ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಇವು….

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದಿದ್ದು ಹೇಗೆ?: ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಇವು….

ಬಿಜೆಪಿ ಈ ಬಾರಿಯ ಹಿಮಾಚಲ ಪ್ರದೇಶ ಚುನಾವಣೆಯನ್ನು  ಸಂಪ್ರದಾಯ ಬದಲಾಗುತ್ತಿದೆ (ರಿವಾಜು ಬದಲಾವಣೆಯಾಗುತ್ತಿದೆ) ಎಂಬ ಘೋಷ ವಾಕ್ಯದಲ್ಲಿ ಎದುರಿಸಿತ್ತು.

: Congress candidate RS Bali being greeted by supporters, celebrating his victory in the Himachal Pradesh Assembly polls, in Nagrota. (Photo | PTI)

ಬಿಜೆಪಿ ಈ ಬಾರಿಯ ಹಿಮಾಚಲ ಪ್ರದೇಶ ಚುನಾವಣೆಯನ್ನು  ಸಂಪ್ರದಾಯ ಬದಲಾಗುತ್ತಿದೆ (ರಿವಾಜು ಬದಲಾವಣೆಯಾಗುತ್ತಿದೆ) ಎಂಬ ಘೋಷ ವಾಕ್ಯದಲ್ಲಿ ಎದುರಿಸಿತ್ತು. ಆದರೆ ಅದು ಘೋಷ ವಾಕ್ಯಕ್ಕೆ ಅಷ್ಟೇ ಸೀಮಿತವಾಗಿ ಕಾಂಗ್ರೆಸ್ 5 ವರ್ಷಗಳ ನಂತರ ಅಧಿಕಾರಕ್ಕೇರುತ್ತಿದೆ.

  • ಬಿಜೆಪಿ ಈ ಬಾರಿ ರಾಜ್ಯದಲ್ಲಿ ಚುನಾವಣೆಯನ್ನು ಪ್ರಧಾನಿ ಮೋದಿ ಕೇಂದ್ರಿತವನ್ನಾಗಿಸಿತ್ತು.  ಬಿಜೆಪಿಗೆ ನೀಡುವ ಪ್ರತಿ ಮತ ಮೋದಿಗೇ ಸೇರುತ್ತದೆ ಎಂಬುದು ಚುನಾವಣೆಯಲ್ಲಿ ಬಿಜೆಪಿ ಬಳಸಿದ ಅಸ್ತ್ರವಾಗಿತ್ತು. 
  • ಮತ್ತೊಂದು ಪ್ರಮುಖ ಅಂಶವೆಂದರೆ 1985 ರ ನಂತರ ಹಿಮಾಚಲ ಪ್ರದೇಶದಲ್ಲಿ ಯಾವುದೇ ಪಕ್ಷ ಸತತ 2 ನೇ ಬಾರಿಗೆ ಅಧಿಕಾರಕ್ಕೆ ಬಂದಿಲ್ಲ.
  • ನಿರುದ್ಯೋಗ ಸಮಸ್ಯೆ: ಈ ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಎದುರಿಸುವುದಕ್ಕೆ ನಿರುದ್ಯೋಗ ಸಹ ಪ್ರಮುಖ ಅಂಶವಾಗಿತ್ತು. ಅಕ್ಟೋಬರ್ ವೇಳೆಗೆ ನಿರುದ್ಯೋಗ ಸಮಸ್ಯೆ ಶೇ.8.6 ರಷ್ಟಿತ್ತು. ಹಾಗೂ ಈ ಅಂಕಿ-ಅಂಶ ದೇಶದ ಸರಾಸರಿಗಿಂತಲೂ ಹೆಚ್ಚಾಗಿತ್ತು.
  • ಬಿಜೆಪಿಯ ಅಧಿಕಾರದ ಕನಸನ್ನು ಸುಟ್ಟ ಅಗ್ನಿಪಥ ಯೋಜನೆ:  ಅತಿ ಹೆಚ್ಚು ಪರಮವೀರ ಚಕ್ರ ಪದಕ ಯೋಧರನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆ ಪಡೆದಿರುವ ಹಿಮಾಚಲ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ ಯೋಜನೆ ಬಹಳ ವಿರೋಧ ಎದುರಿಸಿತ್ತು. 

ಕಾಂಗ್ರೆಸ್ ಗೆ ಸಕಾರಾತ್ಮಕವಾದ ಅಂಶಗಳು 

  • ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಭರವಸೆ ನೀಡಿತ್ತು. 
  • ಸೆಬು ಬೆಳೆಗಾರರ ಆಕ್ರೋಶ, ಬಿಜೆಪಿಯ ಬಂಡಾಯ, ಚುನಾವಣೆ ಎದುರಿಸಲು 21 ಮಂದಿ ಹೊರಬಂದಿದ್ದೂ ಆಡಳಿತ ಪಕ್ಷಕ್ಕೆ ಮುಳುವಾಯಿತು. 
  • ಇನ್ನು ಬುಡಕಟ್ಟು ಪ್ರದೇಶಗಳಲ್ಲಿ ಪರಿಸರ ವಿಷಯಗಳು ಹೆಚ್ಚು ಪ್ರಬಲವಾಗಿ ಕೆಲಸ ಮಾಡಿದ್ದು, ಲಾಹೌಲ್ ಮತ್ತು ಸ್ಪಿತಿ ಮತ್ತು ಕಿನ್ನೌರ್ ಗಳಲ್ಲಿ ಹೊಸ ಜಲವಿದ್ಯುತ್ ಯೋಜನೆಗಳು ಮತ್ತು ಅರಣ್ಯ ಹಕ್ಕುಗಳ ಕಾಯಿದೆ (ಎಫ್‌ಆರ್‌ಎ) ಅನುಷ್ಠಾನದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮತದಾರರನ್ನು ಕೇಳಿಕೊಳ್ಳುತ್ತಿದ್ದರು.
  • ಬುಡಕಟ್ಟು ಜಿಲ್ಲೆಗಳಲ್ಲಿ ಹೊಸ ಜಲವಿದ್ಯುತ್ ಯೋಜನೆಗಳ ವಿರುದ್ಧ ನೋ ಎಂದರೆ ನೋ ಎಂಬ ಅಭಿಯಾನ ನಡೆದಿದ್ದವು. ಬಿಜೆಪಿ ವಿರುದ್ಧ ಜನರ ಅಭಿಪ್ರಾಯ ಒಗ್ಗೂಡುವುದಕ್ಕೆ ಇದೂ ಒಂದು ಕಾರಣವಾಗಿದೆ.
  • ಇದರೊಂದಿಗೆ ಬೆಲೆ ಏರಿಕೆಯಿಂದಲೂ ರೋಸಿ ಹೋಗಿದ್ದ ಜನತೆ ಕಾಂಗ್ರೆಸ್ ಗೆ ಅಧಿಕಾರ ನೀಡಿದ್ದಾರೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *