ಯಾವ ಶಕ್ತಿಯಿಂದಲೂ ಭಾರತ್​ ಜೋಡೋ ಯಾತ್ರೆ ನಿಲ್ಲಿಸಲು ಸಾಧ್ಯವಿಲ್ಲ: ರಾಗಾ ಗುಡುಗು

ವಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ.. ಯಾವ ಶಕ್ತಿಯಿಂದಲೂ ಭಾರತ್​ ಜೋಡೋ ಯಾತ್ರೆ ನಿಲ್ಲಿಸಲಾಗಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಚಾಮರಾಜನಗರದಲ್ಲಿ ಹೇಳಿದ್ದಾರೆ.

ಚಾಮರಾಜನಗರ: ವಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ವಿಪಕ್ಷಗಳ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.

ಗುಂಡ್ಲುಪೇಟೆಯಲ್ಲಿ ಭಾರತ್​ ಜೋಡೋ ಯಾತ್ರೆಗೆ ಚಾಲನೆ ಕೊಟ್ಟು ಮಾತನಾಡಿದ ಅವರು, ಮಾಧ್ಯಮಗಳಲ್ಲಿ ನಮ್ಮ ಮಾತು ಪ್ರಸಾರವಾಗುತ್ತಿಲ್ಲ. ಮಾಧ್ಯಮಗಳು ಅವರ ಹಿಡಿತದಲ್ಲಿದೆ. ಸಂಸತ್ತು – ವಿಧಾನಸಭೆಗಳಲ್ಲಿ ಜನರ ಸಮಸ್ಯೆ ಮಾತನಾಡಿದರೇ ಮೈಕ್ ಆಫ್ ಆಗಲಿದೆ. ಎಲ್ಲ ಸಂಸ್ಥೆಗಳು ಅವರ ಹಿಡಿತದಲ್ಲಿದ್ದು, ವಿಪಕ್ಷಗಳ ಸ್ವಾತಂತ್ರ್ಯದ ಮಾರ್ಗ ಮುಚ್ಚಿ ಹಾಕುತ್ತಿದ್ದಾರೆ ಎಂದು ಬಿಜೆಪಿ ಹೆಸರು ಹೇಳದೇ ರಾಗಾ ಕಿಡಿಕಾರಿದರು.

ಸಂವಿಧಾನ ರಕ್ಷಣೆ, ಭಾರತದ ಧ್ವಜದ ರಕ್ಷಣೆಗಾಗಿ ಈ ಪಾದಯಾತ್ರೆ. ಜನರ ದುಃಖ- ದುಮ್ಮಾನಗಳನ್ನು ಕೇಳಲು ಜನರ ಬಳಿಗೆ ನಾವು ತೆರಳುತ್ತಿದ್ದೇವೆ. ಮಳೆ, ಬಿಸಿಲು‌ ಏನೆ ಬಂದರೂ ಬೆಳಗ್ಗೆಯಿಂದ ಸಂಜೆವರೆಗೆ ನಡೆದಿದ್ದೇವೆ. ಲಕ್ಷಾಂತರ ಜನರು ಹುರುಪು ತುಂಬಿದ್ದು, ಯಾವ ಶಕ್ತಿಯೂ ಈ ಪಾದಯಾತ್ರೆ ನಿಲ್ಲಿಸಲಾಗಲ್ಲ ಎಂದು ಗುಡುಗಿದರು.‌

ನಮ್ಮ ಈ ಯಾತ್ರೆಯಲ್ಲಿ ದ್ವೇಷ, ಹಿಂಸೆ ಕಾಣಲ್ಲ. ಈ ಯಾತ್ರೆಯಲ್ಲಿ ಎಲ್ಲ ಧರ್ಮ, ಜಾತಿ ಜನರು ನಡೆಯುತ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಯಾರಿಗೇ ಏನೇ ತೊಂದರೆ ಆದರೂ ಮೊದಲು ಸಹಾಯ ಮಾಡುತ್ತಾರೆಯೇ ಹೊರತು ಜಾತಿ – ಭಾಷೆ ಕೇಳಲ್ಲ. ಇದು ನಮ್ಮ ಭಾರತ. ಈ ಭಾರತ ಉಳಿವಿಗಾಗಿ ಯಾತ್ರೆ ಎಂದು ಭಾರತ್ ಜೋಡೋದ ಮಹತ್ವ ತಿಳಿಸಿದರು.

ನಾನು ನಿತ್ಯ 6-7 ಗಂಟೆ ನಡೆಯುತ್ತೇನೆ. ನನ್ನೊಂದಿಗೆ ಲಕ್ಷಾಂತರ ಜನರು ಹೆಜ್ಜೆ ಹಾಕಿದ್ದಾರೆ. ಶ್ರೀಸಾಮಾನ್ಯರು ನಮ್ಮ‌ ಬಳಿ ಬಂದು ಬೆಲೆ ಏರಿಕೆ, ರೈತರ ಮೇಲಾಗುತ್ತಿರುವ ದಬ್ಬಾಳಿಕೆ ಸೇರಿದಂತೆ ಅನೇಕ ಕಷ್ಟಗಳನ್ನು ಹೇಳಿಕೊಳ್ಳುತ್ತಿದ್ದಾರೆ. ನಾವು ಹೆಚ್ಚು ನಡೆಯುತ್ತಿದ್ದರಿಂದ ಜನರ ಅಭಿಪ್ರಾಯ ತಿಳಿದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಮತ್ತು ಕೊನೆಯಲ್ಲಿ ರಾಗಾ ರಾಗಾ ಎಂಬ ಘೋಷಣೆಗಳು ಮೊಳಗಿದವು, ಘೋಷಣೆಗಳು ಕೂಗುತ್ತಿದ್ದಂತೆ ಹರಿಪ್ರಸಾದ್ ಇನ್ನೂ ಕೂಗಿ ಎಂದು ಕೈ ಏರಿಸಿ ಉತ್ಸಾಹ ತುಂಬುತ್ತಿರುವುದು ಕಂಡು ಬಂದಿತು. (ಈಟಿಬಿಕೆ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *