ಗಾಂಧಿಜಯಂತಿ ವಿಶೇಶ, ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಸಿದ್ದಾಪುರ :- ಮಕ್ಕಳಿಗೆ ಆಸ್ತಿಯನ್ನು ಮಾಡದೆ, ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಬೇಕು. ನಾವು ನಮ್ಮ ಯವೌನಾಸ್ಥೆಯಲ್ಲಿ ಮಾಡಿದ್ದು ಹಿರಿಯರಾದಾಗ ನಮಗೆ ಬಂದೇ ಬರುತ್ತದೆ ಎಂಬ ಜ್ಞಾನವಿಲ್ಲದಂತಾಗಿದೆ ಎಂದು ಸಿವಿಲ್ ನ್ಯಾಯಾಧೀಶರಾದ ತಿಮ್ಮಯ್ಯ ಜಿ ಅಭಿಪ್ರಾಯ ಪಟ್ಟರು.
ಅವರು ತಾಲೂಕು ಕಾನೂನು ಸೇವಾ ಸಮಿತಿ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ, ಪಟ್ಟಣ ಪಂಚಾಯತ, ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಂಯೋಜನೆ ಯಲ್ಲಿ ತಾಲೂಕು ಸರಕಾರಿ ನಿವೃತ್ತ ನೌಕರರ ಸಂಘ ಘಟಕದ ವತಿಯಿಂದ ಪಟ್ಟಣದ ಬಾಲ ಭವನದಲ್ಲಿ ನಡೆದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿರಿಯರನ್ನು ಗೌರವಿಸಬೇಕು. ಅದು ನಮ್ಮ ಕರ್ತವ್ಯ ಕೂಡ. ಹಳೆದು ಹೊಸತು ಇದ್ದರೆನೆ ಸೊಬಗು ಆಗ ಮಾತ್ರ ಜೀವನ ಅರ್ಥಪೂರ್ಣವಾಗುತ್ತದೆ ಎಂದ ಅವರು
ಹಿರಿಯ ನಾಗರಿಕರ ಕಾನೂನುಗಳ ಕುರಿತು ಮಾಹಿತಿ ನೀಡಿದರು.

ಆಷಾಕಿರಣ ಟ್ರಸ್ಟ್ ನ ಅಧ್ಯಕ್ಷ
ರವಿ ಹೆಗಡೆ ಹೂವಿನಮನೆ ಮಾತನಾಡಿವಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಟ್ಟರೆ ಕಾನೂನಿನ ಅಗತ್ಯತೆ ಇಲ್ಲಾ.
ಅರವತ್ತರೊಳಗೆ ನಾವು ಏನು ಮಾಡುತ್ತೇವೇ ಯೋ. ಅರವತ್ತಾದ ಮೇಲೆ ನಾವು ಅನುಭವಿಸುತ್ತೇವೆ, ಒಳ್ಳೆಯ ದು ಮಾಡಿದರೆ ಒಳ್ಳೆಯದು ಕೆಟ್ಟದ್ದು ಮಾಡಿದರೆ ಕಟ್ಟಿದ್ದು ಅನುಭವಿಸುತ್ತೇವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಬಿ ಎನ್ ವಾಸರೆ ಮಾತನಾಡಿ ಹಿರಿಯ ನಾಗರಿಕರು ಮಕ್ಕಳಿಗೆ ಜವಬ್ದಾರಿ ಯಿಂದ ಸಂಸ್ಕಾರ ಕೊಡುವುದು ಕರ್ತವ್ಯ ಕೂಡ. ಪ್ರೀತಿ, ಪ್ರೇಮ ಎಂದರೆ ಹಿರಿಯ ನಾಗರಿಕರಲ್ಲಿ ಕಾಣಬೇಕು. ಕಾನೂನುಗಳು ಬೇಡ ಎನ್ನ ರೀತಿಯಲ್ಲಿ ಮಕ್ಕಳನ್ನು ಬೆಳೆಸೋಣ. ಹಿರಿಯರು ಕಿರಿಯರು ಎನ್ನುವ ಭಾವನೆ ಮಕ್ಕಳಲ್ಲಿ ಮೂಡದ ಹಾಗೆ ಬೆಳೆಸುವ ಸಾಮಾಜಿಕ ಹೊಣೆಗಾರಿಕೆ ನಮ್ಮಲ್ಲಿ ಇರಬೇಕು.

ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಗೌಡರ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಬಿ ಎನ್ ವಾಸರೆ, ಆಷಾಕಿರಣ ಟ್ರಸ್ಟ್ ನ ಅಧ್ಯಕ್ಷ
ರವಿ ಹೆಗಡೆ ಹೂವಿನಮನೆ
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ,
ಸಹಾಯಕ ಸರಕಾರಿ ಅಭಿಯೋಜಕರಾದ, ಚಂದ್ರಶೇಖರ ಎಚ್ ಎಸ್, ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ತಮ್ಮಣ್ಣ ಬೀಗಾರ್, ವಕೀಲರ ಸಂಘದ ಅಧ್ಯಕ್ಷ ಜೈರಾಮ ಜಿ ಹೆಗಡೆ, ಲಯನ್ಸ್ ಕ್ಲಬ್ ನ ಅಧ್ಯಕ್ಷ ಆರ್ ಎಂ ಪಾಟೀಲ್, ತಾಲೂಕು ಕ.ಸಾ.ಪ ದ ಅಧ್ಯಕ್ಷ ಗೋಪಾಲ ನಾಯ್ಕ ಭಾಶಿ ಉಪಸ್ಥಿತರಿದ್ದರು.

ನಾಗರಾಜ ಎಚ್ ಪ್ರಾರ್ಥಿಸಿದರು.
ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಗೌಡರ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದು, ಸ್ವಾಗತಿಸಿದರು.
ಜಿ ಜಿ ಹೆಗಡೆ ಬಾಳಗೋಡ ನಿರೂಪಿಸಿದರು.

ಸಿದ್ದಾಪುರ: ಕೊಂಡ್ಲಿ ಶ್ರೀ ಕಾಳಿಕಾಭಾ ದೇವಿಯ ನೂತನ ಶಿಲಾಮೂರ್ತಿಹಾಗೂ ಪರಿವಾರ ದೇವರುಗಳ ಮೂರ್ತಿಗಳ ಮೆರವಣಿಗೆ ಶಿರಳಗಿಯ ಶ್ರೀ ಬ್ರಹ್ಮಾನಂದ ಭಾರತಿ ಸ್ವಾಮೀಜಿ ಪುಪ್ಷಾರ್ಚನೆ ಮಾಡುವ ಮೂಲಕ
ರವೀಂದ್ರನಗರ ಗಂಗಾಂಬಿಕಾ ದೇವಸ್ಥಾನದಿಂದ ಚಾಲನೆ ನೀಡಿದರು.
ತಿಮ್ಮಪ್ಪ ನಾಯ್ಕ ವೃತ್ತ, ರಾಮಕೃಷ್ಣ ಹೆಗಡೆ ವ್ರತ್ತ, ರಾಜಮಾರ್ಗ, ರಥಬೀದಿ, ಬಸವಣ್ಣಗಲ್ಲಿ, ಹಾಳದಕಟ್ಟ, ಕೊಂಡ್ಲಿ ಮಾರಿಗುಡಿಮಾರಿಬೈಲ್, ಮಾರುತಿ ದೇವಸ್ಥಾನ ಮೂಲಕ ಕಾಳಿಂಕಾಂಬಾ ದೇವಸ್ಥಾನ ತಲುಪಿತು.
ಮಹಿಳೆಯರ ಪೂರ್ಣ ಕುಂಬ ಹಾಗೂ ಪಂಚವಾದ್ಯ ಮತ್ತು ಉಡುಪಿಯ ಚಂಡೆ ವಾದನ ಗಮನ ಸೆಳೆಯಿತು.
ಮೆರವಣಿಗೆ ಯೂದ್ದಕ್ಕೂ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡು ದೇವಿಯ ಕ್ರಪಗೆ ಪಾತ್ರರಾದರು. .

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *