

ಬಾಲಕನ ಬೆತ್ತಲೆಗೊಳಿಸಿ ಪೂಜೆ. ಕೊಪ್ಪಳದಲ್ಲಿ ಪ್ರಕರಣ ಬೆಳಕಿಗೆ.

ಕೊಪ್ಪಳ: ಬೆತ್ತಲೆ ಪೂಜೆ ಮಾಡಿದ್ರೆ ತಂದೆಯ ಸಾಲ ತೀರುತ್ತದೆ ಎಂದು ಸುಳ್ಳು ಹೇಳಿ ಬಾಲಕನನ್ನು ಬೆತ್ತಲೆ ಮಾಡಿ ವಿಡಿಯೋ ಮಾಡಿರುವ ಅಮಾನವೀಯ ಘಟನೆ ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮದಲ್ಲಿ ನಡೆದಿದೆ. ಹಾಸಗಲ್ ಗ್ರಾಮದ 16 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಅವಮಾನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ತಂದೆ ಮಾಡಿದ್ದ ಸಾಲ ತೀರಬೇಕೆಂದರೇ ನೀನು ಬೆತ್ತಲೆ ಪೂಜೆ ಮಾಡಬೇಕು. ಅದರಿಂದ ದುಡ್ಡು ಬರುತ್ತದೆ. ಮತ್ತೆ ಸಾಲ ಕೂಡ ತೀರುತ್ತದೆ. ಜೊತೆಗೆ ನಿಮ್ಮ ಬಡತನ ನಿವಾರಣೆಯಾಗುತ್ತದೆ ಎಂದು ಬಾಲಕನ ತಲೆ ಕೆಡಿಸಿದ್ದರು. ಅಂತೆಯೇ ಹುಬ್ಬಳ್ಳಿಯ ರೂಮ್ ವೊಂದರಲ್ಲಿ ಬಾಲಕನನ್ನು ಬೆತ್ತಲೆ ಮಾಡಿ, ಪೂಜೆ ಮಾಡುವ ನಾಟಕವಾಡಿದ್ದಾರೆ. ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕೃತ್ಯ ಎಸಗಿದ ಆರೋಪಿಗಳನ್ನು ಶರಣಪ್ಪ, ವಿರುಪನಗೌಡ, ಶರಣಪ್ಪ ತಳವರ ಎಂದು ಗುರುತಿಸಲಾಗಿದೆ. ಘಟನೆಯಿಂದ ನೊಂದ ಬಾಲಕ ಮತ್ತು ಕುಟುಂಬಸ್ಥರು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. (ಈಟಿಬಿಕೆ)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
