ಸಿದ್ದಾಪುರ:
ಭೀಮಣ್ಣ ಟಿ ನಾಯ್ಕ ಹುಟ್ಟು ಹಬ್ಬದ ಪ್ರಯುಕ್ತ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು, ಹಾಗೂ ಬ್ರೇಡ ವಿತರಣೆ ಮಾಡಲಾಯಿತು.
ನಂತರ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನ್ಮನೆ ಭೀಮಣ್ಣ ಹುಟ್ಟು ಹಬ್ಬಕ್ಕೆ ಶುಭ ಕೋರಿದರು. ಕಳೆದ ಒಂದು ದಶಕದಿಂದಲೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡ ಭೀಮಣ್ಣ ಸಾಂಸ್ಕೃತಿಕ, ಧಾರ್ಮಿಕ, ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೋಡಗಿಸಿಕೊಂಡಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ
ಹೆಚ್ಚಿನ ಸ್ಥಾನ ಮಾಪನಗಳು ಸಿಗುವಂತಾಗಬೇಕು ಎಂದರು.
ಬಿ ಆರ್ ನಾಯ್ಕ ಹೆಗ್ಗಾರಕೈ ಮಾತನಾಡಿ ಬೀಮಣ್ಣ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನ ದೊರಕಿ ಇನ್ನೂ ಹೆಚ್ಚಿನ ಸಮಾಜ ಸೇವೆ ಮಾಡುವಂತಾಗಲಿ ಎಂದು ಹಾ ರೈಸಿದರು.
ಗಾಂಧೀಜಿ ಹೆಗನೂರ ಮಾರುತಿ ಕೆಂದ್ರಿ, ಕೆ. ಟಿ. ಹೊನ್ನೆಗುಂಡಿ, ಪ್ರಶಾಂತ ಹೊಸೂರ, ರಾಜೇಶ ಕತ್ತಿ, ಮಂಜುನಾಥ ತ್ಯಾರ್ಸಿ, ಪಾಂಡು ಸ್ವಾಮೆ ಹೊಸೂರ, ಜಯರಾಮ ನಾಯ್ಕ, ಎನ್ ಟಿ ನಾಯ್ಕ, ಮಿಥುನ ಕಾನಗೋಡ, ಸೇರಿದಂತೆ ಹಲವರು ಉಪಸ್ಥಿತರಿದ್ದರು