

ಸಿದ್ದಾಪುರ:
ಭೀಮಣ್ಣ ಟಿ ನಾಯ್ಕ ಹುಟ್ಟು ಹಬ್ಬದ ಪ್ರಯುಕ್ತ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು, ಹಾಗೂ ಬ್ರೇಡ ವಿತರಣೆ ಮಾಡಲಾಯಿತು.
ನಂತರ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನ್ಮನೆ ಭೀಮಣ್ಣ ಹುಟ್ಟು ಹಬ್ಬಕ್ಕೆ ಶುಭ ಕೋರಿದರು. ಕಳೆದ ಒಂದು ದಶಕದಿಂದಲೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡ ಭೀಮಣ್ಣ ಸಾಂಸ್ಕೃತಿಕ, ಧಾರ್ಮಿಕ, ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೋಡಗಿಸಿಕೊಂಡಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ
ಹೆಚ್ಚಿನ ಸ್ಥಾನ ಮಾಪನಗಳು ಸಿಗುವಂತಾಗಬೇಕು ಎಂದರು.

ಬಿ ಆರ್ ನಾಯ್ಕ ಹೆಗ್ಗಾರಕೈ ಮಾತನಾಡಿ ಬೀಮಣ್ಣ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನ ದೊರಕಿ ಇನ್ನೂ ಹೆಚ್ಚಿನ ಸಮಾಜ ಸೇವೆ ಮಾಡುವಂತಾಗಲಿ ಎಂದು ಹಾ ರೈಸಿದರು.
ಗಾಂಧೀಜಿ ಹೆಗನೂರ ಮಾರುತಿ ಕೆಂದ್ರಿ, ಕೆ. ಟಿ. ಹೊನ್ನೆಗುಂಡಿ, ಪ್ರಶಾಂತ ಹೊಸೂರ, ರಾಜೇಶ ಕತ್ತಿ, ಮಂಜುನಾಥ ತ್ಯಾರ್ಸಿ, ಪಾಂಡು ಸ್ವಾಮೆ ಹೊಸೂರ, ಜಯರಾಮ ನಾಯ್ಕ, ಎನ್ ಟಿ ನಾಯ್ಕ, ಮಿಥುನ ಕಾನಗೋಡ, ಸೇರಿದಂತೆ ಹಲವರು ಉಪಸ್ಥಿತರಿದ್ದರು



ಶನಿವಾರ ಹಾಗೂ ಭಾನುವಾರ ನಡೆದ ಕ್ರಿಕೆಟ್ ಟೂರ್ನಿಯ ಅಂತಿಮ ಪಂದ್ಯದಲ್ಲಿ ಬಿ.ಕೆ.ಬ್ರದರ್ಸ್ ಉಡುಪಿ ತಂಡ ಸಿದ್ದಾಪುರದ ಆರ್.ಸಿ.ಸಿ ಪ್ರೆಂಡ್ಸ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಆಕರ್ಷಕ ಟ್ರೋಫಿ ತನ್ನದಾಗಿಸಿಕೊಂಡಿತು.
‘ ಸಮಾರೋಪ ಸಮಾರಂಭ ‘
ಎರಡು ದಿನಗಳ ಕಾಲ ಯಶಸ್ವಿಯಾಗಿ ನಡೆದ ಪಂದ್ಯಾವಳಿಯ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಮಾತನಾಡಿ, ತ್ಯಾರ್ಸಿಯಂತ ಸಣ್ಣ ಊರಲ್ಲೂ ಸಹ ಯುವಕರು ಕ್ರೀಡೆಯನ್ನು ಆಯೋಜಿಸಿ ವ್ಯವಸ್ಥಿತವಾಗಿ ನಡೆಸಿರುವುದು ನಿಜಕ್ಕೂ ಶ್ಲಾಘನೀಯವಾದುದು. ಸಮೃದ್ಧಿ ಯುವ ಬಳಗದ ಮೂಲಕ ಊರಿನ ಯುವಕರು ಕ್ರೀಡೆ ಮಾತ್ರವಲ್ಲದೇ ಸಾಧಕರಿಗೆ ಸನ್ಮಾನ, ಶಾಲೆಗೆ ಸುಣ್ಣ-ಬಣ್ಣ ಬಳಿಯುವ ಜತೆಗೆ ಸಮಾಜಮುಖಿ ಕಾರ್ಯ ನಡೆಸುತ್ತಿರುವುದು ಇತರ ಯುವಕರಿಗೆ ಮಾದರಿಯಾಗಿದೆ. ಯುವ ಸಮೂಹ ಈ ರೀತಿ ಸಮಾಜಹಿತ ಕಾರ್ಯಗಳಲ್ಲಿ ಹೆಚ್ಚೆಚ್ಚು ತೊಡಗಿಕೊಳ್ಳಬೇಕೆಂದು ಕರೆ ನೀಡಿದರು.
ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮಾತನಾಡಿ, ಈ ಕ್ಷೇತ್ರದಲ್ಲಿ ಮೂರು ಬಾರಿ ಆಯ್ಕೆಯಾಗಿರುವ ಸ್ಥಳೀಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಯುವಕರಿಗೆ ಯಾವತ್ತೂ ಬೆಂಬಲ ನೀಡುತ್ತಿಲ್ಲ. ಸರ್ಕಾರದ ಅನುದಾನದ ಕಾಮಗಾರಿ ಉದ್ಘಾಟಿಸುವುದನ್ನು ಬಿಟ್ಟರೆ ಒಂದು ಪೈಸೆಯನ್ನು ಸಹ ಸಮಾಜಕ್ಕೆ ನೀಡುತ್ತಿಲ್ಲ. ಆದರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಕಳೆದ ಅನೇಕ ವರ್ಷಗಳಿಂದ ಕ್ರೀಡೆ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಅರೋಗ್ಯ ಸಂಬಂಧಿ ಸಮಸ್ಯೆಗೆ ಕೈಲಾದ ಸಹಾಯ ಹಸ್ತ ಚಾಚುತ್ತಿದ್ದಾರೆ. ಯುವ ಸಮುದಾಯ ಇಂತಹ ಪ್ರೋತ್ಸಾಹಕರಿಗೆ ರಾಜಕೀಯ ಶಕ್ತಿ ನೀಡಿದರೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಹಾಯವಾಗಲಿದೆ ಎಂದರು.
ಈ ವೇಳೆ ಬೆಳಗಾವಿಯ ಬದಲಾವಣೆಯ ಬೆಳಕು ಪೌಂಡೇಶನ್ ನ ಶಿವಾನಂದ ಹಿರಟ್ಟಿ, ಸೋಮು ನಾಯ್ಕ, ಸ್ಥಳೀಯರಾದ ಮಂಜುನಾಥ ಎಚ್ ನಾಯ್ಕ, ಸೀತಾರಾಮ ಜಿ ನಾಯ್ಕ, ಬಾಲಚಂದ್ರ ನಾಯ್ಕ, ಲೋಕೇಶ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು. ಸಮೃದ್ಧಿ ಯುವ ಬಳಗದ ಅಶೋಕ ನಾಯ್ಕ ಹಾಗೂ ನವೀನ್ ನಾಯ್ಕ ನಿರೂಪಿಸಿದರು.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
