಕ್ಷೇತ್ರ ಪುನರ್‌ ವಿಂಗಡಣೆ ಆಯೋಗವು ಮೂರು ತಿಂಗಳಲ್ಲಿ ತನ್ನ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಬಹುಶಃ ಈ ಪ್ರಕ್ರಿಯೆ ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದ್ದು, 2023ರ ಜನವರಿಯಲ್ಲಿ ವರದಿ ಸರ್ಕಾರದ ಕೈಸೇರಲಿದೆ. ಸರ್ಕಾರ ತದನಂತರ ಮುಂದಿನ ಕ್ರಮ ಕೈಗೊಂಡು ಚುನಾವಣೆ ನಡೆಸುವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೈಕೋರ್ಟ್‌ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *