ಉ.ಕ. ದಲ್ಲಿ ವ್ಯಾಪಿಸುತ್ತಿರುವ ಕ್ಯಾನ್ಸರ್‌ ಭಯ!?

ಶಿರಸಿಯಲ್ಲಿ ಕಾಣಿಸಿಕೊಳ್ಳುತ್ತಿದೆ ಮಾರಣಾಂತಿಕ ಕ್ಯಾನ್ಸರ್ ರೋಗ : ಸಮೀಕ್ಷೆಗಾಗಿ ಗ್ರಾಮಸ್ಥರ ಆಗ್ರಹ

ಕ್ಯಾನ್ಸರ್ ಎಂಬ ಮಹಾಮಾರಿಯಿಂದ ಶಿರಸಿ ತಾಲೂಕಿನ ನೆಗ್ಗು ಗ್ರಾಮ ಪಂಚಾಯಿತಿಯ ಹಲವು ಹಳ್ಳಿಗಳಲ್ಲಿ ಈಗ ಜನರಲ್ಲಿ ನೋವು ಮುಗಿಲು ಮುಟ್ಟಿದೆ.

ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿನ ಕೈಗಾ ಅಣುವಿದ್ಯುತ್ ಸ್ಥಾವರದಿಂದ ರೇಡಿಯೆಷನ್​ ಪರಿಣಾಮವಾಗಿ ಆ ಭಾಗದ ಕಳಚೆ, ಮಲವಳ್ಳಿ, ಬಾರೆ, ಬಾಸಲ್, ಭಾಗಿನಕಟ್ಟಾ, ಬೀಗಾರ ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳ ಜನತೆ ಕ್ಯಾನ್ಸರ್​ ನಂತಹ ಮಾರಣಾಂತಿಕ ಖಾಯಿಲೆಯಿಂದ ಮಕ್ಕಳು ಸಹ ಮೃತಪಡುತ್ತಿರುವುದು ವಿಶೇಷವೇನಲ್ಲ. ಆದರೆ, ಇತ್ತೀಚಿಗೆ ಶಿರಸಿಯಲ್ಲಿ ಯಾವುದೇ ರೆಡಿಯೇಷನ್ ಅಥವಾ ವಿಶೇಷ ಯೋಜನೆ ಇರದ ಭಾಗದಲ್ಲೂ ಕ್ಯಾನ್ಸರ್ ನಂತಹ ಮಾರಕ ರೋಗ ಕಾಣಿಸಿಕೊಳ್ಳುತ್ತಿದ್ದು, ಭಾರಿ ಅಪಾಯಕಾರಿಯಾಗಿ ಪರಿಣಮಿಸಿದೆ.

ಕ್ಯಾನ್ಸರ್ ರೋಗ ಹರಡುತ್ತಿರುವ ಬಗ್ಗೆ ಸ್ಥಳೀಯರಾದ ಕೆ ಆರ್ ಹೆಗಡೆ ಅಮ್ಮಚ್ಚಿ ಅವರು ಮಾತನಾಡಿದರು

ಶಿರಸಿ ತಾಲೂಕಿನ ನೆಗ್ಗು ಗ್ರಾಮ ಪಂಚಾಯಿತಿಯ ಹಲವು ಹಳ್ಳಿಗಳಲ್ಲಿ ಈಗ ನೋವು ಮುಗಿಲುಮುಟ್ಟಿದೆ. ಎತ್ತೆತ್ತರದ ಗುಡ್ಡಗಳ ಮಧ್ಯೆ ನಾಲ್ಕಾರು ಮನೆಗಳ ಪುಟ್ಟ ಹಳ್ಳಿಗಳಾದರೂ ಈ ನೋವು ಎಲ್ಲೆಡೆ ಬಾಧಿಸಿದೆ. ಇದಕ್ಕೆ ಮುಖ್ಯ ಕಾರಣ ಕ್ಯಾನ್ಸರ್ ಎಂಬ ಮಹಾಮಾರಿ.

ಹೌದು, ಇಲ್ಲಿಯ ತಟಗುಣಿ, ತಡಗುಣಿ ಸುತ್ತ ಮುತ್ತಲಿನ ಹತ್ತಾರು ಹಳ್ಳಿಗಳಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಜಾಸ್ತಿಯಾಗಿದೆ. ಆಗುತ್ತಲೇ ಇದೆ. ಕಳೆದೊಂದು ದಶಕದಲ್ಲಿ ಸಾವಿನ ಮನೆಯ ಕದ ತಟ್ಟಿದವರು ಅನೇಕರಾದರೆ, ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವವರು ಇನ್ನೂ ಅನೇಕ. ಸಣ್ಣ ಹಿಡುವಳಿದಾರರಾಗಿ ಬರುವ ಪುಟ್ಟ ಆದಾಯವನ್ನೂ ಮಹಾನಗರಗಳ ದೊಡ್ಡಾಸ್ಪತ್ರೆಗೆ ಸುರಿಯುತ್ತಿದ್ದಾರೆ.

25ಕ್ಕೂ ಅಧಿಕ ಕ್ಯಾನ್ಸರ್ ರೋಗಿಗಳಿದ್ದಾರೆ: ಒಂದೆಡೆ ಆತಂಕ, ಇನ್ನೊಂದೆಡೆ ಭರಿಸಲಾಗದ ಆಸ್ಪತ್ರೆ ಬಿಲ್ ಇಲ್ಲಿಯ ಕೃಷಿಕರನ್ನು ಹಸಿ ಬಟ್ಟೆ ಹಿಂಡಿದಂತೆ ಹಿಂಡುತ್ತಿವೆ. ನೆಗ್ಗು ಪಂಚಾಯಿತಿ ವ್ಯಾಪ್ತಿಯ ಈ ಭಾಗದ ಇಪ್ಪತ್ತಕ್ಕೂ ಅಧಿಕ ಹಳ್ಳಿಗಳಲ್ಲಿ ಸುಮಾರು 25ಕ್ಕೂ ಅಧಿಕ ಕ್ಯಾನ್ಸರ್ ರೋಗಿಗಳಿದ್ದಾರೆ. ಆದರೆ, ಕಾರಣ ಮಾತ್ರ ನಿಗೂಢವಾಗಿದೆ.‌

ಇಲ್ಲಿನ ಗ್ರಾಮಗಳಲ್ಲಿ ತಂಬಾಕು ತಿನ್ನದವರಿಗೂ ಕ್ಯಾನ್ಸರ್ ಆವರಿಸಿದೆ. ಬ್ರೆಸ್ಟ್ ಕ್ಯಾನ್ಸರ್, ಬೋನ್ ಕ್ಯಾನ್ಸರ್ ಇಂತಹ ತಂಬಾಕು ಚಟಕ್ಕೆ ಸಂಬಂಧವಿಲ್ಲದ ಕ್ಯಾನ್ಸರ್ ಪ್ರಕರಣಗಳು ದಾಖಲಾಗಿವೆ. ನೆಗ್ಗು ಪಂಚಾಯಿತಿ ಕೈಗಾದಿಂದ ನೇರವಾಗಿ 50 ಕಿ.ಮೀ ವ್ಯಾಪ್ತಿಯಲ್ಲಿ ಸುರಕ್ಷಿತ ಸ್ಥಳದಲ್ಲಿದೆ. ಅಣು ವಿಕಿರಣಗಳು ಇಲ್ಲಿಯವರೆಗೂ ತಲುಪುತ್ತಿವೆಯೆ ? ಅದೇ ಕಾರಣದಿಂದಾಗಿಯೇ ಮಹಾಮಾರಿ ರೋಗ ಹೆಚ್ಚುತ್ತಿದೆಯೇ ಎಂಬ ಪ್ರಶ್ನೆ ಸ್ಥಳೀಯರನ್ನು ಕಾಡತೊಡಗಿದೆ.

ಕಲುಷಿತ ಗಾಳಿಯ ವಾತಾವರಣ ಇಲ್ಲ: ಅಲ್ಲದೇ, ತಾಲೂಕಿನ ಗ್ರಾಮೀಣ ಪ್ರದೇಶ ಉತ್ತಮ ವಾತಾವರಣ ಹೊಂದಿದೆ. ಕಲುಷಿತ ಗಾಳಿಯ ವಾತಾವರಣ ಇಲ್ಲ. ಇಲ್ಲಿಯ ಬದುಕು ನೈಸರ್ಗಿಕವಾಗಿಯೇ ಆರೋಗ್ಯಯುತ ಜೀವನ ಆಗಬೇಕಿತ್ತು. ಆದರೆ, ಈ ಭಾಗದಲ್ಲಿ ಏಕೆ ಈ ರೀತಿ ಕ್ಯಾನ್ಸರ್ ಹಬ್ಬುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.‌

ಒಟ್ಟಾರೆಯಾಗಿ ನೆಗ್ಗು ಗ್ರಾಪಂ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕ್ಯಾನ್ಸರ್ ಕಾಣಿಸಿಕೊಂಡಿದೆ. ಇಬ್ಬರು ಮೃತಪಟ್ಟಿದ್ದಾರೆ. ಕೆಲವರಲ್ಲಿ ಸಂಶಯಾತ್ಮವಾಗಿ ಕೆಲವರಲ್ಲಿ ನಿಗೂಢವಾಗಿಯೂ ಇದೆ. ಆರ್ಥಿಕವಾಗಿ ಹಿಂದುಳಿದ ಈ ಗ್ರಾಮದಲ್ಲಿನ ಜನರ ಸ್ಥಿತಿ ಚಿಂತಾಜನಕವಾಗಿದೆ. ಈ ಭಾಗದಲ್ಲಿ ಏಕೆ ಈ ರೀತಿ ಆಗುತ್ತಿದೆ ಎನ್ನುವ ಸಮೀಕ್ಷೆಯನ್ನು ಆರೋಗ್ಯ ಇಲಾಖೆ ಮಾಡಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.‌(ಈಟಿಬಿಕೆ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *