

೮೬ ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನೇವರಿ,೬ ೨೦೨೩ ರಿಂದ ಹಾವೇರಿಯಲ್ಲಿ ನಡೆಯಲಿದೆ. ಈ ಸಮ್ಮೇಳನದ ಪ್ರಚಾರ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ಪ್ರಚಾರದ ಅಂಗವಾಗಿ ಕನ್ನಡ ರಥ ರಾಜ್ಯಾದ್ಯಂತ ಸಂಚರಿಸಲಿದೆ. ಸಾಹಿತ್ಯ ಸಮ್ಮೇಳನದ ಪ್ರಚಾರದ ಕನ್ನಡ ರಥಕ್ಕೆ ಗುರುವಾರ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಭುವನಗಿರಿಯಲ್ಲಿ ವಿದ್ಯುಕ್ತ ಚಾಲನೆ ನೀಡಲಾಯಿತು.

ಕನ್ನಡ ತಾಯಿ ಭುವನೇಶ್ವರಿಯ ದೇವಾಲಯ ಎನ್ನಲಾಗುವ ಭುವನಗಿರಿಯಲ್ಲಿ ಕಲಾತಂಡಗಳು,ಸಾಹಿತ್ಯಾಭಿಮಾನಿಗಳ ಉಪಸ್ಥಿತಿಯಲ್ಲಿ ಕನ್ನಡ ರಥಕ್ಕೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಷಿ ಚಾಲನೆ ನೀಡಿದರು.
ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕಾಗಿ ಬುಧವಾರ ಹಾವೇರಿ ಜಿಲ್ಲೆಯ ಗೊಟಗೋಡಿನಿಂದ ಹೊರಟ ಈ ಕನ್ನಡ ರಥಕ್ಕೆ ಗುರುವಾರ ಭುವನಗಿರಿಯಲ್ಲಿ ವಿದ್ಯುಕ್ತ ಚಾಲನೆ ನೀಡಲಾಯಿತು.
ಗುರುವಾರ ಉತ್ತರ ಕನ್ನಡ ಜಿಲ್ಲೆಯಿಂದ ಹೊರಟ ಈ ಕನ್ನಡ ರಥದ ಜ್ಯೋತಿ ಇಡೀ ರಾಜ್ಯವನ್ನು ಸಂಚರಿಸಿ ಜನೇವರಿ ೬ ರಂದು ಹಾವೇರಿಯಲ್ಲಿ ಪ್ರಾರಂಭವಾಗಲಿರುವ ೮೬ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆಯ ದೀಪ ಬೆಳಗಿಸಲಿದೆ. ಕನ್ನಡದ ಭುವನೇಶ್ವರಿ ದೇವಾಲಯದಿಂದ ಹೊರಟ ಕನ್ನಡ ರಥ ರಾಜ್ಯ ಸಂಚರಿಸಿ ಕನ್ನಡ ಸಾಹಿತ್ಯ ಸಮ್ಮೇಳದ ಉದ್ಘಾಟನೆಯ ದಿವ್ಯ ಜ್ಯೋತಿಯಾಗಲಿದೆ ಎಂದು ಜೋಷಿ ತಿಳಿಸಿದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
