ಹೆಸರಿಗೆ ಶಿಕ್ಷಕ, ಮಾಡುತ್ತಿದ್ದ ಕೆಲಸ ದೇವಸ್ಥಾನಗಳಿಂದ ವಸ್ತುಗಳನ್ನು ಲೂಟಿ ಮಾಡುವುದು!: ಶಾಲೆಯಿಂದ ಅಮಾನತು

ಶಿಕ್ಷಕ ವೃತ್ತಿ ಒಂದು ಶ್ರೇಷ್ಠವಾದ ವೃತ್ತಿ ಎಂಬುದು ಪ್ರಚಲಿತದಲ್ಲಿರುವ ಮಾತು. ಸಮಾಜವು ಜೀವನದ ಸದ್ಗುಣಗಳನ್ನು ಉತ್ತೇಜಿಸಲು ಮತ್ತು ಈ ದಿಕ್ಕಿನಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಶಿಕ್ಷಕರನ್ನು ಎದುರು ನೋಡುತ್ತದೆ.

Representional image

ಯಲ್ಲಾಪುರ (ಉತ್ತರ ಕನ್ನಡ) : ಶಿಕ್ಷಕ ವೃತ್ತಿ ಒಂದು ಶ್ರೇಷ್ಠವಾದ ವೃತ್ತಿ ಎಂಬುದು ಪ್ರಚಲಿತದಲ್ಲಿರುವ ಮಾತು. ಸಮಾಜವು ಜೀವನದ ಸದ್ಗುಣಗಳನ್ನು ಉತ್ತೇಜಿಸಲು ಮತ್ತು ಈ ದಿಕ್ಕಿನಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಶಿಕ್ಷಕರನ್ನು ಎದುರು ನೋಡುತ್ತದೆ.

ಆದರೆ ಇಲ್ಲೊಬ್ಬ ‘ಶಿಕ್ಷಕ’ ಹಾವೇರಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳ 18 ದೇವಸ್ಥಾನಗಳನ್ನು ಲೂಟಿ ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. ಪೂಜೆ ಹಾಗೂ ಇತರೆ ವಿಧಿವಿಧಾನಗಳಲ್ಲಿ ಬಳಸುತ್ತಿದ್ದ ಕಂಚು, ತಾಮ್ರ, ಬೆಳ್ಳಿಯಿಂದ ಮಾಡಿದ ಸುಮಾರು 19.20 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈತನಿಂದ 12 ಲಕ್ಷ ಮೌಲ್ಯದ ವಾಹನ ಹಾಗೂ 30 ಸಾವಿರ ಮೌಲ್ಯದ ದ್ವಿಚಕ್ರ ವಾಹನ, 2.29 ಲಕ್ಷ ನಗದು, 50 ಸಾವಿರ ಮೌಲ್ಯದ ದೇವರ ಅಲಂಕಾರಕ್ಕೆ ಬಳಸಿದ 9 ಗ್ರಾಂ ಚಿನ್ನಾಭರಣ ಹಾಗೂ 1.8 ಲಕ್ಷ ಮೌಲ್ಯದ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ.

ಹಾವೇರಿ ಜಿಲ್ಲೆಯ ಲಿಂಗದೇವರಕೊಪ್ಪದವನಾದ ವಸಂತಕುಮಾರ ತಂಬಕಡ್ ಆರೋಪಿಯಾಗಿದ್ದು, ಬ್ಯಾಡಗಿ ತಾಲೂಕಿನ ಗಲಪೂಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪಾಠ ಮಾಡುತ್ತಿದ್ದಾನೆ. ವಸಂತ್ ತನ್ನ ಸಹಚರ, ಹಮಾಲಿ ಕೆಲಸ ಮಾಡುವ ಸಲೀಂ (28) ಎಂಬಾತನ ಜೊತೆ ಸೇರಿ ಕಳ್ಳತನ ನಡೆಸಿದ್ದ ಎನ್ನಲಾಗಿದೆ.

ಕಳ್ಳತನ ಆರೋಪದ ಮೇಲೆ ಶಿಕ್ಷಕನ ಅಮಾನತು: ಮುಖ್ಯಶಿಕ್ಷಕ
ವಸಂತ್ ಕುಮಾರ್ ಮತ್ತು ಸಲೀಂ ಶಿರಸಿ ಗ್ರಾಮಾಂತರ, ಬನವಾಸಿ, ಯಲ್ಲಾಪುರ, ಅಂಕೋಲಾ, ಶಿವಮೊಗ್ಗದ ರಿಪ್ಪನಪೇಟೆ ಹೊಸನಗರ, ಹಂಸಭಾವಿ, ಹಿರೇಕೆರೂರು ಹಾಗೂ ಹಾವೇರಿ ಗ್ರಾಮಾಂತರ ತಾಲೂಕಿನ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡಿದ್ದಾರೆ. ಇಬ್ಬರು ಕಳೆದ ಮೂರು ವರ್ಷಗಳಿಂದ ಈ ದುಷ್ಕೃತ್ಯ ನಡೆಸುತ್ತಿದ್ದಾರೆ. ಇದುವರೆಗೆ ಇವರ ವಿರುದ್ಧ 18 ಪ್ರಕರಣಗಳು ಪತ್ತೆಯಾಗಿವೆ. ಹೆಚ್ಚಿನ ಪ್ರಕರಣಗಳು ಮತ್ತು ಹೆಚ್ಚಿನ ಜನರು ಇದರಲ್ಲಿ ಭಾಗಿಯಾಗಿರುವ ಶಂಕೆಯಿದೆ ಎಂದು ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಹೇಳಿದ್ದಾರೆ. 

ದೇವಸ್ಥಾನಗಳಲ್ಲಿ ನಡೆಯುತ್ತಿರುವ ಸರಣಿ ಕಳ್ಳತನ ಉತ್ತರ ಕನ್ನಡ ಪೊಲೀಸರನ್ನು ಕಂಗೆಡಿಸಿತ್ತು. ಪ್ರಕರಣಗಳ ತನಿಖೆಗೆ ಎಸ್ಪಿ ವಿಷ್ಣುವರ್ಧನ್ ತಂಡ ರಚಿಸಿದ್ದರು. ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಬಲೆ ಬೀಸಿದ್ದಾರೆ. ಶಿರಸಿ ಗ್ರಾಮಾಂತರ ಪ್ರದೇಶ ಹಾಗೂ ರಾಂಪುರದಲ್ಲಿ ಕೆಲಸ ಮಾಡುತ್ತಿದ್ದ ವಸಂತ್ ವಿದ್ಯಾರ್ಥಿಗಳಿಗೆ ಕನ್ನಡ ಮತ್ತಿತರ ವಿಷಯಗಳನ್ನು ಬೋಧಿಸುತ್ತಿದ್ದು, ಬ್ಯಾಡಗಿ ತಾಲೂಕಿನಲ್ಲಿ ಕೆಲಸ ಮಾಡುತ್ತಿದ್ದ. ಆತನ ತವರು ಜಿಲ್ಲೆಗೆ ವರ್ಗಾವಣೆಗೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳಾ ಸಹೋದ್ಯೋಗಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದರೂ, ಕಳ್ಳತನದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕೆಲವೇ ದಿನಗಳ ಹಿಂದೆ ಆತನನ್ನು ಅಮಾನತುಗೊಳಿಸಲಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಹೇಳಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *