

ಸಿದ್ದಾಪುರ: ಯಕ್ಷಗಾನದ ಹಿರಿಯ ಕಲಾವಿದ ಭಾಸ್ಕರ ಜೋಶಿ ಶಿರಳಗಿ ಅವರಿಗೆ ಇಲ್ಲಿನ ಶ್ರೀ ಅನಂತ ಯಕ್ಷ ಕಲಾ ಪ್ರತಿಷ್ಠಾನ ನೀಡುವ ರಾಜ್ಯ ಮಟ್ಟದ ಅನಂತ ಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.
ಪ್ರತಿಷ್ಠಾನದ ಅಧ್ಯಕ್ಷ ವಿ.ಎಂ.ಭಟ್ಟ, ಕಾರ್ಯದರ್ಶಿ ಹಾಗೂ ಹೆಸರಾಂತ ಭಾಗವತ, ಕೇಶವ ಹೆಗಡೆ ಕೊಳಗಿ ಈ ವಿಷಯ ತಿಳಿಸಿದ್ದು, ಯಕ್ಷಗಾನದ ಸವ್ಯಸಾಚಿ ಕಲಾವಿದರಾಗಿದ್ದ ದಿ.ಅನಂತ ಹೆಗಡೆ ಕೊಳಗಿ ಅವರ ನೆನಪಿನಲ್ಲಿ
ಯಕ್ಷಗಾನ ಕ್ಷೇತ್ರದಲ್ಲಿ ಸ್ತ್ರೀ ಪಾತ್ರದ ಮೂಲಕ ನಾಡಿನಾದ್ಯಂತ ಮನೆ ಮಾತಾದ ಭಾಸ್ಕರ ಜೋಶಿ ಶಿರಳಗಿ ಅವರಿಗೆ ಈ ಪ್ರಶಸ್ತಿ ಪ್ರಕಟಿಸುತ್ತಿರುವದು ಹರ್ಷ ತಂದಿದೆ ಎಂದಿದ್ದಾರೆ.

ಸಿದ್ದಾಪುರದ ಇಟಗಿ ಕಲಗದ್ದೆ ನಾಟ್ಯ ವಿನಾಯಕ ದೇವಾಲಯದಲ್ಲಿ ಡಿಸೆಂಬರ್ ಕೊನೇ ವಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಲಾಗುತ್ತಿದೆ. ನಾಲ್ಕು ದಶಕಗಳಿಗೂ ಅಧಿಕಾಲ ದೇಶ, ಹೊರ ದೇಶಗಳಲ್ಲಿಯೂ ಎಂಟು ಸಾವಿರಕ್ಕೂ ಅಧಿಕ ಕಲಾ ಪ್ರದರ್ಶನ ನೀಡಿದ ಭಾಸ್ಕರ ಜೋಶಿ ಅವರು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯ. ಶಿರಳಗಿ ಅವರು ದಿ. ಅನಂತ ಹೆಗಡೆ ಅವರ ಶಿಷ್ಯರೂ, ಒಡನಾಡಿಗಳೂ ಹೌದು ಎಂದೂ ಪ್ರಕಟಣೆ ಯಲ್ಲಿ ಉಲ್ಲೇಖಿಸಿದ್ದಾರೆ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






