ಲೋಕಲ್ news…ಸದ್ಭಾವನಾ ಪ್ರಶಸ್ತಿ ಪ್ರದಾನ,ನನ್ನ ಮತ ಮಾರಾಟಕ್ಕಿಲ್ಲ

ಸಿದ್ದಾಪುರ: ಹಣವಂತನಿಗಿಂತ ಗುಣವಂತ ಶ್ರೇಷ್ಠ. ಹಾಗಾಗಿ ಗುಣವಂತರು ಎಲ್ಲಾ ಕಾಲದಲ್ಲಿಯೂ ಅಜರಾಮರರಾಗಿರುತ್ತಾರೆ. ಅಬ್ದುಲ್ ಕಲಾಂ ರವರು ಈ ಸಾಲಿನಲ್ಲಿ ನಿಲ್ಲುತ್ತಾರೆ ಎಂದು
ಸಿವಿಲ್ ನ್ಯಾಯಾಧೀಶ ತಿಮ್ಮಯ್ಯ ಜಿ ಹೇಳಿದರು.
ಅವರು ನಗರದ ಹಾಳದಕಟ್ಟಾದ ಮುರುಘರಾಜೇಂದ್ರ ಅಂಧರ ಶಾಲಾ ಸಭಾಂಗಣದಲ್ಲಿ ನಡೆದ
ಆಶಾಕಿರಣ ಟ್ರಸ್ಟ್‌, ಲಯನ್ಸ್ ಶತಮಾನೋತ್ಸವ ಸ್ಮರಣೆಯ ತರಬೇತಿ ಕೇಂದ್ರ ಮತ್ತು ಲಯನ್ಸ್ ಕ್ಲಬ್ ಸಹಯೋಗದಲ್ಲಿ ಡಾ, ಏಪಿ ಜೆ ಅಬ್ದಲ್ ಕಲಾಂ ಜನ್ಮ ದಿನೋತ್ಸವದ ಅಂಗವಾಗಿ ಸದ್ಭಾವನಾ ದಿನಾಚರಣೆ ಮತ್ತು ಸದ್ಭಾವನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಆಶಾಕಿರಣ ಟ್ರಸ್ಟ್ ನ ಆಧ್ಯಕ್ಷ ರವಿ ಹೆಗಡೆ ಹೂವಿನಮನೆ ಅಧ್ಯಕ್ಷತೆ ವಹಿಸಿದ್ದರು.

ಲಯನ್ ಜಿಲ್ಲಾ ಮಾಜಿ ಗವರ್ನರ್ ಜಿ ಶ್ರೀನಿವಾಸ ಬೆಂಗಳೂರು ಮಾತನಾಡಿ ಕಲಾಂ ರು ಇಡೀ ಜಗತ್ತಿನಲ್ಲಿ ವಿಶೇಷ ವಾದ ವ್ಯಕ್ತಿತ್ವ ಹೊಂದಿದ್ದರು.
ಅಂತರ್ ದೃಷ್ಟಿ ಇದ್ದರೆ ಮಾತ್ರ ನಾವು ದೃಷ್ಟಿ ವಂತರು. ಅಂತರ್‌ ದೃಷ್ಟಿ ಇಲ್ಲದಿದ್ದರೆ ದೃಷ್ಟಿ ಇದ್ದರೂ ಕುರುಡರಂತೆ ಎಂದು ಅವರು ಪ್ರತಿಪಾದಿಸಿದರು.
ಲಯನ್ ಜಿಲ್ಲಾ ಮಾಜಿ ಗವರ್ನರ್ ಡಾ, ಕೆ.ಎಮ್.ಮುನಿಯಪ್ಪ ಬೆಂಗಳೂರು, ಲಯನ್ ಜಿಲ್ಲಾ ಮಾಜಿ ಗವರ್ನರ್ ಗಣಪತಿ ಎನ್ ನಾಯಕ, ಗೋಕರ್ಣ, ಲಯನ್ ಜಿಲ್ಲಾ ಮಾಜಿ ಗವರ್ನರ್ ಡಾ, ಗಿರೀಶ್ ಟಿ ಕುಚಿನಾಡ ಕುಮಟಾ, ಉಪಸ್ಥಿತರಿದ್ದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಲಯನ್ ಎಸ್ ಜೆ ಕೈರಾನ ಹೊನ್ನಾವರ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ತಮ್ಮಣ್ಣ ಬೀಗಾರ್ ಅವರಿಗೆ ಸದ್ಭಾವನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಲಯನ್ ಶ್ಯಾಮಲಾ ಹೆಗಡೆ, ಕುಮಾರ್ ಗೌಡರ್ ಅಭಿನಂದಾ ಪತ್ರ ವಾಚಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಆರ್ ಎಂ ಪಾಟಿಲ್,
ಸಿ ಎಸ್ ಗೌಡರ್ ಪ್ರಸ್ತಾವಿಕವಾಗಿ ಮಾತನಾಡಿದರು.
ಮುರುಘರಾಜೇಂದ್ರ ಅಂಧರ ಶಾಲಾ ವಿಧ್ಯಾರ್ಥಿಗಳು ಪ್ರಾರ್ಥಿಸಿದರು.
ನಾಗರಾಜ ಮರಾಠೆ ಸ್ವಾಗತಿಸಿದರು.
ಲಯನ್ ಜಿ ಜಿ ಹೆಗಡೆ ನಿರೂಪಿಸಿದರು.
ನಾಗರಾಜ ದೋಶೆಟ್ಟಿ ವಂದಿಸಿದರು.

ನನ್ನ ಮತ ಮಾರಾಟಕ್ಕಿಲ್ಲ ಎನ್ನುವ ಅಭಿಯಾನವನ್ನು ಕಳೆದ ಒಂದು ವರ್ಷದಿಂದ ಶಿರ್ಸಿ ಸಿದ್ದಾಪುರ ಕ್ಷೇತ್ರದಾದ್ಯoತ ಟೀಮ್ ಪರಿವರ್ತನೆ ವತಿಯಿಂದ ಮಾಡುತ್ತ ಬಂದಿದ್ದು ಸ್ಪೀಕರ್ ಕಾಗೇರಿ ಯವರು ಇತ್ತೀ ಚೆಗೆ ನನ್ನ ಮತ ಮಾರಾಟಕ್ಕಿಲ್ಲ ಎನ್ನುವ ಅಭಿಯಾನ ಪ್ರಾರಂಭಿಸಿ ಎಂದು ಕರೆ ನೀಡಿದ್ದು ಮಾಧ್ಯಮ ಗಳಲ್ಲಿ ಪ್ರಸಾರ ವಾಗಿದ್ದನ್ನು ಗಮನಿಸಿದ್ದೇನೆ ಅವರ ಹೇಳಿಕೆ ನಮಗೆ ಸಂತಸ ತಂದಿದೆ ಎಂದು ಟೀಮ್ ಪರಿವರ್ತನೆ ಮುಖ್ಯಸ್ಥ ಹಿತೇಂದ್ರ ನಾಯ್ಕ್ ಮಾಧ್ಯಮ ಹೇಳಿಕೆ ನೀಡಿದ್ದಾರೆ.


ಮತದಾನದ ಮಹತ್ವ, ಜನಪ್ರತಿನಿದಿನಗಳ ಕರ್ತವ್ಯ, ನಾಗರಿಕರ ಹಕ್ಕು ಮತ್ತು ಕರ್ತವ್ಯ, ಸರಕಾರದ ಆದಾಯದ ಮೂಲ ಹಾಗೂ ಸರಕಾರದಿಂದ ಜನತೆಗೆ ಸಿಗಬೇಕಾದ ಸೌಲಭ್ಯ ಮುಂತಾದವುಗಳ ಕುರಿತು ಎಲ್ಲೆಡೆ ಜಾಗೃತಿ ಮೂಡಿಸುತ್ತ ಬಂದಿದ್ದೇವೆ ಜನತೆಯು ಸಹ ತಿಳಿದುಕೊಂಡಿದ್ದಾರೆ ಸ್ಥಳೀಯ ಶಾಸಕರು ಈ ಹೇಳಿಕೆ ನೀಡಿದ್ದು ನಮ್ಮ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಗಿದೆ ಎಂದು ಭಾವಿಸಿದ್ದೇವೆ ಕಾಗೇರಿಯವರಿಗೆ ನಮ್ಮ ಟೀಮ್ ಪರಿವರ್ತನೆ ವತಿಯಿಂದ ಈ ಮೂಲಕ ಧನ್ಯವಾದ ತಿಳಿಸುತ್ತೇವೆ ಎಂದರು
ಇನ್ನು ಮುಂದಿನ ದಿನಗಳಲ್ಲಿಯೂ ನಾವು ಮತದಾನ ಜಾಗೃತಿ ಕಾರ್ಯಕ್ರಮ ನಡೆಸುತ್ತ ಪಾರದರ್ಶಕ ಚುನಾವಣೆ ಗೆ ಮತ್ತು ಕ್ಷೇತ್ರದ ಅಭಿವೃದ್ಧಿಪಡಿಸುವ ಉತ್ತಮ ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ಪ್ರಯತ್ನ ನಡೆಸುತ್ತೇವೆ
ಈ ಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿಯಾಗಬೇಕಿದೆ ಹಾಗಾಗಿ ಜನರು ಚುನಾವಣೆ ಸಂದರ್ಭದಲ್ಲಿ ರಾಜಕೀಯ ನಾಯಕರುಗಳು ನೀಡುವ ಆಮಿಷಗಳಿಗೆ ಒಳಗಾಗದೆ ತಮಗೆ ಬೇಕಾದ ಅಭ್ಯರ್ಥಿ ಆಯ್ಕೆ ಮಾಡುವಂತೆ ಆಗಬೇಕು ಹಾಗಾದಾಗ ಮಾತ್ರ ಅಭಿವೃದ್ಧಿ ಸಾಧ್ಯ ಮುಂದಿನ ದಿನಗಳಲ್ಲಿ ನಮ್ಮ ಅಭಿಯಾನ ಕಾರ್ಯಕ್ರಮ ಕ್ಕೆ ಜನತೆ ಹೆಚ್ಚಿನ ಸಹಕಾರ ನೀಡಿ ಬದಲಾವಣೆ ಗೆ ಹೆಜ್ಜೆ ಇಡೋಣ ಎಂದು ಮನವಿ ಮಾಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *