ಸೋಜಿಗವೀಜಗ!- ಸೆಲ್ಫಿ ವಿಥ್‌ ಆನೆ!

ಹುಬ್ಬಳ್ಳಿ: ಎಲ್ಲರ ಗಮನ ಸೆಳೆಯುತ್ತಿರುವ ಆನೆ ಆಕೃತಿಯ ಈ ಮರ, ಈಗ ಸೆಲ್ಫಿ ಕೇಂದ್ರ!

ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ?

The elephant trunk tree in Dajibanpet area of Hubballi - D Hemanth

ಹುಬ್ಬಳ್ಳಿ: ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ? ಆ ಮರ ಆನೆಯ ಆಕೃತಿಯಲ್ಲಿದ್ದು ಸೆಲ್ಫಿ ಪ್ರಿಯರಿಗೆ ಫೋಟೋ ಕ್ಲಿಕ್ಕಿಸಿಕೊಳ್ಳುವುದಕ್ಕೆ ಅತ್ಯುತ್ತಮ ತಾಣವಾಗಿ ಮಾರ್ಪಾಡಾಗಿದೆ. 

ಆನೆಯ ಸೊಂಡಿಲ ಮಾದರಿಯಲ್ಲಿ ಈ ಮರ ಬೆಳೆದಿದ್ದು, ಸೆಲ್ಫಿ ಕ್ಲಿಕ್ಕಿಸಿಕೊಳ್ಳುವವರ ಜೊತೆಗೆ ಈ ಮರಕ್ಕೆ ಪೂಜೆ ಸಲ್ಲಿಸುವ ಭಕ್ತಾದಿಗಳ ಸಂಖ್ಯೆಯೂ ಹೆಚ್ಚಳವಾಗಿದೆ. ಈ ಮರಕ್ಕೆ ಜನರು ಹಣ್ಣು, ಹೂವುಗಳನ್ನು ಅರ್ಪಿಸಲು ಪ್ರಾರಂಭಿಸಿದ್ದಾರೆ. 

ಈ ಬೇವಿನ ಮರ ಹಲವು ವರ್ಷಗಳಿಂದ ಇದೆ. ಆದರೆ ಬೆಳೆಯುತ್ತಾ ಅದು ಆನೆಯ ಸೊಂಡಿಲ ಆಕೃತಿ ಪಡೆದಿದ್ದರಿಂದ ಸ್ಥಳೀಯ ವರ್ತಕರು ಅದಕ್ಕೆ ಕಣ್ಣು ಹಾಗೂ ದಂತಗಳನ್ನು ಬರೆದಿದ್ದಾರೆ.  ಕೆಲವು ತಿಂಗಳ ಹಿಂದೆ ಬಣ್ಣ ಹಾಕಿದ ನಂತರ ಈ ಮರ ಮತ್ತಷ್ಟು ಜನಪ್ರಿಯತೆ/ ಖ್ಯಾತಿ ಗಳಿಸಿದ್ದು, ಆ ಪ್ರದೇಶದಲ್ಲಿ ಸಂಚರಿಸುವ ಮಂದಿ ವಾಹನ ನಿಲ್ಲಿಸಿ ತಲೆಬಾಗಿ ನಮಿಸಿ ಮುಂದೆ ಸಾಗುತ್ತಾರೆ. 

ಈ ಬಗ್ಗೆ ಮಾತನಾಡಿರುವ ಕಲಬುರಗಿ ಮ್ಯಾಚಿಂಗ್ ಸೆಂಟರ್ ನ ಮಾಲಿಕರಾಗಿರುವ ಉದಯ್ ಕಲಬುರಗಿ, ಈ ಮರ ತಮ್ಮ ಮಳಿಗೆಯ ಪಕ್ಕದಲ್ಲೇ ಇದ್ದು, ಬಾಲ್ಯದಿಂದಲೂ ಈ ಮರವನ್ನು ನೋಡುತ್ತಿರುವುದಾಗಿ ಹೇಳಿದ್ದಾರೆ.

ಆನೆ ಆಕೃತಿಯನ್ನು ಹೊಂದಿರುವ ಮರ ಬೇವಿನ ಮರವಾಗಿದ್ದು, ಪಕ್ಕದಲ್ಲೇ ಆಲದ ಮರವೂ ಇದೆ. ಎರಡೂ ಮರಗಳೂ ಕನಿಷ್ಟ 100 ವರ್ಷಗಳಷ್ಟು ಹಳೆಯದ್ದಾಗಿದೆ ಎಂಬ ಮಾಹಿತಿ ನೀಡಿದ್ದಾರೆ. 

ನಾಲ್ಕು ವರ್ಷಗಳ ಹಿಂದೆಯೂ ಈ ಮರ ಆನೆಯ ಸೊಂಡಿಲ ಆಕೃತಿಯಲ್ಲಿ ಬೆಳೆಯತ್ತಿರುವುದನ್ನು ಯಾರೂ ಗಮನಿಸಿರಲಿಲ್ಲ. ಏಕಾ ಏಕಿ ಈ ಪ್ರದೇಶದಲ್ಲಿ ಮರ ಇಷ್ಟೊಂದು ಜನಪ್ರಿಯವಾಗಿದೆ ಎನ್ನುತ್ತಾರೆ ಉದಯ್ ಕಲಬುರಗಿ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *