ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಇವು….

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದಿದ್ದು ಹೇಗೆ?: ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಇವು….

ಬಿಜೆಪಿ ಈ ಬಾರಿಯ ಹಿಮಾಚಲ ಪ್ರದೇಶ ಚುನಾವಣೆಯನ್ನು  ಸಂಪ್ರದಾಯ ಬದಲಾಗುತ್ತಿದೆ (ರಿವಾಜು ಬದಲಾವಣೆಯಾಗುತ್ತಿದೆ) ಎಂಬ ಘೋಷ ವಾಕ್ಯದಲ್ಲಿ ಎದುರಿಸಿತ್ತು.

: Congress candidate RS Bali being greeted by supporters, celebrating his victory in the Himachal Pradesh Assembly polls, in Nagrota. (Photo | PTI)

ಬಿಜೆಪಿ ಈ ಬಾರಿಯ ಹಿಮಾಚಲ ಪ್ರದೇಶ ಚುನಾವಣೆಯನ್ನು  ಸಂಪ್ರದಾಯ ಬದಲಾಗುತ್ತಿದೆ (ರಿವಾಜು ಬದಲಾವಣೆಯಾಗುತ್ತಿದೆ) ಎಂಬ ಘೋಷ ವಾಕ್ಯದಲ್ಲಿ ಎದುರಿಸಿತ್ತು. ಆದರೆ ಅದು ಘೋಷ ವಾಕ್ಯಕ್ಕೆ ಅಷ್ಟೇ ಸೀಮಿತವಾಗಿ ಕಾಂಗ್ರೆಸ್ 5 ವರ್ಷಗಳ ನಂತರ ಅಧಿಕಾರಕ್ಕೇರುತ್ತಿದೆ.

  • ಬಿಜೆಪಿ ಈ ಬಾರಿ ರಾಜ್ಯದಲ್ಲಿ ಚುನಾವಣೆಯನ್ನು ಪ್ರಧಾನಿ ಮೋದಿ ಕೇಂದ್ರಿತವನ್ನಾಗಿಸಿತ್ತು.  ಬಿಜೆಪಿಗೆ ನೀಡುವ ಪ್ರತಿ ಮತ ಮೋದಿಗೇ ಸೇರುತ್ತದೆ ಎಂಬುದು ಚುನಾವಣೆಯಲ್ಲಿ ಬಿಜೆಪಿ ಬಳಸಿದ ಅಸ್ತ್ರವಾಗಿತ್ತು. 
  • ಮತ್ತೊಂದು ಪ್ರಮುಖ ಅಂಶವೆಂದರೆ 1985 ರ ನಂತರ ಹಿಮಾಚಲ ಪ್ರದೇಶದಲ್ಲಿ ಯಾವುದೇ ಪಕ್ಷ ಸತತ 2 ನೇ ಬಾರಿಗೆ ಅಧಿಕಾರಕ್ಕೆ ಬಂದಿಲ್ಲ.
  • ನಿರುದ್ಯೋಗ ಸಮಸ್ಯೆ: ಈ ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಎದುರಿಸುವುದಕ್ಕೆ ನಿರುದ್ಯೋಗ ಸಹ ಪ್ರಮುಖ ಅಂಶವಾಗಿತ್ತು. ಅಕ್ಟೋಬರ್ ವೇಳೆಗೆ ನಿರುದ್ಯೋಗ ಸಮಸ್ಯೆ ಶೇ.8.6 ರಷ್ಟಿತ್ತು. ಹಾಗೂ ಈ ಅಂಕಿ-ಅಂಶ ದೇಶದ ಸರಾಸರಿಗಿಂತಲೂ ಹೆಚ್ಚಾಗಿತ್ತು.
  • ಬಿಜೆಪಿಯ ಅಧಿಕಾರದ ಕನಸನ್ನು ಸುಟ್ಟ ಅಗ್ನಿಪಥ ಯೋಜನೆ:  ಅತಿ ಹೆಚ್ಚು ಪರಮವೀರ ಚಕ್ರ ಪದಕ ಯೋಧರನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆ ಪಡೆದಿರುವ ಹಿಮಾಚಲ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ ಯೋಜನೆ ಬಹಳ ವಿರೋಧ ಎದುರಿಸಿತ್ತು. 

ಕಾಂಗ್ರೆಸ್ ಗೆ ಸಕಾರಾತ್ಮಕವಾದ ಅಂಶಗಳು 

  • ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಭರವಸೆ ನೀಡಿತ್ತು. 
  • ಸೆಬು ಬೆಳೆಗಾರರ ಆಕ್ರೋಶ, ಬಿಜೆಪಿಯ ಬಂಡಾಯ, ಚುನಾವಣೆ ಎದುರಿಸಲು 21 ಮಂದಿ ಹೊರಬಂದಿದ್ದೂ ಆಡಳಿತ ಪಕ್ಷಕ್ಕೆ ಮುಳುವಾಯಿತು. 
  • ಇನ್ನು ಬುಡಕಟ್ಟು ಪ್ರದೇಶಗಳಲ್ಲಿ ಪರಿಸರ ವಿಷಯಗಳು ಹೆಚ್ಚು ಪ್ರಬಲವಾಗಿ ಕೆಲಸ ಮಾಡಿದ್ದು, ಲಾಹೌಲ್ ಮತ್ತು ಸ್ಪಿತಿ ಮತ್ತು ಕಿನ್ನೌರ್ ಗಳಲ್ಲಿ ಹೊಸ ಜಲವಿದ್ಯುತ್ ಯೋಜನೆಗಳು ಮತ್ತು ಅರಣ್ಯ ಹಕ್ಕುಗಳ ಕಾಯಿದೆ (ಎಫ್‌ಆರ್‌ಎ) ಅನುಷ್ಠಾನದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮತದಾರರನ್ನು ಕೇಳಿಕೊಳ್ಳುತ್ತಿದ್ದರು.
  • ಬುಡಕಟ್ಟು ಜಿಲ್ಲೆಗಳಲ್ಲಿ ಹೊಸ ಜಲವಿದ್ಯುತ್ ಯೋಜನೆಗಳ ವಿರುದ್ಧ ನೋ ಎಂದರೆ ನೋ ಎಂಬ ಅಭಿಯಾನ ನಡೆದಿದ್ದವು. ಬಿಜೆಪಿ ವಿರುದ್ಧ ಜನರ ಅಭಿಪ್ರಾಯ ಒಗ್ಗೂಡುವುದಕ್ಕೆ ಇದೂ ಒಂದು ಕಾರಣವಾಗಿದೆ.
  • ಇದರೊಂದಿಗೆ ಬೆಲೆ ಏರಿಕೆಯಿಂದಲೂ ರೋಸಿ ಹೋಗಿದ್ದ ಜನತೆ ಕಾಂಗ್ರೆಸ್ ಗೆ ಅಧಿಕಾರ ನೀಡಿದ್ದಾರೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *