ಸೋಜಿಗವೀಜಗ!- ಸೆಲ್ಫಿ ವಿಥ್‌ ಆನೆ!

ಹುಬ್ಬಳ್ಳಿ: ಎಲ್ಲರ ಗಮನ ಸೆಳೆಯುತ್ತಿರುವ ಆನೆ ಆಕೃತಿಯ ಈ ಮರ, ಈಗ ಸೆಲ್ಫಿ ಕೇಂದ್ರ!

ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ?

The elephant trunk tree in Dajibanpet area of Hubballi - D Hemanth

ಹುಬ್ಬಳ್ಳಿ: ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ? ಆ ಮರ ಆನೆಯ ಆಕೃತಿಯಲ್ಲಿದ್ದು ಸೆಲ್ಫಿ ಪ್ರಿಯರಿಗೆ ಫೋಟೋ ಕ್ಲಿಕ್ಕಿಸಿಕೊಳ್ಳುವುದಕ್ಕೆ ಅತ್ಯುತ್ತಮ ತಾಣವಾಗಿ ಮಾರ್ಪಾಡಾಗಿದೆ. 

ಆನೆಯ ಸೊಂಡಿಲ ಮಾದರಿಯಲ್ಲಿ ಈ ಮರ ಬೆಳೆದಿದ್ದು, ಸೆಲ್ಫಿ ಕ್ಲಿಕ್ಕಿಸಿಕೊಳ್ಳುವವರ ಜೊತೆಗೆ ಈ ಮರಕ್ಕೆ ಪೂಜೆ ಸಲ್ಲಿಸುವ ಭಕ್ತಾದಿಗಳ ಸಂಖ್ಯೆಯೂ ಹೆಚ್ಚಳವಾಗಿದೆ. ಈ ಮರಕ್ಕೆ ಜನರು ಹಣ್ಣು, ಹೂವುಗಳನ್ನು ಅರ್ಪಿಸಲು ಪ್ರಾರಂಭಿಸಿದ್ದಾರೆ. 

ಈ ಬೇವಿನ ಮರ ಹಲವು ವರ್ಷಗಳಿಂದ ಇದೆ. ಆದರೆ ಬೆಳೆಯುತ್ತಾ ಅದು ಆನೆಯ ಸೊಂಡಿಲ ಆಕೃತಿ ಪಡೆದಿದ್ದರಿಂದ ಸ್ಥಳೀಯ ವರ್ತಕರು ಅದಕ್ಕೆ ಕಣ್ಣು ಹಾಗೂ ದಂತಗಳನ್ನು ಬರೆದಿದ್ದಾರೆ.  ಕೆಲವು ತಿಂಗಳ ಹಿಂದೆ ಬಣ್ಣ ಹಾಕಿದ ನಂತರ ಈ ಮರ ಮತ್ತಷ್ಟು ಜನಪ್ರಿಯತೆ/ ಖ್ಯಾತಿ ಗಳಿಸಿದ್ದು, ಆ ಪ್ರದೇಶದಲ್ಲಿ ಸಂಚರಿಸುವ ಮಂದಿ ವಾಹನ ನಿಲ್ಲಿಸಿ ತಲೆಬಾಗಿ ನಮಿಸಿ ಮುಂದೆ ಸಾಗುತ್ತಾರೆ. 

ಈ ಬಗ್ಗೆ ಮಾತನಾಡಿರುವ ಕಲಬುರಗಿ ಮ್ಯಾಚಿಂಗ್ ಸೆಂಟರ್ ನ ಮಾಲಿಕರಾಗಿರುವ ಉದಯ್ ಕಲಬುರಗಿ, ಈ ಮರ ತಮ್ಮ ಮಳಿಗೆಯ ಪಕ್ಕದಲ್ಲೇ ಇದ್ದು, ಬಾಲ್ಯದಿಂದಲೂ ಈ ಮರವನ್ನು ನೋಡುತ್ತಿರುವುದಾಗಿ ಹೇಳಿದ್ದಾರೆ.

ಆನೆ ಆಕೃತಿಯನ್ನು ಹೊಂದಿರುವ ಮರ ಬೇವಿನ ಮರವಾಗಿದ್ದು, ಪಕ್ಕದಲ್ಲೇ ಆಲದ ಮರವೂ ಇದೆ. ಎರಡೂ ಮರಗಳೂ ಕನಿಷ್ಟ 100 ವರ್ಷಗಳಷ್ಟು ಹಳೆಯದ್ದಾಗಿದೆ ಎಂಬ ಮಾಹಿತಿ ನೀಡಿದ್ದಾರೆ. 

ನಾಲ್ಕು ವರ್ಷಗಳ ಹಿಂದೆಯೂ ಈ ಮರ ಆನೆಯ ಸೊಂಡಿಲ ಆಕೃತಿಯಲ್ಲಿ ಬೆಳೆಯತ್ತಿರುವುದನ್ನು ಯಾರೂ ಗಮನಿಸಿರಲಿಲ್ಲ. ಏಕಾ ಏಕಿ ಈ ಪ್ರದೇಶದಲ್ಲಿ ಮರ ಇಷ್ಟೊಂದು ಜನಪ್ರಿಯವಾಗಿದೆ ಎನ್ನುತ್ತಾರೆ ಉದಯ್ ಕಲಬುರಗಿ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *