

ಸಿದ್ದಾಪುರದಲ್ಲಿ ಶಾಂತಲಾ ವೈನ್ಸ್ ಬಳಿ ವೈಯಕ್ತಿಕ ಕಾರಣಕ್ಕೆ ಜಗಳ ವಾಡಿ ಇಬ್ಬರು ಆಸ್ಪತ್ರೆ ಸೇರಿದ ಘಟನೆ ಶನಿವಾರ ಸಾಯಂ ಕಾಲ ನಡೆದಿದೆ. ಗಾಯಗೊಂಡವರು .
1)ಜಯನ.ವಯಸ್ಸು-38
2)ಮನೋಜ್ ಕುಮಾರ್
ಆರೋಪಿತರು
ವಿನೋದ್ ವಯಸ್ಸು-41

ಕೇರಳ ಮೂಲದ ವಿನೋದ್ ತನ್ನೂರಿನ ಇಬ್ಬರಿಗೆ ಗಾಯಗೊಳಿಸಿ ಆಸ್ಪತ್ರೆ ಸೇರುವಂತೆ ಮಾಡಿದ್ದಾನೆ. ಆರೋಪಿಯನ್ನು ಸಿದ್ದಾಪುರ ಪೊಲೀಸರು ಬಂಧಿಸಿರುವ ಬಗ್ಗೆ ಮೂಲಗಳು ತಿಳಿಸಿವೆ.

ಕೇರಳ ಮೂಲದ ವಿನೋದ್ ಮತ್ತು ಇನ್ನಿಬ್ಬರು ಬಾಧಿತರು ಸ್ನೇಹಿತರು, ಸಿದ್ದಾಪುರ,ಸೊರಬಾ ಸೇರಿದಂತೆ ಉತ್ತರ ಕನ್ನಡ ಶಿವಮೊಗ್ಗ ಜಿಲ್ಲೆಗಳ ರಬ್ಬರ್ ತೋಟಗಳಲ್ಲಿ ರಬ್ಬರ್ ಹಾಲು ಇಳಿಸುವ ಕೆಲಸ ಮಾಡುತಿದ್ದ ಇವರಿಗೆ ಸಂಜೆಯ ಬಿಸಿ ತಲೆಕೆಡಿಸಿ ಪರಸ್ಪರ ಕಿತ್ತಾಡಿದ್ದಾರೆ. ವಿನೋದ್ ತನ್ನ ಕೈಯಲ್ಲಿದ್ದ ರಬ್ಬರ್ ಹಾಲು ತೆಗೆಯುವ ಚೂಪಾದ ಆಯುಧದಿಂದ ಮನೋಜ್ ಮತ್ತು ಜಯನ್ ರಿಗೆ ಗಾಯಗೊಳಿಸಿದ್ದಾನೆ. ಬಾಧಿತರು ಜೀವಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
