ಪರೇಶ್ ಮೇಸ್ತಾ ಸಹಜ ಸಾವು ವರದಿ: ಕ್ಷಮೆಯಾಚಿಸಿ ಸರ್ಕಾರದಿಂದ ನಷ್ಟ ಭರಿಸಲು ಕಾಂಗ್ರೆಸ್ಸಿಗರ ಆಗ್ರಹ!

Thumbnail image

ಪರೇಶ್ ಮೇಸ್ತಾ ಸಾವಿನ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಈ ಕುರಿತ ವರದಿ ಇಲ್ಲಿದೆ.

ಕಾರವಾರ: ಪರೇಶ್ ಮೆಸ್ತಾ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ರಂಗೇರುತ್ತಿದೆ. ಪರೇಶ್ ಮೇಸ್ತಾ ಸಾವು ಸಹಜ ಎಂದಿದ್ದರು ಅನ್ಯಕೋಮಿನವರೇ ಕೊಲೆ ಮಾಡಿದ್ದಾರೆಂದು ಬಿಜೆಪಿ ನಾಯಕರು ಆರೋಪ ಮಾಡಿ ಗಲಭೆಗೆ ಕಾರಣವಾಗಿದ್ದರು. ಇದೀಗ ಜಿಲ್ಲೆಯ ಜನರ ಕ್ಷಮೆಯನ್ನು ಬಿಜೆಪಿ ನಾಯಕರುಗಳು ಕೇಳಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿದ್ದಾರೆ.

ಮಾಜಿ ಶಾಸಕ ಸತೀಶ್ ಸೈಲ್ ಅವರು ಮಾತನಾಡಿದರು

ಹೌದು, ಪರೇಶ್ ಮೇಸ್ತಾ ಸಾವಿನ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ 2017 ರಲ್ಲಿ ಕೋಮಗಲಭೆಯಲ್ಲಿ ನಾಪತ್ತೆಯಾಗಿದ್ದ ಪರೇಶ್ ಮೇಸ್ತಾ ಎನ್ನುವ ಮೀನುಗಾರ ಯುವಕ ಎರಡು ದಿನಗಳ ನಂತರ ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದ. ಈ ವೇಳೆ ಬಿಜೆಪಿ ನಾಯಕರುಗಳು ಪರೇಶ್ ಮೇಸ್ತಾನನ್ನ ಕೊಲೆ ಮಾಡಿದ್ದು, ಇದಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎಂದು ಆರೋಪಿಸಲಾಗಿತ್ತು.

ಬಿಜೆಪಿ ಇನ್ನಾದರೂ ಸುಮ್ಮನಾಗಲಿ: ಇನ್ನು ಅನ್ಯಕೋಮಿನಿಂದಲೇ ಕೊಲೆ ನಡೆದಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಇದೀಗ ಪ್ರಕರಣದ ತನಿಖೆ ನಡೆಸಿದ ಸಿಬಿಐ ಬಿ ರಿಪೋರ್ಟ್ ಹಾಕಿದೆ. ಅದಾಗಿಯೂ ಬಿಜೆಪಿಯ ಕೆಲ ನಾಯಕರು ಮರು ತನಿಖೆ ನಡೆಸಲು ಆಗ್ರಹಿಸುತ್ತಿದ್ದು, ಇದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಿಬಿಐ ಮೇಲೆ ವಿಶ್ವಾಸವಿಲ್ಲ ಎಂದು ಸರ್ಕಾರವೇ ಮರು ತನಿಖೆಗೆ ಆದೇಶ ಮಾಡಲಿ. ಇಲ್ಲದಿದ್ದರೆ ಜನ ಪ್ರತಿನಿಧಿಗಳೇ ಉತ್ತರ ನೀಡಲಿ. ಇಲ್ಲದಿದ್ದರೇ ಕಾಂಗ್ರೆಸ್ ಪರೇಶ್ ಮೇಸ್ತಾ ಕುಟುಂಬದ ಸಹಾಯಕ್ಕೆ ನಿಲ್ಲುತ್ತದೆ. ಜನರಲ್ಲಿ ಗೊಂದಲ ಮೂಡಿಸಿದ್ದ ಬಿಜೆಪಿ ಇನ್ನಾದರೂ ಸುಮ್ಮನಾಗಲಿ, ಜಿಲ್ಲೆಯ ಜನರ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.

ಈಗಲಾದರೂ ಪರಿಹಾರಕೊಡಲಿ: ಇನ್ನು ಪರೇಶ್ ಮೇಸ್ತಾ ಸಾವಿನ ನಂತರ ಜಿಲ್ಲೆಯ ಕುಮಟಾ, ಹೊನ್ನಾವರ, ಕಾರವಾರ, ಶಿರಸಿಯಲ್ಲಿ ಗಲಭೆಗಳಾಗಿದ್ದವು. ಅಪಾರ ಪ್ರಮಾಣದ ಆಸ್ತಿ ಪಾಸ್ತಿಗಳು ಗಲಭೆಯಲ್ಲಿ ಹಾನಿಯಾಗಿತ್ತು. ಅಂದಿನ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ಅವರ ಕಾರನ್ನ ಸಹ ಸುಟ್ಟು ಹಾಕಲಾಗಿತ್ತು.

ಪರೇಶ್ ಮೇಸ್ತಾನನ್ನ ಅನ್ಯ ಕೋಮಿನವರು ಕೊಲೆ ಮಾಡಿದ್ದಾರೆಂದು ಜನರಲ್ಲಿ ತಲೆಗೆ ತುಂಬಿ ಈ ಗಲಭೆಗೆ ಬಿಜೆಪಿಗರು ಕಾರಣರಾಗಿದ್ದರು ಎಂದು ಕಾಂಗ್ರೆಸ್ ಸದ್ಯ ಆರೋಪಿಸುತ್ತಿದ್ದು, ಬಿಜೆಪಿ ನಾಯಕರು ಶಾಂತಿಯುತ ಜಿಲ್ಲೆಯಲ್ಲಿ ಗಲಭೆ ಎಬ್ಬಿಸಿದ್ದಕ್ಕೆ ಕ್ಷಮೆ ಕೇಳಲಿ. ಅಲ್ಲದೇ ಗಲಭೆಯಿಂದ ಹಲವರ ಆಸ್ತಿ ಪಾಸ್ತಿ ಹಾನಿಯಾಗಿದ್ದು, ಅಂತವರಿಗೆ ಈಗಲಾದರೂ ಪರಿಹಾರಕೊಡಲಿ ಎಂದು ಕೈ ನಾಯಕರು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆ: ಕಳೆದ ಬಾರಿ ಪರೇಶ್ ಮೇಸ್ತಾ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಗೆ ಕಾರಣವಾಗಿತ್ತು. ಕರಾವಳಿಯ ಒಂದು ಕ್ಷೇತ್ರ ಹೊರತು ಪಡಿಸಿ ಉಳಿದೆಲ್ಲ ಕ್ಷೇತ್ರದಲ್ಲಿ ಪ್ರಕರಣದಿಂದ ಸೋಲಿಗೆ ಕಾರಣವಾಗಿತ್ತು. ಸದ್ಯ ಬಿ ರಿಪೋರ್ಟ್​ ಅನ್ನು ಅಸ್ತ್ರವಾಗಿಟ್ಟುಕೊಂಡು ಈ ಬಾರಿಯ ಚುನಾವಣೆ ಎದುರಿಸಲು ಕೈ ನಾಯಕರು ಸಜ್ಜಾಗಿದ್ದು, ಇದು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎನ್ನುವುದನ್ನ ಕಾದು ನೋಡಬೇಕಾಗಿದೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *