ವೈವಿಧ್ಯಮಯ ದೀಪಾವಳಿ

ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಹೊಸಳ್ಳಿಯಲ್ಲಿ ಗೋಪೂಜೆ ಹಾಗೂ ಗೋಕ್ರೀಡೆಯನ್ನು ಶೃದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ರೈತರು ತಮ್ಮ ದನಕರುಗಳಿಗೆ ಸ್ನಾನ ಮಾಡಿಸಿ, ಅಲಂಕಾರ ಮಾಡಿ ಕೊಟ್ಟಿಗೆಯಲ್ಲಿ ಪೂಜೆ ಸಲ್ಲಿಸಿದರು. ಗೋ ಗ್ರಾಸ ನೀಡಿದ ನಂತರ ಊರಿನ ಎಲ್ಲಾ ದನಕರುಗಳನ್ನು ಬೆಚ್ಚುವ ಕಟ್ಟೆಯವರಿಗೆ ಕರೆತಂದರು. ನಂತರ ಬೆಚ್ಚುವ ಕಟ್ಟೆಯ ಭೂತಪ್ಪನಿಗೆ ಸುಳಿಗಾಗಿ ಒಡೆದು ಪೂಜೆ ಸಲ್ಲಿಸಲಾಯಿತು. ಅದಾದ ನಂತರ ಗ್ರಾಮದ ಸುತ್ತಲಿನ ಎಲ್ಲಾ ದೇವತೆಗಳಿಗೆ ಹಣ್ಣು ಕಾಯಿ ಸಮರ್ಪಿಸಿದರು.

ಸಿದ್ದಾಪುರ. ಪಟ್ಟಣ ವ್ಯಾಪ್ತಿಯ ಹೊಸೂರಿನ ಗುಡ್ಡೇಕೇರಿಯಲ್ಲಿ ಬೂರೇ ನೀರು ತುಂಬುವ ನರಕ ಚತುರ್ದಶಿಯ ಆಚರಣೆ ಸಂಭ್ರಮದಿಂದ ನಡೆಯಿತು. ಗುಡ್ಡೆ ಕೇರಿಯ ಯುವಕರು ಹಿಂದಿನ ದಿನ ರಾತ್ರಿಯೇ ಮುಖ್ಯಧ್ವಾರವನ್ನು ತಳಿರು ತೋರಣಗಳಿಂದ ಸಿಂಗರಿಸಿ ‌ನೀರಿನ ಬಾವಿಯ ಸುತ್ತಲ ಪ್ರದೇಶವನ್ನು ಸ್ವಚ್ಛಗೊಳಿಸಿದರು. ನರಕ ಚತುರ್ದಶಿಯಂದು ನಸುಕಿನಲ್ಲಿಯೇ ಮಹಿಳೆಯರು ಸಂಪ್ರದಾಯದಂತೆ ಬೂರೆ ನೀರನ್ನು ತುಂಬುವ ಮೂಲಕ ಬಲಿಂದ್ರನನ್ನು ಬರಮಾಡಿಕೊಂಡರು. ಹಿಂದಿನ ಎರಡು ವರ್ಷಗಳ ಕಾಲ ಕೊರೋನಾ ವೈರಸ್ ಕಾರಣದಿಂದ ಕಳೆಗುಂದಿದ್ದ ದೀಪಾವಳಿ ಹಬ್ಬದ ಆಚರಣೆ, ಈ ವರ್ಷ ಸಂಭ್ರಮದಿಂದ ಆಚರಿಸಲ್ಪಡುತ್ತಿದೆ.

ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಹೊಸಳ್ಳಿಯಲ್ಲಿ ಸಂಪ್ರದಾಯದಂತೆ ಸೋಮವಾರ ನರಕ ಚತುರ್ದಶಿಯಂದು ಶ್ರೀರಾಮ ದೇವಾಲಯದಲ್ಲಿ ಬೂರೆನೀರು ತುಂಬಲಾಯಿತು. ಶ್ರೀ ರಾಮ ಹಾಗೂ ಪರಿವಾರ ದೇವತೆಗಳಿಗೆ ನರಕ ಚತುರ್ದಶಿಯ ನಿಮಿತ್ತ ಅರಿಷಿಣ ಎಣ್ಣೆ ಅಭ್ಯಂಜನ ಹಾಗೂ ಕ್ಷೀರಾಭಿಷೇಕವನ್ನು ನಡೆಸಲಾಯಿತು. ಊರಿನ ಬೊಮ್ಮೇದೇವರು ಹಾಗೂ ಭೂತರಾಜನಿಗೆ ಪೂಜೆಯನ್ನು ಅರ್ಪಿಸಲಾಯಿತು. ಭಕ್ತಾದಿಗಳು ಪೂಜೆಯಲ್ಲಿ ಸಾಮೂಹಿಕವಾಗಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಪೂಜೆಯನ್ನು ವಿನಾಯಕ ಭಟ್ಟ ಡೊಂಬೆಕೈ ಹಾಗೂ ನಾರಾಯಣ ಹೆಗಡೆ ಕಲ್ಲಾರೆಮನೆ ನೆರವೇರಿಸಿದರು. ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಹರೀಶ ನಾಯ್ಕ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *