ಕನ್ನಡ ಹಬ್ಬ,ನಾಟಕ ಪ್ರದರ್ಶನ,ಪುಸ್ತಕ ಬಿಡುಗಡೆ,ಡ್ರಾಮಾ ಸೀನ್ಸ್‌ ಲೋಕಾರ್ಪಣೆ

ಸಿದ್ದಾಪುರ: ಕನ್ನಡ ತಾಯಿ ಭುವನೇಶ್ವರಿ ವೇದಿಕೆ, ಅಮರ ಪುನೀತ ರಾಜಕುಮಾರ ಕಲಾಬಳಗ ಸಿದ್ದಾಪುರ ಹಾಗೂ ಗಂಗಾಂಬಿಕಾ ಭಕ್ತಮಂಡಳಿ ವತಿಯಿಂದ ನವೆಂಬರ 26 ರಂದು ಸಿದ್ದಾಪುರದ ನೆಹರು ಮೈದಾನದಲ್ಲಿ ಕನ್ನಡ ಹಬ್ಬ, ಸಾಧಕರಿಗೆ ಸನ್ಮಾನ, ಪ್ರಶಸ್ತಿ ಪ್ರಧಾನ ಹಾಗೂ ಆಯ್ದ ಪ್ರತಿಭಾವಂತ ಕಲಾವಿದರ ಕೂಡುವಿಕೆಯಲ್ಲಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.


ಈ ಕುರಿತು ಪಟ್ಟಣದಲ್ಲಿ ಅಮರ ಪುನೀತ ರಾಜಕುಮಾರ ಕಲಾಬಳಗದ ಅಧ್ಯಕ್ಷ ವಿನಾಯಕ ನಾಯ್ಕ ಹಾಗೂ ಭುವನೇಶ್ವರಿ ವೇದಿಕೆ ಅಧ್ಯಕ್ಷ ಆಕಾಶ ಕೊಂಡ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ನವೆಂಬರ 26 ರಂದು ಸಂಜೆ ಕನ್ನಡ ಹಬ್ಬ ನಡೆಯಲಿದ್ದು, ಕನ್ನಡ ತಾಯಿ ಭುವನೇಶ್ವರಿ ಪ್ರಶಸ್ತಿಯನ್ನು ಪುನೀತ ರಾಜಕುಮಾರ ಅನಾಥಾಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ ಅವರಿಗೆ ನೀಡಿ ಗೌರವಿಸಲಾಗುವುದು. ಅದೇ ರೀತಿ ಸಿದ್ದಾಪುರ ಸಿಪಿಐ ಕುಮಾರ ಕೆ., ನಿವೃತ್ತ ಯೋಧ ಮನೋಹರ ನಾಯ್ಕ ಹಾಗೂ ನಾಟಕ ಕೃತಿ ಬರಹಗಾರ ವಿನಾಯಕ ನಾಯ್ಕ ಕೊಂಡ್ಲಿ ಇವರನ್ನು ಸನ್ಮಾನಿಸಲಾಗುವುದು. ಇದೇ ವೇಳೆ ಜೈ ಅಂಜನೇಯ ಡ್ರಾಮಾ ಸಿನ್ಸ್ ಕೊರಕೋಡ ಸೊರಬಾ ದ ಲೋಕಾರ್ಪಣೆ ಹಾಗೂ ಸೀನ್ಸ್ ಉದ್ಘಾಟನೆ ನಡೆಯಲಿದೆ ಎಂದರು.


ಕೊಂಡ್ಲಿಯ ವಿನಾಯಕ ನಾಯ್ಕ ಬರೆದ ಪ್ರಥಮ ಕಲಾಕುಸುಮ ‘ ಧನಿಕರ ದರ್ಪಕ್ಕೆ ತೀರ್ಪುಕೊಟ್ಟ ಸೂರ್ಯ-ಚಂದ್ರ ‘ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ರಾಜ್ಯದ ವಿವಿಧ ಭಾಗದ ಪ್ರತಿಭಾವಂತ ಆಯ್ದ ಕಲಾವಿದರ ಸಂಗಮದೊಂದಿಗೆ ನಾಟಕ ಪ್ರದರ್ಶನಗೊಳ್ಳಲಿದೆ. ಮಧುಕರ ಶಿರಸಿ, ರಾಘು ಮುಂಡಗೋಡ, ಪ್ರವೀಣ್ ಸೊರಬಾ, ಚೆನ್ನಪ್ಪ ಹಾವೇರಿ ಸೇರಿದಂತೆ ಸಿದ್ದಾಪುರ ತಾಲೂಕಿನ ಪ್ರಮುಖ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ ಎಂದರು.


ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಘನ ಉಪಸ್ಥಿತಿಯಲ್ಲಿ ಕನ್ನಡ ಹಬ್ಬದ ಸಭಾ ಕಾರ್ಯಕ್ರಮ ಜರುಗಲಿದೆ‌. ಉದ್ಯಮಿ ಉಪೇಂದ್ರ ಪೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಮಂತ್ರಿತರಾಗಿ ಶ್ರೇಯಸ್ ಆಸ್ಪತ್ರೆಯ ಶ್ರೀಧರ ವೈದ್ಯ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಮುಖಂಡ ಕೆ.ಜಿ.ನಾಗರಾಜ ನೂತನ ರಂಗಸಜ್ಜಿಕೆ ಲೋಕಾರ್ಪಣೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ ಸದಸ್ಯರಾದ ರವಿಕುಮಾರ ನಾಯ್ಕ, ಮಾರುತಿ ನಾಯ್ಕ, ಉಪನ್ಯಾಸಕ ಹಿತೇಂದ್ರ ನಾಯ್ಕ, ಉದ್ಯಮಿ ಬಸೀರ ಸಾಬ್ ಬೇಡ್ಕಣಿ, ಕಾವಂಚೂರ ಗ್ರಾಪಂ ಅಧ್ಯಕ್ಷ ಜಿ.ಟಿ.ನಾಯ್ಕ, ಆಮ್ ಆದ್ಮಿ ಜಿಲ್ಲಾ ಉಪಾಧ್ಯಕ್ಷ ವೀರಭದ್ರ ನಾಯ್ಕ, ಕಾಂಗ್ರೆಸ್ ಮುಖಂಡ ನಾಸಿರ್ ಖಾನ್, ಕಸಾಪ ಅಧ್ಯಕ್ಷ ಗೋಪಾಲ ನಾಯ್ಕ, ಭುವನೇಶ್ವರಿ ವೇದಿಕೆ ಅಧ್ಯಕ್ಷ ಆಕಾಶ್ ಕೊಂಡ್ಲಿ, ಪುನೀತ ರಾಜಕುಮಾರ ಕಲಾಬಳಗದ ಅಧ್ಯಕ್ಷ ವಿನಾಯಕ ಕೊಂಡ್ಲಿ, ಉದ್ಯಮಿ ಪೆಟ್ರಿಕ್ ಡಿಸಿಲ್ವಾ, ಕಾಂಗ್ರೆಸ್ ಮುಖಂಡ ಅಬ್ದುಲ್ ಸಾಬ್ ಹೆರೂರ, ಗಂಗಾಬಿಕಾ ದೇವಸ್ಥಾನದ ಅಧ್ಯಕ್ಷ ನಾಗರಾಜ ಅಂಬಿಗ ಹಾಗೂ ಕಾರ್ಯದರ್ಶಿ ಹೊನ್ನಪ್ಪ ಅಂಬಿಗ ಉಪಸ್ಥಿತರಿರುವರು. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಂಘಟಕರು ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪುನೀತ ರಾಜಕುಮಾರ ಕಲಾಬಳಗದ ಕಾರ್ಯದರ್ಶಿ ಪ್ರವೀಣ್ ನಾಯ್ಕ, ಖಜಾಂಚಿ ವೆಂಕಟೇಶ ಕೊಂಡ್ಲಿ ಹಾಗೂ ಸದಸ್ಯ ಬಾಲಚಂದ್ರ ನಾಯ್ಕ ತ್ಯಾರ್ಸಿ ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *