jds ನಿಂದ ನೆರವು ಪಡೆದಿಲ್ಲ ಜೆಡಿಎಸ್ ಕಾಂಗ್ರೆಸ್ ನೊಂದಿಗೆ ವಿಲೀನ ಎಂದೂ ಹೇಳಿಲ್ಲ…



ಸಿದ್ದಾಪುರ: ಕಳೆದ ಹತ್ತು ವರ್ಷಗಳಲ್ಲಿ ಜೆಡಿಎಸ್ ಪಕ್ಷದಲ್ಲಿ ಎಷ್ಟೇ ಕಷ್ಟ ಬಂದರೂ ಸಹ ಒಂದು ಪೈಸೆ ಪಡೆಯದೇ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದು ಎಲ್ಲಿ ಬೇಕಾದರೂ ಪ್ರಮಾಣ ಮಾಡುತ್ತೇನೆ‌. ಕುಮಟಾ ಜೆಡಿಎಸ್ ಘಟಕದ ಕೆಲವರು ಹತಾಶರಾಗಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಜೆಡಿಎಸ್ ಮಾಜಿ ಅಧ್ಯಕ್ಷ ಬಿ.ಆರ್.ನಾಯ್ಕ ಪ್ರತಿಕ್ರೀಯಿಸಿದರು.
ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡು ವರ್ಷ ಜೆಡಿಎಸ್ ಪಕ್ಷದ ಕಾರ್ಯಾಧ್ಯಕ್ಷನಾಗಿ ಹಾಗೂ ಎಂಟು ವರ್ಷಗಳಿಂದ ಜಿಲ್ಲಾಧ್ಯಕ್ಷನಾಗಿ ಎಷ್ಟೇ ಕಷ್ಟ ಬಂದರೂ ನಿಷ್ಠೆಯಿಂದ ಕೆಲಸ ಮಾಡಿದ್ದೇವೆ. ಹತ್ತು ವರ್ಷದಲ್ಲಿ ಜೆಡಿಎಸ್ ಪಕ್ಷದಿಂದ ನನಗೆ ಯಾರೂ ಹತ್ತು ರೂಪಾಯಿ ಕೂಡಾ. ಕೊಟ್ಟಿಲ್ಲ ಬೇಕಾದರೆ ಯಾವುದೇ ದೇವರ ಮೇಲೆ ಪ್ರಮಾಣ ಮಾಡಿ ಹೇಳಲಿ. ಚುನಾವಣೆ ಸೇರಿದಂತೆ ಉಳಿದ ಸಂದರ್ಭದಲ್ಲಿ ಜೆಡಿಎಸ್ ಪಕ್ಷದಿಂದ ಜಿಲ್ಲಾಧ್ಯಕ್ಷರಿಗೆ ಯಾವುದೇ ರೀತಿ ಹಣ ನೀಡಿಲ್ಲ. 2013 ನೇ ಸಾಲಿನಲ್ಲಿ ನಾನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಾಗ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಅಧ್ಯಕ್ಷರಾಗಿದ್ದ ಓಸಿಮಠ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಆತ್ಮವಲೋಕನ ಸಭೆಯಲ್ಲಿ ನಮ್ಮ ಪಕ್ಷದ ಮುಖಂಡರಾದ ಜೈವಂತ, ವಿವೇಕಾನಂದ ವೈದ್ಯ, ಶಶಿಭೂಷಣ ಹೆಗಡೆ ಸಮ್ಮುಖದಲ್ಲಿ ಓಸಿಮಠ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನನ್ನನ್ನು ಜಿಲ್ಲಾಧ್ಯಕ್ಷನಾಗಿ ನೇಮಿಸಿದರು. ಆಗ ನಾನು ದೇವೇಗೌಡರಲ್ಲಿ ದಯಮಾಡಿ ಬೇರೆ ಯಾರನ್ನಾದರೂ ಜಿಲ್ಲಾಧ್ಯಕ್ಷರನ್ನಾಗಿ ಮಾಡಿ ನಾನು ಪ್ರಾಮಾಣಿಕ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. 300-400 ಕಿಲೋಮೀಟರ್ ಜಿಲ್ಲೆಯಲ್ಲಿ ತಿರುಗಾಡುವಷ್ಟು ಆರ್ಥಿಕವಾಗಿ ನಾನು ಶಕ್ತಿಶಾಲಿಯಲ್ಲ ಎಂದಿದ್ದಕ್ಕೆ ನಿಮ್ಮ ಜತೆ ನಾನಿದ್ದೇನೆ ಹೆದರಬೇಡ ಎಂದು ಹೇಳಿದ್ದರು.



ಹಿರಿಯರಾದ ದೇವೇಗೌಡರ ಮಾತನ್ನು ಅಲ್ಲಗಳಲು ಸಾಧ್ಯವಾಗದೆ ಎಷ್ಟೇ ಕಷ್ಟವಾದರೂ ಕೂಡ 10 ವರ್ಷಗಳ ಕಾಲ ಜೆಡಿಎಸ್ ಮುಂದಾಳತ್ವ ವಹಿಸಿ ನಿಷ್ಠೆಯಿಂದ ದುಡಿದಿದ್ದೇನೆ. ಆರ್ಥಿಕವಾಗಿ ಅವರು ನನಗೆ ನೆರವು ನೀಡದೇ ಇರಬಹುದು. ವೈಯಕ್ತಿಕವಾಗಿ ಹಾಗೂ ವ್ಯಕ್ತಿಗತವಾಗಿ ದೇವೆಗೌಡರ ಮೇಲೆ ತುಂಬಾ ಗೌರವವಿದೆ ಎಂದರು.
ಕುಮಟಾದಲ್ಲಿ ನಡೆದ ಜನಜಾಗೃತಿ ಸಮಾವೇಶದಲ್ಲಿ ನಾನು ಹಾಗೂ ನನ್ನ ಜತೆ ಜೆಡಿಎಸ್ ಪಕ್ಷದಲ್ಲಿದ್ದ ವಿವಿಧ ಪದಾಧಿಕಾರಿಗಳು ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅಭಿಮಾನಿಗಳು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇವೆ. ಅದಕ್ಕೂ ಮುನ್ನ ಯಾವ ಮಾದ್ಯಮದ ಮುಂದು ಸಹ ನಾವು ಹೇಳಿಕೆ ನೀಡಿಲ್ಲ. ಬಿ.ಆರ್.ನಾಯ್ಕ ಹತ್ತು ವರ್ಷ ಕಾಲ ಜೆಡಿಎಸ್ ನಲ್ಲಿದ್ದು ಉಂಡು ತಿಂದು ಮಜಾ ಉಡಾಯಿಸಿ ಹೋಗಿದ್ದಾರೆ.‌ ಈಗ ಹತಾಶರಾಗಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಪಕ್ಷ ಕಾಂಗ್ರೆಸ್ ನಲ್ಲಿ ವಿಲೀನವಾಗಿದೆ ಎಂದು ಎಲ್ಲೂ ಹೇಳಿಲ್ಲ. ಕುಮಟಾ ತಾಲೂಕಾ ಜೆಡಿಎಸ್ ಘಟಕದ ಕೆಲವರು ತಾವೇ ಹತಾಶರಾಗಿ ಏನೇನೋ ಹೇಳಿಕೆ ನೀಡಿದ್ದಾರೆ. ಹತ್ತು ವರ್ಷದ ಅವಧಿಯಲ್ಲಿ ವೈಯಕ್ತಿಕವಾಗಿ ಪಕ್ಷದಿಂದ ಒಂದು ರೂಪಾಯಿ ಕೂಡ ಪಡೆದುಕೊಂಡಿಲ್ಲ. ಈ ಬಗ್ಗೆ ಎಲ್ಲಿ ಬೇಕಾದರೂ ಪ್ರಮಾಣ ಮಾಡಲು ಸಿದ್ದನಿದ್ದೇನೆ ಎಂದರು.



ಬಂಗಾರಪ್ಪನವರ ಅಪ್ಪಟ ಅನುಯಾಯಿಯಾಗಿ ಕಾಂಗ್ರೆಸ್ ಪಕ್ಷ ಹಾಗೂ ವಿವಿಧ ಪಕ್ಷಗಳಲ್ಲಿ ಗುರುತಿಸಿಕೊಂಡ ನಾನು ಬಂಗಾರಪ್ಪ ಜತೆ ಜೆಡಿಎಸ್ ಸೇರಿ ಕಳೆದ ಹತ್ತು ವರ್ಷಗಳಿಂದ ಜಿಲ್ಲಾ ಅಧ್ಯಕ್ಷನಾಗಿ ಎಷ್ಟೇ ಕಷ್ಟ ಬಂದರೂ ಪಕ್ಷದಿಂದ ಒಂದು ಪೈಸೆ ತೆಗೆದುಕೊಳ್ಳದೇ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಇದೀಗ ನನ್ನ ಜತೆ ಜೆಡಿಎಸ್ ನಲ್ಲಿದ್ದ ಅನೇಕರು ಹಾಗೂ ಬಂಗಾರಪ್ಪ ಅನುಯಾಯಿಗಳು ಕುಮಟಾದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇವೆ. ಮಧು ಬಂಗಾರಪ್ಪಗೆ ಶಕ್ತಿ ತುಂಬಬೇಕೆಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ. ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿಹೀನವಾಗಿದೆ. ಪಂಚಾಯತ, ವಿಧಾನಸಭಾ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಿಂಚಿತ್ತೂ ಸಹಾಯ ಮಾಡಿಲ್ಲ. ಹತ್ತು ವರ್ಷದಲ್ಲಿ ಜಿಲ್ಲೆಯಲ್ಲಿ ಪಕ್ಷಕ್ಕಾಗಿ ವರಿಷ್ಠರು ಒಂದು ಪೈಸೆ ನೀಡಿಲ್ಲ. ಯಾವ ಆಸೆ, ಆಕಾಂಕ್ಷೆಯಿಲ್ಲದೇ ಸಾರ್ವಜನಿಕ ಜೀವನದಲ್ಲಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹುದ್ದೆಯ ಆಸೆ ಇಟ್ಟುಕೊಂಡು ಸೇರ್ಪಡೆಯಾದವರಲ್ಲ. ಯಾವುದೇ ಅಧಿಕಾರ ನಿರೀಕ್ಷೆ ಇಟ್ಟುಕೊಂಡಿಲ್ಲ. ಕಾಂಗ್ರೆಸ್ ಪಕ್ಷದ ತತ್ವ-ಸಿದ್ದಾಂತದಡಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ‌ ಎಂದರು.
ಈ ವೇಳೆ ಜೆಡಿಎಸ್ ಸಿದ್ದಾಪುರ ತಾಲೂಕಾ ಮಾಜಿ ಅಧ್ಯಕ್ಷ ಎಸ್.ಕೆ.ನಾಯ್ಕ, ಪ್ರಮುಖರಾದ ಎಂ.ಆರ್.ನಾಯ್ಕ, ಅಬ್ದುಲ್ ರಸೀದ್, ತಿಮ್ಮಪ್ಪ ನಾಯ್ಕ, ಎನ್.ಟಿ.ನಾಯ್ಕ, ನ್ಯಾಯವಾದಿ ಎಂ.ಡಿ.ನಾಯ್ಕ ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *