ಲೋಕಲ್ news…ಸದ್ಭಾವನಾ ಪ್ರಶಸ್ತಿ ಪ್ರದಾನ,ನನ್ನ ಮತ ಮಾರಾಟಕ್ಕಿಲ್ಲ

ಸಿದ್ದಾಪುರ: ಹಣವಂತನಿಗಿಂತ ಗುಣವಂತ ಶ್ರೇಷ್ಠ. ಹಾಗಾಗಿ ಗುಣವಂತರು ಎಲ್ಲಾ ಕಾಲದಲ್ಲಿಯೂ ಅಜರಾಮರರಾಗಿರುತ್ತಾರೆ. ಅಬ್ದುಲ್ ಕಲಾಂ ರವರು ಈ ಸಾಲಿನಲ್ಲಿ ನಿಲ್ಲುತ್ತಾರೆ ಎಂದು
ಸಿವಿಲ್ ನ್ಯಾಯಾಧೀಶ ತಿಮ್ಮಯ್ಯ ಜಿ ಹೇಳಿದರು.
ಅವರು ನಗರದ ಹಾಳದಕಟ್ಟಾದ ಮುರುಘರಾಜೇಂದ್ರ ಅಂಧರ ಶಾಲಾ ಸಭಾಂಗಣದಲ್ಲಿ ನಡೆದ
ಆಶಾಕಿರಣ ಟ್ರಸ್ಟ್‌, ಲಯನ್ಸ್ ಶತಮಾನೋತ್ಸವ ಸ್ಮರಣೆಯ ತರಬೇತಿ ಕೇಂದ್ರ ಮತ್ತು ಲಯನ್ಸ್ ಕ್ಲಬ್ ಸಹಯೋಗದಲ್ಲಿ ಡಾ, ಏಪಿ ಜೆ ಅಬ್ದಲ್ ಕಲಾಂ ಜನ್ಮ ದಿನೋತ್ಸವದ ಅಂಗವಾಗಿ ಸದ್ಭಾವನಾ ದಿನಾಚರಣೆ ಮತ್ತು ಸದ್ಭಾವನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಆಶಾಕಿರಣ ಟ್ರಸ್ಟ್ ನ ಆಧ್ಯಕ್ಷ ರವಿ ಹೆಗಡೆ ಹೂವಿನಮನೆ ಅಧ್ಯಕ್ಷತೆ ವಹಿಸಿದ್ದರು.

ಲಯನ್ ಜಿಲ್ಲಾ ಮಾಜಿ ಗವರ್ನರ್ ಜಿ ಶ್ರೀನಿವಾಸ ಬೆಂಗಳೂರು ಮಾತನಾಡಿ ಕಲಾಂ ರು ಇಡೀ ಜಗತ್ತಿನಲ್ಲಿ ವಿಶೇಷ ವಾದ ವ್ಯಕ್ತಿತ್ವ ಹೊಂದಿದ್ದರು.
ಅಂತರ್ ದೃಷ್ಟಿ ಇದ್ದರೆ ಮಾತ್ರ ನಾವು ದೃಷ್ಟಿ ವಂತರು. ಅಂತರ್‌ ದೃಷ್ಟಿ ಇಲ್ಲದಿದ್ದರೆ ದೃಷ್ಟಿ ಇದ್ದರೂ ಕುರುಡರಂತೆ ಎಂದು ಅವರು ಪ್ರತಿಪಾದಿಸಿದರು.
ಲಯನ್ ಜಿಲ್ಲಾ ಮಾಜಿ ಗವರ್ನರ್ ಡಾ, ಕೆ.ಎಮ್.ಮುನಿಯಪ್ಪ ಬೆಂಗಳೂರು, ಲಯನ್ ಜಿಲ್ಲಾ ಮಾಜಿ ಗವರ್ನರ್ ಗಣಪತಿ ಎನ್ ನಾಯಕ, ಗೋಕರ್ಣ, ಲಯನ್ ಜಿಲ್ಲಾ ಮಾಜಿ ಗವರ್ನರ್ ಡಾ, ಗಿರೀಶ್ ಟಿ ಕುಚಿನಾಡ ಕುಮಟಾ, ಉಪಸ್ಥಿತರಿದ್ದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಲಯನ್ ಎಸ್ ಜೆ ಕೈರಾನ ಹೊನ್ನಾವರ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ತಮ್ಮಣ್ಣ ಬೀಗಾರ್ ಅವರಿಗೆ ಸದ್ಭಾವನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಲಯನ್ ಶ್ಯಾಮಲಾ ಹೆಗಡೆ, ಕುಮಾರ್ ಗೌಡರ್ ಅಭಿನಂದಾ ಪತ್ರ ವಾಚಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಆರ್ ಎಂ ಪಾಟಿಲ್,
ಸಿ ಎಸ್ ಗೌಡರ್ ಪ್ರಸ್ತಾವಿಕವಾಗಿ ಮಾತನಾಡಿದರು.
ಮುರುಘರಾಜೇಂದ್ರ ಅಂಧರ ಶಾಲಾ ವಿಧ್ಯಾರ್ಥಿಗಳು ಪ್ರಾರ್ಥಿಸಿದರು.
ನಾಗರಾಜ ಮರಾಠೆ ಸ್ವಾಗತಿಸಿದರು.
ಲಯನ್ ಜಿ ಜಿ ಹೆಗಡೆ ನಿರೂಪಿಸಿದರು.
ನಾಗರಾಜ ದೋಶೆಟ್ಟಿ ವಂದಿಸಿದರು.

ನನ್ನ ಮತ ಮಾರಾಟಕ್ಕಿಲ್ಲ ಎನ್ನುವ ಅಭಿಯಾನವನ್ನು ಕಳೆದ ಒಂದು ವರ್ಷದಿಂದ ಶಿರ್ಸಿ ಸಿದ್ದಾಪುರ ಕ್ಷೇತ್ರದಾದ್ಯoತ ಟೀಮ್ ಪರಿವರ್ತನೆ ವತಿಯಿಂದ ಮಾಡುತ್ತ ಬಂದಿದ್ದು ಸ್ಪೀಕರ್ ಕಾಗೇರಿ ಯವರು ಇತ್ತೀ ಚೆಗೆ ನನ್ನ ಮತ ಮಾರಾಟಕ್ಕಿಲ್ಲ ಎನ್ನುವ ಅಭಿಯಾನ ಪ್ರಾರಂಭಿಸಿ ಎಂದು ಕರೆ ನೀಡಿದ್ದು ಮಾಧ್ಯಮ ಗಳಲ್ಲಿ ಪ್ರಸಾರ ವಾಗಿದ್ದನ್ನು ಗಮನಿಸಿದ್ದೇನೆ ಅವರ ಹೇಳಿಕೆ ನಮಗೆ ಸಂತಸ ತಂದಿದೆ ಎಂದು ಟೀಮ್ ಪರಿವರ್ತನೆ ಮುಖ್ಯಸ್ಥ ಹಿತೇಂದ್ರ ನಾಯ್ಕ್ ಮಾಧ್ಯಮ ಹೇಳಿಕೆ ನೀಡಿದ್ದಾರೆ.


ಮತದಾನದ ಮಹತ್ವ, ಜನಪ್ರತಿನಿದಿನಗಳ ಕರ್ತವ್ಯ, ನಾಗರಿಕರ ಹಕ್ಕು ಮತ್ತು ಕರ್ತವ್ಯ, ಸರಕಾರದ ಆದಾಯದ ಮೂಲ ಹಾಗೂ ಸರಕಾರದಿಂದ ಜನತೆಗೆ ಸಿಗಬೇಕಾದ ಸೌಲಭ್ಯ ಮುಂತಾದವುಗಳ ಕುರಿತು ಎಲ್ಲೆಡೆ ಜಾಗೃತಿ ಮೂಡಿಸುತ್ತ ಬಂದಿದ್ದೇವೆ ಜನತೆಯು ಸಹ ತಿಳಿದುಕೊಂಡಿದ್ದಾರೆ ಸ್ಥಳೀಯ ಶಾಸಕರು ಈ ಹೇಳಿಕೆ ನೀಡಿದ್ದು ನಮ್ಮ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಗಿದೆ ಎಂದು ಭಾವಿಸಿದ್ದೇವೆ ಕಾಗೇರಿಯವರಿಗೆ ನಮ್ಮ ಟೀಮ್ ಪರಿವರ್ತನೆ ವತಿಯಿಂದ ಈ ಮೂಲಕ ಧನ್ಯವಾದ ತಿಳಿಸುತ್ತೇವೆ ಎಂದರು
ಇನ್ನು ಮುಂದಿನ ದಿನಗಳಲ್ಲಿಯೂ ನಾವು ಮತದಾನ ಜಾಗೃತಿ ಕಾರ್ಯಕ್ರಮ ನಡೆಸುತ್ತ ಪಾರದರ್ಶಕ ಚುನಾವಣೆ ಗೆ ಮತ್ತು ಕ್ಷೇತ್ರದ ಅಭಿವೃದ್ಧಿಪಡಿಸುವ ಉತ್ತಮ ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ಪ್ರಯತ್ನ ನಡೆಸುತ್ತೇವೆ
ಈ ಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿಯಾಗಬೇಕಿದೆ ಹಾಗಾಗಿ ಜನರು ಚುನಾವಣೆ ಸಂದರ್ಭದಲ್ಲಿ ರಾಜಕೀಯ ನಾಯಕರುಗಳು ನೀಡುವ ಆಮಿಷಗಳಿಗೆ ಒಳಗಾಗದೆ ತಮಗೆ ಬೇಕಾದ ಅಭ್ಯರ್ಥಿ ಆಯ್ಕೆ ಮಾಡುವಂತೆ ಆಗಬೇಕು ಹಾಗಾದಾಗ ಮಾತ್ರ ಅಭಿವೃದ್ಧಿ ಸಾಧ್ಯ ಮುಂದಿನ ದಿನಗಳಲ್ಲಿ ನಮ್ಮ ಅಭಿಯಾನ ಕಾರ್ಯಕ್ರಮ ಕ್ಕೆ ಜನತೆ ಹೆಚ್ಚಿನ ಸಹಕಾರ ನೀಡಿ ಬದಲಾವಣೆ ಗೆ ಹೆಜ್ಜೆ ಇಡೋಣ ಎಂದು ಮನವಿ ಮಾಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *