ಸೋಜಿಗವೀಜಗ!- ಸೆಲ್ಫಿ ವಿಥ್‌ ಆನೆ!

ಹುಬ್ಬಳ್ಳಿ: ಎಲ್ಲರ ಗಮನ ಸೆಳೆಯುತ್ತಿರುವ ಆನೆ ಆಕೃತಿಯ ಈ ಮರ, ಈಗ ಸೆಲ್ಫಿ ಕೇಂದ್ರ!

ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ?

The elephant trunk tree in Dajibanpet area of Hubballi - D Hemanth

ಹುಬ್ಬಳ್ಳಿ: ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ? ಆ ಮರ ಆನೆಯ ಆಕೃತಿಯಲ್ಲಿದ್ದು ಸೆಲ್ಫಿ ಪ್ರಿಯರಿಗೆ ಫೋಟೋ ಕ್ಲಿಕ್ಕಿಸಿಕೊಳ್ಳುವುದಕ್ಕೆ ಅತ್ಯುತ್ತಮ ತಾಣವಾಗಿ ಮಾರ್ಪಾಡಾಗಿದೆ. 

ಆನೆಯ ಸೊಂಡಿಲ ಮಾದರಿಯಲ್ಲಿ ಈ ಮರ ಬೆಳೆದಿದ್ದು, ಸೆಲ್ಫಿ ಕ್ಲಿಕ್ಕಿಸಿಕೊಳ್ಳುವವರ ಜೊತೆಗೆ ಈ ಮರಕ್ಕೆ ಪೂಜೆ ಸಲ್ಲಿಸುವ ಭಕ್ತಾದಿಗಳ ಸಂಖ್ಯೆಯೂ ಹೆಚ್ಚಳವಾಗಿದೆ. ಈ ಮರಕ್ಕೆ ಜನರು ಹಣ್ಣು, ಹೂವುಗಳನ್ನು ಅರ್ಪಿಸಲು ಪ್ರಾರಂಭಿಸಿದ್ದಾರೆ. 

ಈ ಬೇವಿನ ಮರ ಹಲವು ವರ್ಷಗಳಿಂದ ಇದೆ. ಆದರೆ ಬೆಳೆಯುತ್ತಾ ಅದು ಆನೆಯ ಸೊಂಡಿಲ ಆಕೃತಿ ಪಡೆದಿದ್ದರಿಂದ ಸ್ಥಳೀಯ ವರ್ತಕರು ಅದಕ್ಕೆ ಕಣ್ಣು ಹಾಗೂ ದಂತಗಳನ್ನು ಬರೆದಿದ್ದಾರೆ.  ಕೆಲವು ತಿಂಗಳ ಹಿಂದೆ ಬಣ್ಣ ಹಾಕಿದ ನಂತರ ಈ ಮರ ಮತ್ತಷ್ಟು ಜನಪ್ರಿಯತೆ/ ಖ್ಯಾತಿ ಗಳಿಸಿದ್ದು, ಆ ಪ್ರದೇಶದಲ್ಲಿ ಸಂಚರಿಸುವ ಮಂದಿ ವಾಹನ ನಿಲ್ಲಿಸಿ ತಲೆಬಾಗಿ ನಮಿಸಿ ಮುಂದೆ ಸಾಗುತ್ತಾರೆ. 

ಈ ಬಗ್ಗೆ ಮಾತನಾಡಿರುವ ಕಲಬುರಗಿ ಮ್ಯಾಚಿಂಗ್ ಸೆಂಟರ್ ನ ಮಾಲಿಕರಾಗಿರುವ ಉದಯ್ ಕಲಬುರಗಿ, ಈ ಮರ ತಮ್ಮ ಮಳಿಗೆಯ ಪಕ್ಕದಲ್ಲೇ ಇದ್ದು, ಬಾಲ್ಯದಿಂದಲೂ ಈ ಮರವನ್ನು ನೋಡುತ್ತಿರುವುದಾಗಿ ಹೇಳಿದ್ದಾರೆ.

ಆನೆ ಆಕೃತಿಯನ್ನು ಹೊಂದಿರುವ ಮರ ಬೇವಿನ ಮರವಾಗಿದ್ದು, ಪಕ್ಕದಲ್ಲೇ ಆಲದ ಮರವೂ ಇದೆ. ಎರಡೂ ಮರಗಳೂ ಕನಿಷ್ಟ 100 ವರ್ಷಗಳಷ್ಟು ಹಳೆಯದ್ದಾಗಿದೆ ಎಂಬ ಮಾಹಿತಿ ನೀಡಿದ್ದಾರೆ. 

ನಾಲ್ಕು ವರ್ಷಗಳ ಹಿಂದೆಯೂ ಈ ಮರ ಆನೆಯ ಸೊಂಡಿಲ ಆಕೃತಿಯಲ್ಲಿ ಬೆಳೆಯತ್ತಿರುವುದನ್ನು ಯಾರೂ ಗಮನಿಸಿರಲಿಲ್ಲ. ಏಕಾ ಏಕಿ ಈ ಪ್ರದೇಶದಲ್ಲಿ ಮರ ಇಷ್ಟೊಂದು ಜನಪ್ರಿಯವಾಗಿದೆ ಎನ್ನುತ್ತಾರೆ ಉದಯ್ ಕಲಬುರಗಿ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *