ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ.. ಉತ್ತರಕನ್ನಡ ನೂತನ ಡಿಸಿ ಪ್ರಭುಲಿಂಗ ಕವಲಿಕಟ್ಟಿ

ರಾಜ್ಯ ಸರ್ಕಾರ ಡಿಸಿ ಮುಲ್ಲೈ ಮುಗಿಲನ್ ಎಂ.ಪಿ ಅವರನ್ನು ವರ್ಗಾವಣೆ ಮಾಡಿ ಬೆಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿ ನೇಮಕಗೊಳಿಸಿದೆ. ಉತ್ತರಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಬೆಂಗಳೂರಿನ ದಿ ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನಿರ್ದೇಶಕರಾಗಿದ್ದ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.

ಕಾಂತಾರ ವಿವಾದ: ನಟ ಚೇತನ್‌ಗೆ ದಲಿತ ಸಂಘಟನೆಗಳ ಬೆಂಬಲ

ಕಾಂತಾರ ಚಿತ್ರದ ವಿರುದ್ಧ ಮಾತನಾಡಿ ವಿರೋಧಗಳನ್ನು ಎದುರಿಸುತ್ತಿರುವ ನಟ ಚೇತನ್ ಅವರಿಗೆ ದಲಿತ ಸಂಘಟನೆಗಳು ಶನಿವಾರ ಬೆಂಬಲ ವ್ಯಕ್ತಪಡಿಸಿವೆ.

Actor chethan

ಮೈಸೂರು: ಕಾಂತಾರ ಚಿತ್ರದ ವಿರುದ್ಧ ಮಾತನಾಡಿ ವಿರೋಧಗಳನ್ನು ಎದುರಿಸುತ್ತಿರುವ ನಟ ಚೇತನ್ ಅವರಿಗೆ ದಲಿತ ಸಂಘಟನೆಗಳು ಶನಿವಾರ ಬೆಂಬಲ ವ್ಯಕ್ತಪಡಿಸಿವೆ. 

ರಿಷಬ್ ಶೆಟ್ಟಿ ಮಾತು ಸುಳ್ಳು, ನಮ್ಮ ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳು. ವೈದಿಕ ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಹಿಂದಿನವು. ಮೂಲ ನಿವಾಸಿ ಸಂಸ್ಕೃತಿಗಳನ್ನು ಪರದೆ ಮೇಲೆ ಮತ್ತು ಹೊರಗೆ ಸತ್ಯದೊಂದಿಗೆ ಪ್ರದರ್ಶಿಸಬೇಕು ಎಂದು ಚೇತನ್ ಅವರು ಹೇಳಿದ್ದರು. ಈಗಾಗಲೇ ಚಿತ್ರ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಜನರಿಂದಲಷ್ಟೇ ಅಲ್ಲದೆ, ಸ್ಟಾರ್ ನಟ-ನಟಿಯರಿಂದಲು ಪ್ರಶಂಸೆ ಪಡೆಯುತ್ತಿದೆ. ಈ ಸಂದರ್ಭದಲ್ಲಿ ಚಿತ್ರದ ಕುರಿತು ವಿವಾದ ಸೃಷ್ಟಿಸಿರುವ ನಟ ಚೇತನ್ ಅವರ ವಿರುದ್ಧ ಹಲವರು ಕಿಡಿಕಾರುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಚೇತನ್ ಅವರಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿರುವ ದಲಿತ ಮುಖಂಡ ಮತ್ತು ಮಾಜಿ ಮೇಯರ್ ಪುರುಷೋತ್ತಮ ಅವರು, “ಪೂಜೆ ಮಾಡುವುದು ಹಿಂದೂ ಸಂಸ್ಕೃತಿಯಾಗಿರಲಿಲ್ಲ. ಸುಮಾರು 3,500 ವರ್ಷಗಳ ಹಿಂದೆ ಮಧ್ಯ ಏಷ್ಯಾದಿಂದ ಬಂದ ಆರ್ಯರು ಇದನ್ನು ಪರಿಚಯಿಸಿದರು ಮತ್ತು ವೈದಿಕ ಸಂಸ್ಕೃತಿಯನ್ನು ಪ್ರಾರಂಭಿಸಿದರು. ದ್ರಾವಿಡರು ಮತ್ತು ಮೂಲ ವಂಶಸ್ಥರ ಸಂಸ್ಕೃತಿ ಮತ್ತು ಸಂಪ್ರದಾಯಗಳು ವೈದಿಕ ಸಂಸ್ಕೃತಿಗಿಂತ ಹಳೆಯದು, ”ಎಂದು ಅವರು ಹೇಳಿದರು.

ಆರ್ಯರು ಭಾರತಕ್ಕೆ ಬರುವ ಮೊದಲು ಯಾವುದೇ ಪೂಜೆ ಇರಲಿಲ್ಲ ಎಂದು ಕನ್ನಡ ಲೇಖಕ ಕೆ.ಎಸ್.ಭಗವಾನ್ ಹೇಳಿದ್ದಾರೆ.”ಚೇತನ್ ಅವರು ಹೇಳಿದ್ದು ಸರಿಯಿದೆ. ಮೂಲ ವಂಶಸ್ಥರು ಭೂತ ಕೋಲವನ್ನು ಅಭ್ಯಾಸ ಮಾಡಲಿಲ್ಲ, ಆದರೆ, ಇದು ವೈದಿಕ ಆಚರಣೆಗಳಿಂದ ಪ್ರಾರಂಭವಾಯಿತು ತಿಳಿಸಿದರು. 

ಇದೇ ವೇಳೆ ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ‘ಹಿಂದೂ ದೇವರುಗಳು ಮತ್ತು ಆಚಾರ ವಿಚಾರಗಳ ಬಗ್ಗೆ ವಿವಾದ ಹುಟ್ಟುಹಾಕಲು ಚೇತನ್‌ಗೆ ಮುಸ್ಲಿಮರಿಂದ ಹಣ ನೀಡಲಾಗಿದೆ’ ಎಂದು ಆರೋಪಿಸಿದ್ದಾರೆ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *