ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ರಾಜು ತಲ್ಲೂರು

Thumbnail image

ಸೊರಬದ ಕಾಂಗ್ರೆಸ್​ ಮುಖಂಡ ರಾಜು ತಲ್ಲೂರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್​ ತೊರೆದಯ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಪಕ್ಷದ ಶಾಲು ಹಾಕುವ ಮೂಲಕ ಸ್ವಾಗತಿಸಿದರು.

ಶಿವಮೊಗ್ಗ: ಸೊರಬದ ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಇಂದು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜು ತಲ್ಲೂರು ಅವರಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪಕ್ಷದ ಶಾಲು ಹಾಕುವ ಮೂಲಕ ಪಕ್ಷಕ್ಕೆ ಸ್ವಾಗತ ಕೋರಿದರು.

ಈ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ರಾಜುರವರು ಮಹತ್ವಕಾಂಕ್ಷೆಯ ವ್ಯಕ್ತಿಯಾಗಿದ್ದು, ಅವರು ಕೇವಲ ಸೊರಬಕ್ಕೆ ಸೀಮಿತವಾಗದೇ, ರಾಜ್ಯದಲ್ಲಿ ಹಿಂದುಳಿದ ವರ್ಗದ ರಾಜ್ಯ ನಾಯಕರಾಗಿ ಬೆಳೆಯಬೇಕು. ಈ ನಿಟ್ಟಿನಲ್ಲಿ ಪಕ್ಷಕ್ಕೆ ದುಡಿದರೆ, ಮುಂದೆ ಪಕ್ಷ ನಿಮಗೆ ಉತ್ತಮ ಅವಕಾಶವನ್ನು ನೀಡುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ರಾಜು ತಲ್ಲೂರು

ಬಳಿಕ ಮಾತನಾಡಿದ ರಾಜು ತಲ್ಲೂರು, ನಮ್ಮ ಮಡಿವಾಳ ಸಮಾಜದಿಂದ ಇದುವರೆಗೂ ಯಾರು ಕೂಡ ಶಾಸಕರಾಗಿಲ್ಲ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಇದೆ. ನಾನು ನನ್ನ ಮುಂದಿನ ರಾಜಕೀಯ ಭವಿಷ್ಯವನ್ನು ಇಟ್ಟುಕೊಂಡು ಬಿಜೆಪಿಗೆ ಬಂದಿದ್ಧೇನೆ ಎಂದು ಹೇಳಿದರು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು.

ರಾಜುರವರು ಸೊರಬ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್ ನಲ್ಲಿ ಟಿಕೆಟ್​ ಸಿಗಬಹುದೆಂಬ ಬಯಕೆಯನ್ನು ಹೊಂದಿದ್ದರು. ಆದರೆ ಕಾಂಗ್ರೆಸ್​​​​​​​​​​ಗೆ ಮಧು ಬಂಗಾರಪ್ಪ ಸೇರ್ಪಡೆಯಾದ ನಂತರ ಟಿಕೆಟ್​ ಸಿಗುವುದಿಲ್ಲ ಎಂಬುದು ಖಚಿತವಾದ ಮೇಲೆ ರಾಜು ಬಿಜೆಪಿ ಸೇರ್ಪಡೆಯಾಗಿದ್ದಾರೆ.(ಈಟಿಬಿಕೆ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *