ಕ. ಸಾ. ಪ.-ಹಾವೇರಿ ಸಮ್ಮೇಳನದ ಪ್ರತಿನಿಧಿಗಳ ನೋಂದಣಿ ಅವಧಿ ವಿಸ್ತರಣೆ ಹಾಗೂ ನೇರ ನೋಂದಣಿಗೆ ಅವಕಾಶ

  • ಹಾವೇರಿಯಲ್ಲಿ ಹಮ್ಮಿಕೊಂಡಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಯಾಗಿ ಭಾಗವಹಿಸುವವರಿಗೆ ಮತ್ತು ಪುಸ್ತಕ ಹಾಗೂ ವಾಣಿಜ್ಯ ಮಳಿಗೆಗಳನ್ನು ಕಾಯ್ದಿರಿಸುವವರಿಗೆ ಈಗಾಗಲೇ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ವಿನೂತನ ಆಪ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಸಮ್ಮೇಳನ ಪ್ರತಿನಿಧಿ ಹಾಗೂ ಪುಸ್ತಕ/ವಾಣಿಜ್ಯ ಮಳಿಗೆಗಳ ನೋಂದಣಿಗೆ, https://bit.ly/3VlidZj ಈ ಕೊಂಡಿಯ ಮೂಲಕ ಹಾಗೂ ಎಲ್ಲಾ ಸೇವಾ ಸಿಂಧು ಕೇಂಧ್ರಗಳಲ್ಲಿ ಆನ್ ಲೈನ್ ನೋಂದಣಿ ಕಾರ್ಯ ಆರಂಭವಾಗಿದೆ. ಆಪ್ ಮೂಲಕ ಸಮ್ಮೇಳನದ ಪ್ರತಿನಿಧಿಗಳ ನೋಂದಣಿಗೆ ಹಾಗೂ ಮಳಿಗೆಗಳ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದ್ದು ಸಾವಿರಾರು ಜನರು ಸಮ್ಮೇಳನದ ಪ್ರತಿನಿಧಿಯಾಗಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

  • ಆದರೂ ಮಾಧ್ಯಮಗಳಲ್ಲಿ, ಕ್ಲಬ್ ಹೌಸ್ನಲ್ಲಿ ಕನ್ನಡಾಭಿಮಾನಿಗಳು, ಆಸಕ್ತರು, ಕಲಾವಿದರು, ಜನಪದ ಕಲಾವಿದರು ಸೇರಿ ಹಲವರು, ಗ್ರಾಮಾಂತರ ಪ್ರದೇಶಗಳಲ್ಲಿ ಆನ್ ಲೈನ್ ಮೂಲಕ ನೋಂದಣಿ ಮಾಡುವುದಕ್ಕೆ ಸಮಸ್ಯೆಗಳು ಎದುರಾಗುತ್ತಿದೆ. ಇಂಟರ್ನೆಟ್ ಸಮಸ್ಯೆ, ವಿದ್ಯುತ್ ಸಮಸ್ಯೆ ಹಾಗೂ ಕೆಲವರಿಗೆ ಆನ್ ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳುವುದಕ್ಕೆ ವ್ಯತ್ಯಯ ಆಗುತ್ತಿದೆ, ಇನ್ನೂ ಬಹುತೇಕರಲ್ಲಿ ಸ್ಮಾರ್ಟ್ ಪೋನ್ ಇಲ್ಲದಿರುವುದರಿಂದ ಸಮ್ಮೇಳನದ ಪ್ರತಿನಿಧಿಯಾಗಿ ನೋಂದಣಿ ಮಾಡಿಕೊಳ್ಳುವುದಕ್ಕೆ ಕಷ್ಟವಾಗುತ್ತಿದೆ ಎಂದು ಮನವಿ ಮಾಡಿಕೊಂಡಿಕೊಂಡಿರುವುದನ್ನು ಗಮನಿಸಿರುವುದಾಗಿ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

  • ಕನ್ನಡದ ಅಕ್ಷರ ಜಾತ್ರೆಯಲ್ಲಿ ಭಾಗವಹಿಸುವವರಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿ, ಜಿಲ್ಲಾ ಕಚೇರಿಯಲ್ಲಿ ನೇರವಾಗಿ (ಆಫ್ ಲೈನ್) ನೋಂದಣಿಗೆ ಅವಕಾಶ ಕಲ್ಪಿಸಿ, ಡಿಸೆಂಬರ್ ೧೮ರ ವರೆಗೆ ಇದ್ದ ಪ್ರತಿನಿಧಿಗಳ ನೋಂದಣಿ ಅವಧಿಯನ್ನು ಡಿಸೆಂಬರ್ ೨೫ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ನಾಡೋಜ ಡಾ. ಮಹೇಶ ಜೋಶಿ ಅವರು ತಿಳಿಸಿದ್ದಾರೆ.

ಸಮ್ಮೇಳನದ ಪ್ರತಿನಿಧಿಯಾಗಿ ಭಾಗ ವಹಿಸಲು ೫೦೦(ಐದುನೂರು) ರೂ. ನೀಡಿ ರಸೀದಿ ಪಡೆಯುವ ಜೊತೆಗೆ ಸ್ವ ವಿವರ ನೀಡುವುದರೊಂದಿಗೆ ನೋಂದಣಿ ಮಾಡಿಕೊಳ್ಳಬಹುದು ಅದರೊಂದಿಗೆ ನಾಡಿನ ಎಲ್ಲಾ ಸೇವಾ ಸಿಂಧು ಕೇಂದ್ರಗಳಲ್ಲಿ, ಕನ್ನಡ ಸಾಹಿತ್ಯ ಪರಿಷತ್ತಿನ ಆಪ್ ಮೂಲಕವೂ ಸಹ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಯಾಗಲು ಮತ್ತು ಮಳಿಗೆಗಳ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.
ಹಾವೇರಿಯಲ್ಲಿ ವಸತಿ ವ್ಯವಸ್ಥೆ ಗಮನದಲ್ಲಿ ಇಟ್ಟುಕೊಂಡು ೨೦ (ಇಪ್ಪತ್ತು) ಸಾವಿರ ಪ್ರತಿನಿಧಿಗಳಿಗೆ ಮಾತ್ರ ಅವಕಾಶ ನೀಡಲು ಪರಿಷತ್ತು ಮುಂದಾಗಿದೆ. ಈ ಹಿಂದೆ ಡಿಸೆಂಬರ್ ೧೮ರಂದು ಕೊನೆಯ ದಿನವೆಂದು ನಿಗದಿ ಮಾಡಲಾಗಿತ್ತು. ಆದರೆ ಕನ್ನಡಿಗರ ಒತ್ತಾಯದ ಮೇರೆಗೆ ಪ್ರತಿನಿಧಿಗಳ ನೋಂದಣಿ ಪ್ರಕ್ರಿಯೆಯನ್ನು ಡಿಸೆಂಬರ್ ೨೫ರ ವರೆಗೆ ಅಂದರೆ ಹೆಚ್ಚುವರಿ ಒಂದು ವಾರಗಳ ಕಾಲ ಮುಂದುವರಿಸಲಾಗಿದ್ದು, ೨೦(ಇಪ್ಪತ್ತು) ಸಾವಿರ ಪ್ರತಿನಿಧಿಗಳು, ೩೦೦(ಮೂನ್ನೂರು) ಪುಸ್ತಕ ಮಳಿಗೆಗಳು ಹಾಗೂ ೨೦೦(ಇನ್ನೂರು) ವಾಣಿಜ್ಯ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕದ ಪದಾಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಲು ಪರಿಷತ್ತು ಅವಕಾಶ ಕಲ್ಪಿಸಿಕೊಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *