bedkani@ 25-ಇಪ್ಪತ್ತೈದು ವರ್ಷ ಪೂರ್ಣಗೊಳಿಸಿದ ಬೇಡ್ಕಣಿ ಯಕ್ಷಗಾನಮೇಳ

ಸಿದ್ದಾಪುರ . ತಾಲೂಕಿನ ಬೇಡ್ಕಣಿಯಲ್ಲಿ ಕೋಟೆ ಹನುಮಂತ ದೇವರ ವರ್ಷತೊಡಕಿನ ಪಲ್ಲಕ್ಕಿ ಉತ್ಸವ ಶುಕ್ರವಾರ ನಡೆಯಿತು. ಬೆಳಿಗ್ಗೆ ಹನುಮಂತ ದೇವರ ಪಲ್ಲಕ್ಕಿ ಉತ್ಸವ ಮನೆಮನೆಗೆ ತೆರಳಿ ಪೂಜಿಸಲ್ಪಟ್ಟಿತು. ಸಂಜೆ ಪ್ರತಿವರ್ಷದಂತೆ ಶ್ರೀ ಮಾರುತಿ ಪ್ರಸಾದಿತ ಯಕ್ಷಗಾನ ಮಂಡಳಿ ಬೇಡ್ಕಣಿ ಯಕ್ಷಗಾನ ಬಯಲಾಟ ಏರ್ಪಡಿಸಿ ತ್ತು. ಈ ಸಂದರ್ದಲ್ಲಿ ಯಕ್ಷಗಾನ ಮಂಡಳಿಯ ಮುಖ್ಯಸ್ಥ ಲಕ್ಷ್ಮಣ ನಾಯ್ಕ ಮಾತನಾಡಿ ತಮ್ಮ ಸಹೋದರ ಕೃಷ್ಣಾ ಜಿ ಬೇಡ್ಕಣಿ ಮರುಹುಟ್ಟು ನೀಡಿದ ಈ ಮಂಡಳಿ ಇಂದು ಇಪ್ಪತ್ತಾರನೆಯ ವರ್ಷಕ್ಕೆ ಪಸದಾರ್ಪಣೆ ಮಾಡುತ್ತಿದ್ದು ಇಪ್ಪತ್ತೈದರ ಸಂಭ್ರಮವನ್ನು ಒಂದು ಹಬ್ಬದಂತೆ ಆಚರಿಸಬೇಕಿದೆ. ಅದಕ್ಕೆ ಕಲಾಭಿಮಾನಿಗಳ ಸಹಕಾರ ಬೇಕು ಎಂದರು.

ನಂತರ ಪಾಪಣ್ಣ ವಿಜಯ – ಗುಣಸುಂದರಿ ಎಂಬ ಪ್ರಸಂಗವನ್ನು ಬಯಲಾಟವಾಗಿ ಪ್ರದರ್ಶಿಸಲಾಯಿತು.ಹಿಮ್ಮೇಳದಲ್ಲಿ ಭಾಗವತರಾಗಿ ಕೃಷ್ಣ ಮರಾಠೆ , ಗಣಪತಿ ಭಟ್ಟ ಭರತೋಟ, ಮೃದಂಗ: ವಿಠ್ಠಲ ಪೂಜಾರಿ ಮಂಚಿಕೇರಿ, ಚಂಡೆ: ಕೃಷ್ಣ ಮೂರ್ತಿ ನಾಗರಕೊಡಗಿ . ಹಾಗೂ ಪಾತ್ರಧಾರಿಗಳಾಗಿ ಉಗ್ರಸೇನ: ಶ್ರೀಕಾಂತ ಹೆಗಡೆ ಹೆಗ್ಗೋಡು, ಹೇಮಸುಂದರಿ: ಪುರುಷೋತ್ತಮ ನಾಯ್ಕ ಮಂಜಿನಕಾನು, ರೂಪಸುಂದರಿ: ಗಿರಿಧರ ನಾಯ್ಕ , ಗುಣಸುಂದರಿ : ಕನ್ನಪ್ಪ ಮಾಸ್ತರ್ ತಡಗಳಲೆ ದೂತ: ವೆಂಕಟ್ರಮಣ ಹೆಗಡೆ ಮಾದ್ನಕಳ, ಪಾಪಣ್ಣ: ಕೃಷ್ಣಾ.ಜಿ.ಬೇಡ್ಕಣಿ , ದುರ್ಮುಖ: ಪ್ರಣವ್ ಭಟ್ ಸಿದ್ದಾಪುರ, ದುರ್ಮತಿ: ಮಂಜುನಾಥ ಶೆಟ್ಟಿ ಕಾಳೆನಳ್ಳಿ, ಚಂದ್ರಸೇನ: ವಿನಾಯಕ ಮಾಸ್ತರ್ ಕೂಜಳ್ಳಿ, ಯಕ್ಷಿಣಿ: ಸದಾನಂದ ಪಟಗಾರ ಸಿರಶಿ, ಕುಬೇರ: ಲಕ್ಷ್ಮೀನಾರಾಯಣ ಹೆಗಡೆ ಶಿರಗುಣಿ, ಈಶ್ವರ: ಶಿವು ಶಿರಳಗಿ, ಬಲ್ಲೂಕ: ಜನಾರ್ಧನ ಹಾರ್ಸಿಕಟ್ಟಾ ಸುಂದರ ಪ್ರದರ್ಶನ ನೀಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *