ಸೋಜಿಗವೀಜಗ!- ಸೆಲ್ಫಿ ವಿಥ್‌ ಆನೆ!

ಹುಬ್ಬಳ್ಳಿ: ಎಲ್ಲರ ಗಮನ ಸೆಳೆಯುತ್ತಿರುವ ಆನೆ ಆಕೃತಿಯ ಈ ಮರ, ಈಗ ಸೆಲ್ಫಿ ಕೇಂದ್ರ!

ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ?

The elephant trunk tree in Dajibanpet area of Hubballi - D Hemanth

ಹುಬ್ಬಳ್ಳಿ: ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ? ಆ ಮರ ಆನೆಯ ಆಕೃತಿಯಲ್ಲಿದ್ದು ಸೆಲ್ಫಿ ಪ್ರಿಯರಿಗೆ ಫೋಟೋ ಕ್ಲಿಕ್ಕಿಸಿಕೊಳ್ಳುವುದಕ್ಕೆ ಅತ್ಯುತ್ತಮ ತಾಣವಾಗಿ ಮಾರ್ಪಾಡಾಗಿದೆ. 

ಆನೆಯ ಸೊಂಡಿಲ ಮಾದರಿಯಲ್ಲಿ ಈ ಮರ ಬೆಳೆದಿದ್ದು, ಸೆಲ್ಫಿ ಕ್ಲಿಕ್ಕಿಸಿಕೊಳ್ಳುವವರ ಜೊತೆಗೆ ಈ ಮರಕ್ಕೆ ಪೂಜೆ ಸಲ್ಲಿಸುವ ಭಕ್ತಾದಿಗಳ ಸಂಖ್ಯೆಯೂ ಹೆಚ್ಚಳವಾಗಿದೆ. ಈ ಮರಕ್ಕೆ ಜನರು ಹಣ್ಣು, ಹೂವುಗಳನ್ನು ಅರ್ಪಿಸಲು ಪ್ರಾರಂಭಿಸಿದ್ದಾರೆ. 

ಈ ಬೇವಿನ ಮರ ಹಲವು ವರ್ಷಗಳಿಂದ ಇದೆ. ಆದರೆ ಬೆಳೆಯುತ್ತಾ ಅದು ಆನೆಯ ಸೊಂಡಿಲ ಆಕೃತಿ ಪಡೆದಿದ್ದರಿಂದ ಸ್ಥಳೀಯ ವರ್ತಕರು ಅದಕ್ಕೆ ಕಣ್ಣು ಹಾಗೂ ದಂತಗಳನ್ನು ಬರೆದಿದ್ದಾರೆ.  ಕೆಲವು ತಿಂಗಳ ಹಿಂದೆ ಬಣ್ಣ ಹಾಕಿದ ನಂತರ ಈ ಮರ ಮತ್ತಷ್ಟು ಜನಪ್ರಿಯತೆ/ ಖ್ಯಾತಿ ಗಳಿಸಿದ್ದು, ಆ ಪ್ರದೇಶದಲ್ಲಿ ಸಂಚರಿಸುವ ಮಂದಿ ವಾಹನ ನಿಲ್ಲಿಸಿ ತಲೆಬಾಗಿ ನಮಿಸಿ ಮುಂದೆ ಸಾಗುತ್ತಾರೆ. 

ಈ ಬಗ್ಗೆ ಮಾತನಾಡಿರುವ ಕಲಬುರಗಿ ಮ್ಯಾಚಿಂಗ್ ಸೆಂಟರ್ ನ ಮಾಲಿಕರಾಗಿರುವ ಉದಯ್ ಕಲಬುರಗಿ, ಈ ಮರ ತಮ್ಮ ಮಳಿಗೆಯ ಪಕ್ಕದಲ್ಲೇ ಇದ್ದು, ಬಾಲ್ಯದಿಂದಲೂ ಈ ಮರವನ್ನು ನೋಡುತ್ತಿರುವುದಾಗಿ ಹೇಳಿದ್ದಾರೆ.

ಆನೆ ಆಕೃತಿಯನ್ನು ಹೊಂದಿರುವ ಮರ ಬೇವಿನ ಮರವಾಗಿದ್ದು, ಪಕ್ಕದಲ್ಲೇ ಆಲದ ಮರವೂ ಇದೆ. ಎರಡೂ ಮರಗಳೂ ಕನಿಷ್ಟ 100 ವರ್ಷಗಳಷ್ಟು ಹಳೆಯದ್ದಾಗಿದೆ ಎಂಬ ಮಾಹಿತಿ ನೀಡಿದ್ದಾರೆ. 

ನಾಲ್ಕು ವರ್ಷಗಳ ಹಿಂದೆಯೂ ಈ ಮರ ಆನೆಯ ಸೊಂಡಿಲ ಆಕೃತಿಯಲ್ಲಿ ಬೆಳೆಯತ್ತಿರುವುದನ್ನು ಯಾರೂ ಗಮನಿಸಿರಲಿಲ್ಲ. ಏಕಾ ಏಕಿ ಈ ಪ್ರದೇಶದಲ್ಲಿ ಮರ ಇಷ್ಟೊಂದು ಜನಪ್ರಿಯವಾಗಿದೆ ಎನ್ನುತ್ತಾರೆ ಉದಯ್ ಕಲಬುರಗಿ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *