ಭುವನಗಿರಿಯಲ್ಲಿ ಧರ್ಮ ಸಾಂಮ್ರಾಜ್ಯ,ಬೇಡ್ಕಣಿಯಲ್ಲಿ ಸನ್ಮಾನ

ಸಿದ್ದಾಪುರ: ಯಾವುದೇ ಪ್ರದರ್ಶನ ಚೆನ್ನಾಗಿ ಮೂಡಿಬರಬೇಕೆಂದರೆ ನಿರ್ದೇಶಕನ ಪಾತ್ರ ಬಹಳ ಮುಖ್ಯ. ಉತ್ತಮ ನಿರ್ದೇಶಕರಿಂದ ಮಾತ್ರ ಕಲಾವಿದರಲ್ಲಿರುವ ಕಲೆ ಬೆಳಗಲು ಸಾಧ್ಯ ಎಂದು ಸ್ವಸ್ತಿಕ್ ಟ್ರೇಡರ್ಸ್ ಮಾಲೀಕರಾದ ರಾಮಚಂದ್ರ ಸುಬ್ರಾಯ ಭಟ್ಟ ಹೇಳಿದರು.
ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದಲ್ಲಿ ರಂಗಸೌಗಂಧ ಏರ್ಪಡಿಸಿದ್ದ ಧರ್ಮ ಸರ್ಮಾಜ್ಯ ನಾಟಕದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಟಿ ಎಸ್ ಎಸ್ ನಿರ್ದೇಶಕ ರಾಮಕೃಷ್ಣ ಹೆಗಡೆ ಅಳಗೊಡು ಮಾತನಾಡಿ, ಇಂದಿನ ಕಾಲದಲ್ಲಿ ನಾಟಕ ತಂಡ, ಯಕ್ಷಗಾನ ಮೇಳಗಳನ್ನು ಕಟ್ಟಿ ಮುನ್ನಡೆಸುವುದು ಸವಾಲಿನ ಕೆಲಸವಾಗಿದೆ. ಯಕ್ಷಗಾನ, ನಾಟಕಗಳು ಉಳಿದಾಗ ಮಾತ್ರ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಲು ಸಾಧ್ಯ. ಅದಕ್ಕೆ ಅಂತಹ ಕಲಾ ತಂಡಗಳಿಗೆ ನಮ್ಮೆಲ್ಲರ ಸಹಕಾರ ಅಗತ್ಯ ಎಂದರು.
ದೇವಾಲಯದ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜಗೋಡು ಸಭೆಯಲ್ಲಿ ಉಪಸ್ಥತರಿದ್ದರು ಮಾತನಾಡಿದರು.


ನಂತರ ರಂಗ ಸೌಗಂಧ ತಂಡದವರಿಂದ ದಿ.ಸೀತಾರಾಮ ಶಾಸ್ತ್ರಿ ಹುಲಿಮನೆ ರಚನೆಯ ಗಣಪತಿ ಹೆಗಡೆ ಹುಲಿಮನೆ ನಿರ್ದೇಶನದ ಧರ್ಮಸಾಮ್ರಾಜ್ಯ ನಾಟಕ ಪ್ರದರ್ಶನಗೊಂಡಿತು.ಸಂಗೀತದಲ್ಲಿ ರಾಜೇಂದ್ರ ಕೊಳಗಿ,ಜಯರಾಮ ಭಟ್ಟ ಹೆಗ್ಗಾರಳ್ಳಿ,ಶುಭಾ ರಮೇಶ, ಭೂಮಿಕಾ ಹೆಗಡೆ ಹೊಸಗದ್ದೆ ಸಹಕರಿಸಿದರು.
ಗಣಪತಿ ಹೆಗಡೆ ಗುಂಜಗೋಡು, ರಾಜಾರಾಮ ಭಟ್ಟ ಹೆಗ್ಗಾರಳ್ಳಿ, ರಾಮ ಅಂಕೋಲೇಕರ,ನಾಗಪತಿ ಭಟ್ಟ ವಡ್ಡಿನಗದ್ದೆ, ಶ್ರೀಪಾದ ಹೆಗಡೆ ಕೋಡನಮನೆ, ಅಜಿತ ಭಟ್ಟ ಹೆಗ್ಗಾರಳ್ಳಿ, ಜನಾರ್ಧನ ಭಟ್ಟ ಗೋಕರ್ಣ, ನಂದನ ನಾಯ್ಕ ಅರಶಿನಗೋಡ,ಪ್ರವೀಣಾ ಹೆಗಡೆ ಗುಂಜಗೋಡು, ಜಯಶ್ರೀ ಹೆಗಡೆ ವಡ್ಡಿನಗದ್ದೆ ವಿವಿಧ ಪಾತ್ರನಿರ್ವಹಿಸಿ ಮೆಚ್ಚುಗೆಗಳಿಸಿದರು.

ಸಿದ್ದಾಪುರ: ತಾಲೂಕಿನ ಬೇಡ್ಕಣಿಯ ಕೋಟೆ ಹನುಮಂತ ದೇವಾಲಯದ ಆಡಳಿತ ಸಮಿತಿ ಹಾಗೂ ಕೋಟೆ ಹನುಮಂತ ಪ್ರತಿಷ್ಠಾನದ ವತಿಯಿಂದ ವಿಶೇಷ ಸೇವಾಕರ್ತರು, ನಿವೃತ್ತ ಯೋಧರಿಗೆ ಗೌರವ ಸಮರ್ಪಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೋಮವಾರ ಸಂಜೆ ದೇವಾಲಯದ ಸಭಾಂಗಣದಲ್ಲಿ ಜರುಗಿತು.
ವಿಶೇಷ ಗೌರವಾರ್ಪಣೆಯಾಗಿ ನಾರಾಯಣ ನಾಯ್ಕ ಕಲಕೈ, ಮಂಜುನಾಥ ಮಡಿವಾಳ, ಮರಣೋತ್ತರವಾಗಿ ವೈಕುಂಠ ಪ್ರಭು, ಜಯಶೀಲ ಗೌಡ, ನಾಗೇಶ ನಾಯ್ಕ ಹಾಗೂ ಆರ್.ಜಿ.ನಾಯ್ಕ ಕುಟುಂಬದವರನ್ನು ಸನ್ಮಾನಿಸಲಾಯಿತು. ವಿಶೇಷ ಸೇವಾಕರ್ತರಾದ ಗೋಪಾಲ ನಾಯ್ಕ ಕಾನಳ್ಳಿ ದಂಪತಿ, ದಿ. ಈರಾ ನಾಯ್ಕ ಹುಲಿಮನೆ ಕುಟುಂಬಸ್ಥರನ್ನು, ಗಣಪತಿ ನಾಯ್ಕ ಹೊಸನಗರ, ಮಂಜುನಾಥ ಆಚಾರಿ ಘಡೆಮನೆ ಹಾಗೂ ನಿವೃತ್ತ ಸೈನಿಕರಾದ ಮಹಾಬಲೇಶ್ವರ ನಾಯ್ಕ ಮದ್ದಿನಕೇರಿ, ಗೋವಿಂದ ನಾಯ್ಕ ಬೇಡ್ಕಣಿ, ರಮೇಶ ನಾಯ್ಕ, ವಸಂತ ನಾಯ್ಕ ಹುಲಿಮನೆ ಹಾಗೂ ಷಣ್ಮುಖ ಗೌಡ ಕಲಕೈ ಹಾಗೂ ಸೋಮವಾರ ನಡೆದ ಧಾರ್ಮಿಕ ಕಾರ್ಯಕ್ರಮದ ವಿಧಿ-ವಿಧಾನ ನೆರವೇರಿಸಿದ ಅರ್ಚಕರನ್ನು ದೇವಾಲಯದ ವತಿಯಿಂದ ಸನ್ಮಾನಿಸಲಾಯಿತು.


ಜನತಾ ವಿದ್ಯಾಲಯ ಬೇಡ್ಕಣಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ತ್ಯಾರ್ಸಿಯ ಮಂಜುನಾಥ ಮಾರುತಿ ನಾಯ್ಕ, ರಚನಾ ಎಂ.ಎಸ್., ದಿನೇಶ ನಾಯ್ಕ ಕಡಕೇರಿ, ಸುಮಂತ ಹೆಗಡೆ ಭಾನ್ಕುಳಿ, ಷಣ್ಮುಖ ಮಡಿವಾಳ ಮರಲಗಿ, ತೇಜಸ್ವಿನಿ ನಾಯ್ಕ ವಾಟಗಾರ, ಸುಧಾಕರ ಚೆನ್ನಯ್ಯ ಬೇಡ್ಕಣಿ, ಚಿನ್ಮಯಿ ನಾಯ್ಕ ಬೇಡ್ಕಣಿ, ಕವನಾ ಗೌಡ ಮರಲಗಿ, ಚೈತ್ರಾ ಎಂ.ಎಸ್., ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ವೈದಿಕರಾದ ನಿರಂಜನ್ ಜೊಯಿಸ್ ಕಾರ್ಯಕ್ರಮ ಉದ್ಘಾಟಿಸಿದರು.
ಕೋಟೆ ಆಂಜನೇಯ ದೇವಾಲಯದ ಪ್ರತಿಷ್ಠಾನ ಆಡಳಿತ ಸೇವಾ ಸಮಿತಿ ಅಧ್ಯಕ್ಷ ವಿ.ಎನ್.ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಬೇಡ್ಕಣಿ ಗ್ರಾಮ ದೇವಾಲಯ ಸಮಿತಿ ಅಧ್ಯಕ್ಷ ನಾಗರಾಜ ನಾಯ್ಕ, ಭುವನಗಿರಿ ದೇವಾಲಯದ ಅಧ್ಯಕ್ಷ ಶ್ರೀಕಾಂತ ಹೆಗಡೆ, ಪ್ರಮುಖರಾದ ಜಟ್ಟಪ್ಪ ಮೊಗೇರ ಉಪಸ್ಥಿತರಿದ್ದರು.

ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ನೀಡುವ ಯಕ್ಷಸಿರಿ ಪ್ರಶಸ್ತಿಗೆ ಭಾಜನರಾದ ಹಿರಿಯ ಯಕ್ಷಗಾನ ಕಲಾವಿದ ಕೃಷ್ಣಾಜಿ ಬೇಡ್ಕಣಿ ಇವರನ್ನು ಕೋಟೆ ಹನುಮಂತ ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು. ನಾರಾಯಣ ನಾಯ್ಕ ಸ್ವಾಗತಿಸಿದರು. ದೇವಾಲಯದ ಕಾರ್ಯದರ್ಶಿ ರಮೇಶ ನಾಯ್ಕ ಹಾಗೂ ಸುರೇಶ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *