ಲೋಕಲ್ news – ಯೋಗೇಶ್‌ ಶಾನಭಾಗ ಅತ್ತ್ಯುತ್ತಮ ಹೈನುಗಾರ,ಕೆ.ಜಿ.ನಾಯ್ಕ ಬ್ಲಾಕ್‌ ಕಾಂಗ್ರೆಸ್‌ ಕಾನೂನು ಘಟಕದ ಅಧ್ಯಕ್ಷ

ನಗರದ ಹಿರಿಯ ವಕೀಲ ಕಮಲಾಕರ ಗಣಪ ನಾಯ್ಕ ಮಳಗುಳಿ ಸಿದ್ಧಾಪುರ ಬ್ಲಾಕ್‌ ಕಾಂಗ್ರೆಸ್‌ ಘಟಕದ ಕಾನೂನು ವಿಭಾಗದ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಲೇ ಕಾಂಗ್ರೆಸ್‌ ಪಕ್ಷದ ಸಕ್ರೀಯ ಸದಸ್ಯರಾಗಿ ಸೇವೆ ಸಲ್ಲಿಸುತಿದ್ದರು. ಈ ಅನುಭವದ ಆಧಾರದಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ ಅನುಮೋದನೆ ಮೇರೆಗೆ ಇವರನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ.