ಗಾಂಧಿಜಯಂತಿ ವಿಶೇಶ, ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಸಿದ್ದಾಪುರ :- ಮಕ್ಕಳಿಗೆ ಆಸ್ತಿಯನ್ನು ಮಾಡದೆ, ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಬೇಕು. ನಾವು ನಮ್ಮ ಯವೌನಾಸ್ಥೆಯಲ್ಲಿ ಮಾಡಿದ್ದು ಹಿರಿಯರಾದಾಗ ನಮಗೆ ಬಂದೇ ಬರುತ್ತದೆ ಎಂಬ ಜ್ಞಾನವಿಲ್ಲದಂತಾಗಿದೆ ಎಂದು ಸಿವಿಲ್ ನ್ಯಾಯಾಧೀಶರಾದ ತಿಮ್ಮಯ್ಯ ಜಿ ಅಭಿಪ್ರಾಯ ಪಟ್ಟರು.
ಅವರು ತಾಲೂಕು ಕಾನೂನು ಸೇವಾ ಸಮಿತಿ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ, ಪಟ್ಟಣ ಪಂಚಾಯತ, ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಂಯೋಜನೆ ಯಲ್ಲಿ ತಾಲೂಕು ಸರಕಾರಿ ನಿವೃತ್ತ ನೌಕರರ ಸಂಘ ಘಟಕದ ವತಿಯಿಂದ ಪಟ್ಟಣದ ಬಾಲ ಭವನದಲ್ಲಿ ನಡೆದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿರಿಯರನ್ನು ಗೌರವಿಸಬೇಕು. ಅದು ನಮ್ಮ ಕರ್ತವ್ಯ ಕೂಡ. ಹಳೆದು ಹೊಸತು ಇದ್ದರೆನೆ ಸೊಬಗು ಆಗ ಮಾತ್ರ ಜೀವನ ಅರ್ಥಪೂರ್ಣವಾಗುತ್ತದೆ ಎಂದ ಅವರು
ಹಿರಿಯ ನಾಗರಿಕರ ಕಾನೂನುಗಳ ಕುರಿತು ಮಾಹಿತಿ ನೀಡಿದರು.

ಆಷಾಕಿರಣ ಟ್ರಸ್ಟ್ ನ ಅಧ್ಯಕ್ಷ
ರವಿ ಹೆಗಡೆ ಹೂವಿನಮನೆ ಮಾತನಾಡಿವಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಟ್ಟರೆ ಕಾನೂನಿನ ಅಗತ್ಯತೆ ಇಲ್ಲಾ.
ಅರವತ್ತರೊಳಗೆ ನಾವು ಏನು ಮಾಡುತ್ತೇವೇ ಯೋ. ಅರವತ್ತಾದ ಮೇಲೆ ನಾವು ಅನುಭವಿಸುತ್ತೇವೆ, ಒಳ್ಳೆಯ ದು ಮಾಡಿದರೆ ಒಳ್ಳೆಯದು ಕೆಟ್ಟದ್ದು ಮಾಡಿದರೆ ಕಟ್ಟಿದ್ದು ಅನುಭವಿಸುತ್ತೇವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಬಿ ಎನ್ ವಾಸರೆ ಮಾತನಾಡಿ ಹಿರಿಯ ನಾಗರಿಕರು ಮಕ್ಕಳಿಗೆ ಜವಬ್ದಾರಿ ಯಿಂದ ಸಂಸ್ಕಾರ ಕೊಡುವುದು ಕರ್ತವ್ಯ ಕೂಡ. ಪ್ರೀತಿ, ಪ್ರೇಮ ಎಂದರೆ ಹಿರಿಯ ನಾಗರಿಕರಲ್ಲಿ ಕಾಣಬೇಕು. ಕಾನೂನುಗಳು ಬೇಡ ಎನ್ನ ರೀತಿಯಲ್ಲಿ ಮಕ್ಕಳನ್ನು ಬೆಳೆಸೋಣ. ಹಿರಿಯರು ಕಿರಿಯರು ಎನ್ನುವ ಭಾವನೆ ಮಕ್ಕಳಲ್ಲಿ ಮೂಡದ ಹಾಗೆ ಬೆಳೆಸುವ ಸಾಮಾಜಿಕ ಹೊಣೆಗಾರಿಕೆ ನಮ್ಮಲ್ಲಿ ಇರಬೇಕು.

ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಗೌಡರ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಬಿ ಎನ್ ವಾಸರೆ, ಆಷಾಕಿರಣ ಟ್ರಸ್ಟ್ ನ ಅಧ್ಯಕ್ಷ
ರವಿ ಹೆಗಡೆ ಹೂವಿನಮನೆ
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ,
ಸಹಾಯಕ ಸರಕಾರಿ ಅಭಿಯೋಜಕರಾದ, ಚಂದ್ರಶೇಖರ ಎಚ್ ಎಸ್, ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ತಮ್ಮಣ್ಣ ಬೀಗಾರ್, ವಕೀಲರ ಸಂಘದ ಅಧ್ಯಕ್ಷ ಜೈರಾಮ ಜಿ ಹೆಗಡೆ, ಲಯನ್ಸ್ ಕ್ಲಬ್ ನ ಅಧ್ಯಕ್ಷ ಆರ್ ಎಂ ಪಾಟೀಲ್, ತಾಲೂಕು ಕ.ಸಾ.ಪ ದ ಅಧ್ಯಕ್ಷ ಗೋಪಾಲ ನಾಯ್ಕ ಭಾಶಿ ಉಪಸ್ಥಿತರಿದ್ದರು.

ನಾಗರಾಜ ಎಚ್ ಪ್ರಾರ್ಥಿಸಿದರು.
ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಗೌಡರ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದು, ಸ್ವಾಗತಿಸಿದರು.
ಜಿ ಜಿ ಹೆಗಡೆ ಬಾಳಗೋಡ ನಿರೂಪಿಸಿದರು.

ಸಿದ್ದಾಪುರ: ಕೊಂಡ್ಲಿ ಶ್ರೀ ಕಾಳಿಕಾಭಾ ದೇವಿಯ ನೂತನ ಶಿಲಾಮೂರ್ತಿಹಾಗೂ ಪರಿವಾರ ದೇವರುಗಳ ಮೂರ್ತಿಗಳ ಮೆರವಣಿಗೆ ಶಿರಳಗಿಯ ಶ್ರೀ ಬ್ರಹ್ಮಾನಂದ ಭಾರತಿ ಸ್ವಾಮೀಜಿ ಪುಪ್ಷಾರ್ಚನೆ ಮಾಡುವ ಮೂಲಕ
ರವೀಂದ್ರನಗರ ಗಂಗಾಂಬಿಕಾ ದೇವಸ್ಥಾನದಿಂದ ಚಾಲನೆ ನೀಡಿದರು.
ತಿಮ್ಮಪ್ಪ ನಾಯ್ಕ ವೃತ್ತ, ರಾಮಕೃಷ್ಣ ಹೆಗಡೆ ವ್ರತ್ತ, ರಾಜಮಾರ್ಗ, ರಥಬೀದಿ, ಬಸವಣ್ಣಗಲ್ಲಿ, ಹಾಳದಕಟ್ಟ, ಕೊಂಡ್ಲಿ ಮಾರಿಗುಡಿಮಾರಿಬೈಲ್, ಮಾರುತಿ ದೇವಸ್ಥಾನ ಮೂಲಕ ಕಾಳಿಂಕಾಂಬಾ ದೇವಸ್ಥಾನ ತಲುಪಿತು.
ಮಹಿಳೆಯರ ಪೂರ್ಣ ಕುಂಬ ಹಾಗೂ ಪಂಚವಾದ್ಯ ಮತ್ತು ಉಡುಪಿಯ ಚಂಡೆ ವಾದನ ಗಮನ ಸೆಳೆಯಿತು.
ಮೆರವಣಿಗೆ ಯೂದ್ದಕ್ಕೂ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡು ದೇವಿಯ ಕ್ರಪಗೆ ಪಾತ್ರರಾದರು. .

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *