ಮಿಶ್ರತಳಿಗಳಿಂದ ಹಾಲು ಉತ್ಪಾದನೆ ಹೆಚ್ಚಳ

ಸಿದ್ದಾಪುರ
ಪಶುಸಂಗೋಪನೆ ರೈತರಿಗೆ ಹೆಚ್ಚು ಆದಾಯ ತರುವಂತಹುದಾಗಿರುವುದರಿಂದ ಇಂದಿನ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ರೈತರು ಹಾಲಿನ ಉತ್ಪಾದನೆ ಹೆಚ್ಚು ಮಾಡಬೇಕೆಂದು ವಿಧಾನಸಭಾಧ್ಯಕ್ಷ ವಿಶವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಪಟ್ಟಣದ ಹೊಸೂರಿನಲ್ಲಿ ಧಾರವಾಡ ಹಾಲು ಒಕ್ಕೂಟದ ಸಿದ್ದಾಪುರ ಉಪವಿಭಾಗದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಗುರುವಾರ ಮಾತನಾಡಿದರು.

ತಾಲೂಕಿನಲ್ಲಿ ೫೮ ಹಾಲು ಉತ್ಪಾದಕರ ಸಹಕಾರಿ ಸಂಘಗಳಿದ್ದರೂ ನಿರೀಕ್ಷೆಯಷ್ಟು ಹಾಲು ಉತ್ಪಾದನೆ ಆಗುತ್ತಿಲ್ಲ. ಹಾಲಿನ ಉತ್ಪಾದನೆ ಹೆಚ್ಚು ಮಾಡುವುದಕ್ಕೆ ಸ್ಥಳೀಯ ತಳಿಗಳೊಂದಿಗೆ ಮಿಶ್ರತಳಿ ಆಕಳುಗಳನ್ನು ಸಾಕಾಣಿಕೆ ಮಾಡಬೇಕಾಗಿದೆ. ತಳಿ ಸುಧಾರಣೆಗೆ ಕೆಎಂಎಫ್ ಹಾಗೂ ಸರ್ಕಾರ ಹೆಚ್ಚಿನ ಆಧ್ಯತೆ ನೀಡುತ್ತಿದೆ. ಈ ಕುರಿತು ಒಕ್ಕೂಟದ ಅಧಿಕಾರಿಗಳು ರೈತರೊಂದಿಗೆ ಚರ್ಚೆ ನಡೆಸಿ ಹೈನುಗಾರಿಕೆ ಮಾಡುವುದಕ್ಕೆ ಅವರ ಮನವೊಲಿಸಬೇಕು.
ರಾಜ್ಯ ಸರ್ಕಾರ ಹೈನುಗಾರಿಕೆಗೆ ಹೆಚ್ಚಿನ ಆಧ್ಯತೆ ನೀಡುತ್ತಿದೆ. ಹಾಲಿನ ಉತ್ಪಾದನೆಗೆಳು ಹೆಚ್ಚೆಚ್ಚು ಮಾರಾಟ ಆದ ಹಾಗೆ ಒಕ್ಕೂಟಗಳಿಗೆ ಹೆಚ್ಚು ಅನುಕೂಲವಾಗಲಿದೆ. ಮುಖ್ಯವಾಗಿ ತಾಲೂಕಿನ ರೈತರು ಹೆಚ್ಚು ಹಾಲು ಉತ್ಪಾದನೆಗೆ ಮುಂದಾಗಬೇಕು ಎಂದು ಹೇಳಿದರು.


ಅಧ್ಯಕ್ಷತೆವಹಿಸಿದ್ದ ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಶಂಕರ ವೀರಪ್ಪ ಮುಗದ ಮಾತನಾಡಿ ಸಿದ್ದಾಪುರದಲ್ಲಿರುವ ಒಕ್ಕೂಟದ ಜಾಗದಲ್ಲಿ ವ್ಯವಸ್ಥಿತವಾದ ಕಟ್ಟಡ ಕಟ್ಟಿ ಇಲ್ಲಿ ಇಲ್ಲಿಯ ರೈತರಿಗೆ ಬೇಕಾಗುವ ಸೌಲಭ್ಯ ನೀಡುವುದಕ್ಕೆ ಅನುಕೂಲವಾಗುತ್ತದೆ. ಧಾರವಾಡ ಹಾಲು ಒಕ್ಕೂಟ ಈಗ ರಾಜ್ಯದಲ್ಲಿಯೇ ಹಾಲಿನ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಶಿರಸಿ ಹಾಲಿನ ಪ್ಯಾಕಿಂಗ್ ಘಟಕಕ್ಕೆ ಸಧ್ಯ ೧೫ರಿಂದ ೧೮ಸಾವಿರ ಲೀಟರ್ ಹಾಲಿನ ಕೊರತೆ ಇದೆ. ಇದನ್ನು ಸಿದ್ದಾಪುರ ಹಾಗೂ ಶಿರಸಿ ತಾಲೂಕಿನ ಹೈನುಗಾರರು ಹೊಗಲಾಡಿಸಬೇಕು. ಹಾಲು ಉತ್ಪಾದಕರಿಗೆ ಹೆಚ್ಚಿನ ದರ ನೀಡಲು ಮುಂದಿನ ದಿನದಲ್ಲಿ ಯೋಚಿಸಲಾಗುತ್ತದೆ. ಒಕ್ಕೂಟದ ಕಲ್ಯಾಣ ಸಂಘದ ಮೂಲಕ ಹಾಲು ಉತ್ಪಾದಕರಿಗೆ ಹೆಚ್ಚಿನ ಸೌಲಭ್ಯವನ್ನು ನೀಡಲಾಗುತ್ತಿದೆ ಎಂದು ಹೇಳಿದರು.


ಧಾರವಾಡ ಹಾಲು ಒಕ್ಕೂಟದ ನಿರ್ದೇಶಕರಾದ ಸುರೇಶ್ಚಂದ್ರ ಹೆಗಡೆ, ಪಿ.ವಿ.ನಾಯ್ಕ ಬೇಡ್ಕಣಿ, ಹೂವಿನಮನೆ ಹಾಲು ಸಂಘದ ಅಧ್ಯಕ್ಷ ಕೃಷ್ಣಯ್ಯ ಹೆಗಡೆ, ಮಾತನಾಡಿದರು. ಒಕ್ಕೂಟದ ನಿರ್ದೇಶಕ ಶಂಕರ ಹೆಗಡೆ, ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಎಂ.ಲೋಹಿತೇಶ್ವರ,ಡಾ.ವಿರೇಶ ತರಲಿ, ತಾಂತ್ರಿಕ ಅಧಿಕಾರಿ ಉಮೇಶ, ಪಪಂ ಸದಸ್ಯರಾದ ಮಾರುತಿ ಟಿ.ನಾಯ್ಕ, ನಂದನ ಬೋರ್ಕರ್ ಉಪಸ್ಥಿತರಿದ್ದರು.
ಕಡಕೇರಿ ಸಂಘದ ಕಾರ್ಯದರ್ಶಿ ಹೇಮಾ ಪ್ರಾರ್ಥನೆ ಹಾಡಿದರು. ಜಿಲ್ಲಾ ಮುಖ್ಯಸ್ಥ ಎಸ್.ಎಸ್.ಬಿಜೂರ್, ತಾಲೂಕು ವಿಸ್ತರಣಾಧಿಕಾರಿ ಪ್ರಕಾಶ ಕೆ. ಕಾರ್ಯಕ್ರಮ ನಿರ್ವಹಿಸಿದರು.

ಗುಣಾತ್ಮಕ ವ್ಯಕ್ತ್ತಿತ್ವದ ತಾರಖಂಡ ಸೀತಾರಾಮ ಹೆಗಡೆ
ವ್ಯಕ್ತಿಯೊಬ್ಬತನ್ನ ಪ್ರಭಾವದಿಂದಲೇ ಸುತ್ತಮುತ್ತಲಿನ ಜನಜೀವನವನ್ನು ಬದಲಿಸುವ ಶಕ್ತಿಯನ್ನು ಹೊಂದಿರುತ್ತಾನೆ. ಹಲವಾರು ಅಡೆತಡೆಗಳ ಮಧ್ಯದಲ್ಲಿಯೆ ಬದುಕಿನಅಪ್ರತಿಮ ಪ್ರೀತಿಯಿಂದಾಗಿಯೇ ಸಮಾಜಕ್ಕೆಆದರ್ಶಪ್ರಾಯವಾಗಿ ಬದುಕಿದವರು ತಾರಖಂಡ ಸೀತಾರಾಮ ಹೆಗಡೆಯವರು, ಯಕ್ಷಗಾನಅರ್ಥಗಾರಿಕೆ, ಪ್ರಸಂಗರಚನೆ, ವಿದ್ಯಾರ್ಥಿಗಳಿಗೆ ವಿದ್ಯಾದಾನ, ಧಾರ್ಮಿಕ ಮುಖಂಡತ್ವ ಹಾಗು ಸ್ವಾತಂತ್ರö್ಯ ಹೋರಾಟ ಮುಂತಾದ ಬೇರೆ ಬೇರೆ ನೆಲೆಗಳಲ್ಲಿ ಗಟ್ಟಿಹೆಜ್ಜೆಯನ್ನು ಮೂಡಿಸುವುದರ ಮೂಲಕ ತಮ್ಮ ಶಾಶ್ವತವಾದಛಾಪನ್ನುಒತ್ತಿ ಹೋಗಿದ್ದಾರೆ. ಇಂತಹಉದ್ದಾಮರನ್ನು ನೆನಪಿಸುವುದುಅರ್ಥಪೂರ್ಣಕಾರ್ಯಎಂದುಕವಿಯಾದ ವೆಂಕಟರಮಣ ಹೆಗಡೆತಾರಖಂಡ ಹೇಳಿದರು.

ಸಿದ್ದಾಪುರ ತಾಲೂಕಿನಕಲಾಭಾಸ್ಕರ ಸಂಸ್ಥೆಯವರು ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯವರ ಸಹಯೋಗದೊಂದಿಗೆ ಹಮ್ಮಿಕೊಂಡಇಟಗಿ ಯಕ್ಷೋ ತ್ಸವ-೨೦೨೨ ರಎರಡನೇ ದಿನದಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ತಮ್ಮಅಜ್ಜತಾರಖಂಡ ಸೀತಾರಾಮ ಹೆಗಡೆಯವರನ್ನು ಸ್ಮರಿಸುತ್ತಕಲಾಭಾಸ್ಕರದ ಸ್ಥಳೀಯ ಕವಿಗಳನ್ನು ನೆನಪಿಸುವ ಹಾಗೂ ಗೌರವಿಸುವಕಾರ್ಯವನ್ನು ಶ್ಲಾಘಿಸಿದರು. ಸಂಸ್ಥೆಯಅಧ್ಯಕ್ಷಇಟಗಿ ಮಹಾಬಲೇಶ್ವರ ಭಟ್ಟ ಸ್ವಾಗತಿಸಿದರು.ನಂತರತಾರಖಂಡ ಸೀತಾರಾಮ ಹೆಗಡೆ ರಚಿಸಿದ ಭೀಷ್ಮಪ್ರಪಂಚದೊಳಗಣ “ಪಾಂಡು ಅವಸಾನ” ಎಂಬ ಯಕ್ಷಗಾನ ಪ್ರಸಂಗವು ನಡೆಯಿತು.ಭಾಗವತರಾಗಿಗಜಾನನ ಭಟ್ಟ ತುಳಿಗೇರೆ, ಮದ್ದಳೆವದಕರಾಗಿ ಮೂಡಗಾರು ಶ್ರೀಪಾದ ಭಟ್ಟ, ಚಂಡೆವಾದಕರಾಗಿ ಸಂಪ ಲಕ್ಷಿö್ಮನಾರಾಯಣ ಭಾಗವಹಿಸಿದರು.ಪಾಂಡುಚಕ್ರವರ್ತಿಯಾಗಿ ಅಶೋಕ ಭಟ್ಟ ಸಿದ್ದಾಪುರ, ಕುಂತಿಯಾಗಿ ನಾಗಪತಿ ಹೆಗಡೆಕೊಪ್ಪ, ಮಾದ್ರಿಯಾಗಿಇಟಗಿ ಮಹಾಬಲೇಶ್ವರ, ವನಪಾಲಕನಾಗಿ ವೆಂಕಟರಮಣ ಹೆಗಡೆ ಮಾದನಕಳ್, ಭೀಷ್ಮಾಚಾರ್ಯನಗಿಗುಂಜಗೋಡುಗಣಪತಿ ಹೆಗಡೆಕಿಂದಮ ಮಹರ್ಷಿಯಾಗಿ ವಿನಾಯಕ ಹೆಗಡೆಕವಲಕೊಪ್ಪ ಮುಂತಾದವರು ವಿವಿಧ ಅಭಿನಯಿಸಿದರು. ಸ್ಥಳೀಯ ಕವಿಗಳ ಯಕ್ಷಗಾನ ಪ್ರದರ್ಶನವನ್ನು ನಡೆಸಿರುವುದು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *